<p><strong>ಶ್ರೀನಗರ</strong>: ಪಹಲ್ಗಾಮ್ ದಾಳಿ ಬಳಿಕ ಕುಸಿತಗೊಂಡಿರುವ ಜಮ್ಮು–ಕಾಶ್ಮೀರದ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸುವ ಭಾಗವಾಗಿ ಬುಧವಾರ ಸುಪ್ರಸಿದ್ಧ ದಾಲ್ ಸರೋವರದಲ್ಲಿ ಶಿಕಾರ ರೇಸ್ ಆಯೋಜಿಸಲಾಗಿತ್ತು. </p>.<p>ಚಂಡೀಗಢ ಮೂಲದ ಖಾಸಗಿ ಕಾಲೇಜುಗಳ ಕೆಲವು ಗುಂಪುಗಳು ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದವು. ಜಮ್ಮು–ಕಾಶ್ಮೀರ ಶಿಕ್ಷಣ ಸಚಿವೆ ಸಕೀನಾ ಇಟೂ ಅವರು ರೇಸ್ಗೆ ಚಾಲನೆ ನೀಡಿದರು.</p>.<p class="title">ಕಾರ್ಯಕ್ರಮ ಆಯೋಜಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಸಿಬ್ಬಂದಿಯನ್ನು ಶ್ಲಾಘಿಸಿದ ಸಕೀನಾ,‘ ಇದು ಬರೀ ರೇಸ್ ಅಲ್ಲ. ಶಾಂತಿ, ಏಕತೆ ಹಾಗೂ ಜಮ್ಮು–ಕಾಶ್ಮೀರದ ಅವರ್ಣೀಯ ಚೆಲುವಿನ ಸಂಭ್ರಮ’ ಎಂದು ಬಣ್ಣಿಸಿದರು.</p>.<p class="title">ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದು ಪ್ರವಾಸಿಗರಲ್ಲಿ ಭೀತಿ ಹುಟ್ಟಿಸಿದ್ದು, ಪರಿಣಾಮ ಕಣಿವೆ ರಾಜ್ಯದ ಪ್ರವಾಸೋದ್ಯಮಕ್ಕೂ ಪೆಟ್ಟು ಬಿದ್ದಿತ್ತು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ವಿವಿಧ ಕ್ರಮ ಕೈಗೊಂಡಿರುವಂತೆಯೇ ಶಿಕಾರ ರೇಸ್ ಆಯೋಜನೆಗೊಂಡಿರುವುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಪಹಲ್ಗಾಮ್ ದಾಳಿ ಬಳಿಕ ಕುಸಿತಗೊಂಡಿರುವ ಜಮ್ಮು–ಕಾಶ್ಮೀರದ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸುವ ಭಾಗವಾಗಿ ಬುಧವಾರ ಸುಪ್ರಸಿದ್ಧ ದಾಲ್ ಸರೋವರದಲ್ಲಿ ಶಿಕಾರ ರೇಸ್ ಆಯೋಜಿಸಲಾಗಿತ್ತು. </p>.<p>ಚಂಡೀಗಢ ಮೂಲದ ಖಾಸಗಿ ಕಾಲೇಜುಗಳ ಕೆಲವು ಗುಂಪುಗಳು ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದವು. ಜಮ್ಮು–ಕಾಶ್ಮೀರ ಶಿಕ್ಷಣ ಸಚಿವೆ ಸಕೀನಾ ಇಟೂ ಅವರು ರೇಸ್ಗೆ ಚಾಲನೆ ನೀಡಿದರು.</p>.<p class="title">ಕಾರ್ಯಕ್ರಮ ಆಯೋಜಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಸಿಬ್ಬಂದಿಯನ್ನು ಶ್ಲಾಘಿಸಿದ ಸಕೀನಾ,‘ ಇದು ಬರೀ ರೇಸ್ ಅಲ್ಲ. ಶಾಂತಿ, ಏಕತೆ ಹಾಗೂ ಜಮ್ಮು–ಕಾಶ್ಮೀರದ ಅವರ್ಣೀಯ ಚೆಲುವಿನ ಸಂಭ್ರಮ’ ಎಂದು ಬಣ್ಣಿಸಿದರು.</p>.<p class="title">ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದು ಪ್ರವಾಸಿಗರಲ್ಲಿ ಭೀತಿ ಹುಟ್ಟಿಸಿದ್ದು, ಪರಿಣಾಮ ಕಣಿವೆ ರಾಜ್ಯದ ಪ್ರವಾಸೋದ್ಯಮಕ್ಕೂ ಪೆಟ್ಟು ಬಿದ್ದಿತ್ತು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ವಿವಿಧ ಕ್ರಮ ಕೈಗೊಂಡಿರುವಂತೆಯೇ ಶಿಕಾರ ರೇಸ್ ಆಯೋಜನೆಗೊಂಡಿರುವುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>