ಲೆ. ಗವರ್ನರ್ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಕುರಿತು ಸಿಬಿಐ ತನಿಖೆಗೆ ಆದೇಶಿಸಿರುವ ಬಗ್ಗೆ ಪ್ರಕಟಿಸಲಾಗಿದೆ. ಹಗರಣದಲ್ಲಿ ಭಾಗಿಯಾದವರನ್ನು ಶೀಘ್ರದಲ್ಲೇ ಕಾನೂನಿನ ಮುಂದೆ ನಿಲ್ಲಿಸಲಾಗುವುದು. ಭವಿಷ್ಯದ ಹಿತದೃಷ್ಟಿಯಲ್ಲಿ ಇದೊಂದು ಪ್ರಮುಖ ಕ್ರಮವಾಗಿದೆ. ನೂತನ ನೇಮಕಾತಿ ಬಗ್ಗೆ ಸರ್ಕಾರವು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಟ್ವೀಟ್ನಲ್ಲಿ ತಿಳಿಸಿದೆ.
ಹಿಂದೆ ಪೊಲೀಸ್ ಇಲಾಖೆಯೇ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಸೇವಾ ನೇಮಕಾತಿ ಇಲಾಖೆ (ಜೆಕೆಎಸ್ಎಸ್ಬಿ) ಯ ವತಿಯಿಂದ ಲೆ. ಗವರ್ನರ್ ಮನೋಜ್ ಸಿನ್ಹಾ ನೇತೃತ್ವದ ರಾಜ್ಯ ಸರ್ಕಾರವು ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು. ನೇಮಕಾತಿಯಲ್ಲಿ ಪಾರದರ್ಶಕತೆಗೆ ಒತ್ತುಕೊಟ್ಟು ಸರ್ಕಾರವೇ ಪರೀಕ್ಷೆಯನ್ನು ನಡೆಸುತ್ತಿರುವುದಾಗಿ ಹೇಳಿತ್ತು.