<p><strong>ಶ್ರೀನಗರ:</strong>ಜಮ್ಮು ಮತ್ತು ಕಾಶ್ಮಿರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿ ರದ್ದುಗೊಳಿಸಿ, ರಾಜ್ಯ ವಿಭಜನೆ ಮಾಡಿ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಣೆ ಮಾಡಿದ ಬಳಿಕ, ಕಣಿವೆ ನಾಡಿನಲ್ಲಿ ಬಿಗುವಿನ ವಾತಾವರಣ ತಿಳಿಯಾಗುತ್ತಿದೆ. ಶುಕ್ರವಾರ ಶಾಲೆಗಳು ಪುನರಾರಂಭವಾಗಿದ್ದು, ಮಸೀದಿಗಳಲ್ಲಿ ಜನ ಪ್ರಾರ್ಥನೆ ಸಲ್ಲಿಸಿದ್ದಾರೆ.</p>.<p>ಕಥುವಾದಲ್ಲಿ ಶುಕ್ರವಾರ ಬೆಳಿಗ್ಗೆ ಶಾಲೆ ಪುನರಾರಂಭವಾಗಿವೆ. ಪೋಷಕರು ಮಕ್ಕಳನ್ನು ಶಾಲೆಗೆ ಕರೆತಂದರು. ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.</p>.<p><strong>ಶುಕ್ರವಾರದ ಪ್ರಾರ್ಥನೆ ಸಲ್ಲಿಕೆ</strong></p>.<p>ಮುಸ್ಲಿಂ ಸಮಾಜದ ಜನರು ಶುಕ್ರವಾರ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು ಎಂದು ಎಎನ್ಐ ಟ್ವೀಟ್ ಮಾಡಿದೆ.</p>.<p>370 ವಿಧಿ ರದ್ದುಗೊಳಿಸುವುದಕ್ಕೂ ಮೊದಲು ಮುನ್ನೆಚ್ಚರಿಕೆ ಕ್ರಮವಾಗಿಭದ್ರತೆ ದೃಷ್ಟಿಯಿಂದ ಹೆಚ್ಚಿನ ಸೇನೆಯನ್ನು ನಿಯೋಜಿಸಲಾಗಿತ್ತು. ಅಗತ್ಯವಿದ್ದಕಡೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ಈಗ ಜನಜೀವನ ಸಜ ಸ್ಥಿತಿಗೆ ಮರಳುತ್ತಿದ್ದು, ಗುರುವಾರ ಮನೆಯಿಂದ ಹೊರ ಬಂದ ನಾಗರಿಕರು ಅಗತ್ಯ ವಸ್ತುಗಳನ್ನು ಖರೀದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong>ಜಮ್ಮು ಮತ್ತು ಕಾಶ್ಮಿರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿ ರದ್ದುಗೊಳಿಸಿ, ರಾಜ್ಯ ವಿಭಜನೆ ಮಾಡಿ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಣೆ ಮಾಡಿದ ಬಳಿಕ, ಕಣಿವೆ ನಾಡಿನಲ್ಲಿ ಬಿಗುವಿನ ವಾತಾವರಣ ತಿಳಿಯಾಗುತ್ತಿದೆ. ಶುಕ್ರವಾರ ಶಾಲೆಗಳು ಪುನರಾರಂಭವಾಗಿದ್ದು, ಮಸೀದಿಗಳಲ್ಲಿ ಜನ ಪ್ರಾರ್ಥನೆ ಸಲ್ಲಿಸಿದ್ದಾರೆ.</p>.<p>ಕಥುವಾದಲ್ಲಿ ಶುಕ್ರವಾರ ಬೆಳಿಗ್ಗೆ ಶಾಲೆ ಪುನರಾರಂಭವಾಗಿವೆ. ಪೋಷಕರು ಮಕ್ಕಳನ್ನು ಶಾಲೆಗೆ ಕರೆತಂದರು. ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.</p>.<p><strong>ಶುಕ್ರವಾರದ ಪ್ರಾರ್ಥನೆ ಸಲ್ಲಿಕೆ</strong></p>.<p>ಮುಸ್ಲಿಂ ಸಮಾಜದ ಜನರು ಶುಕ್ರವಾರ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು ಎಂದು ಎಎನ್ಐ ಟ್ವೀಟ್ ಮಾಡಿದೆ.</p>.<p>370 ವಿಧಿ ರದ್ದುಗೊಳಿಸುವುದಕ್ಕೂ ಮೊದಲು ಮುನ್ನೆಚ್ಚರಿಕೆ ಕ್ರಮವಾಗಿಭದ್ರತೆ ದೃಷ್ಟಿಯಿಂದ ಹೆಚ್ಚಿನ ಸೇನೆಯನ್ನು ನಿಯೋಜಿಸಲಾಗಿತ್ತು. ಅಗತ್ಯವಿದ್ದಕಡೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ಈಗ ಜನಜೀವನ ಸಜ ಸ್ಥಿತಿಗೆ ಮರಳುತ್ತಿದ್ದು, ಗುರುವಾರ ಮನೆಯಿಂದ ಹೊರ ಬಂದ ನಾಗರಿಕರು ಅಗತ್ಯ ವಸ್ತುಗಳನ್ನು ಖರೀದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>