<p><strong>ಮುಂಬೈ</strong>: ಜಮ್ಮು–ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿರುವ ಪುಣೆ ಮೂಲದ ಜಗದಾಳೆ ಕುಟುಂಬದ ನೆರವಿಗೆ ಧಾವಿಸಿದ್ದಾಗಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಹೇಳಿದೆ.</p>.<p>‘ಜಗದಾಳೆ ಕುಟುಂಬಕ್ಕೆ ಎಲ್ಲ ನೆರವು ನೀಡುತ್ತೇವೆ’ ಎಂದು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಉಗ್ರರ ದಾಳಿಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿ ಅವಲೋಕಿಸುವುದಕ್ಕಾಗಿ ನಡೆದ ಸಭೆ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇರಲಿದೆ ಎಂದು ನಾನು ಭರವಸೆ ನೀಡುತ್ತೇನೆ. ಈ ದುಷ್ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರಮ ತೆಗೆದುಕೊಳ್ಳುವರು’ ಎಂದು ಶಿಂದೆ ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಪುಣೆಯ ಅಸಾವರಿ ಜಗದಾಳೆ, ಪ್ರಗತಿ ಜಗದಾಳೆ, ಸಂತೋಷ್ ಜಗದಾಳೆ, ಕೌಸ್ತುಭ ಜಗದಾಳೆ ಹಾಗೂ ಸಂಗೀತಾ ಗಬೋಟೆ ಜಮ್ಮು–ಕಾಶ್ಮೀರಕ್ಕೆ ತೆರಳಿದ್ದು, ಈ ಪೈಕಿ ಸಂತೋಷ್ ಹಾಗೂ ಕೌಸ್ತುಭ ಅವರಿಗೆ ಗುಂಡು ತಗುಲಿ, ಗಾಯಗಳಾಗಿವೆ.</p>.<p><strong>ಆಗ್ರಹ</strong>: ಉಗ್ರರ ದಾಳಿಯಿಂದ ಗಾಯಗೊಂಡಿರುವ ಇಬ್ಬರು ಸೇರಿದಂತೆ ಮಹಾರಾಷ್ಟ್ರದ ಕುಟುಂಬಕ್ಕೆ ನೆರವು ನೀಡುವಂತೆ ಜಮ್ಮು–ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಎನ್ಸಿಪಿ(ಶರದ್ ಪವಾರ್) ಕಾರ್ಯಾಧ್ಯಕ್ಷೆ ಹಾಗೂ ಸಂಸದೆ ಸುಪ್ರಿಯಾ ಸುಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಜಮ್ಮು–ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿರುವ ಪುಣೆ ಮೂಲದ ಜಗದಾಳೆ ಕುಟುಂಬದ ನೆರವಿಗೆ ಧಾವಿಸಿದ್ದಾಗಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಹೇಳಿದೆ.</p>.<p>‘ಜಗದಾಳೆ ಕುಟುಂಬಕ್ಕೆ ಎಲ್ಲ ನೆರವು ನೀಡುತ್ತೇವೆ’ ಎಂದು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಉಗ್ರರ ದಾಳಿಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿ ಅವಲೋಕಿಸುವುದಕ್ಕಾಗಿ ನಡೆದ ಸಭೆ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇರಲಿದೆ ಎಂದು ನಾನು ಭರವಸೆ ನೀಡುತ್ತೇನೆ. ಈ ದುಷ್ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರಮ ತೆಗೆದುಕೊಳ್ಳುವರು’ ಎಂದು ಶಿಂದೆ ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಪುಣೆಯ ಅಸಾವರಿ ಜಗದಾಳೆ, ಪ್ರಗತಿ ಜಗದಾಳೆ, ಸಂತೋಷ್ ಜಗದಾಳೆ, ಕೌಸ್ತುಭ ಜಗದಾಳೆ ಹಾಗೂ ಸಂಗೀತಾ ಗಬೋಟೆ ಜಮ್ಮು–ಕಾಶ್ಮೀರಕ್ಕೆ ತೆರಳಿದ್ದು, ಈ ಪೈಕಿ ಸಂತೋಷ್ ಹಾಗೂ ಕೌಸ್ತುಭ ಅವರಿಗೆ ಗುಂಡು ತಗುಲಿ, ಗಾಯಗಳಾಗಿವೆ.</p>.<p><strong>ಆಗ್ರಹ</strong>: ಉಗ್ರರ ದಾಳಿಯಿಂದ ಗಾಯಗೊಂಡಿರುವ ಇಬ್ಬರು ಸೇರಿದಂತೆ ಮಹಾರಾಷ್ಟ್ರದ ಕುಟುಂಬಕ್ಕೆ ನೆರವು ನೀಡುವಂತೆ ಜಮ್ಮು–ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಎನ್ಸಿಪಿ(ಶರದ್ ಪವಾರ್) ಕಾರ್ಯಾಧ್ಯಕ್ಷೆ ಹಾಗೂ ಸಂಸದೆ ಸುಪ್ರಿಯಾ ಸುಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>