<p><strong>ಜಮ್ಮು</strong>: ಜಮ್ಮು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಬಸ್ ಅಪಘಾತದಲ್ಲಿ 22 ಜನರು ಮೃತಪಟ್ಟು, 64 ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಸಾರಿಗೆ ಇಲಾಖೆಯ ಆರು ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಶುಕ್ರವಾರ ಅಮಾನತುಗೊಳಿಸಲಾಗಿದೆ.</p><p>ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಚಂದ್ರಾಕರ ಭಾರತಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಸಾರಿಗೆ ಇಲಾಖೆಯ ಕಾರ್ಯದರ್ಶಿ ನೀರಜ್ ಕುಮಾರ್ ಅವರು, ಕರ್ತವ್ಯಲೋಪದ ಆರೋಪದಡಿ ಕಠುವಾ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿದ್ದಾರೆ.</p><p>ರಂಜೀವ್ ಭಾಸಿನ್ (ಮೋಟರ್ ವಾಹನ ಇನ್ಸ್ಪೆಕ್ಟರ್), ಸುಮಿತ್ ಮಾಗೋತ್ರಾ (ಕಿರಿಯ ಸಹಾಯಕ) ಹಾಗೂ ಬಹುಕಾರ್ಯ ವಿಭಾಗದ ಸಿಬ್ಬಂದಿ (ಎಂಟಿಎಸ್) ಅಶ್ವನಿ ಕುಮಾರ್, ಅಮನ್ ಕುಮಾರ್, ಕೇಶವ್ ಸಿಂಗ್ ಮತ್ತು ರಾಕೇಶ್ ಕುಮಾರ್ ಅಮಾನತುಗೊಂಡವರು.</p><p>ಜಮ್ಮು ಜಿಲ್ಲಾ ಮ್ಯಾಜಿಸ್ಟ್ರೇಟ್ ಈಗಾಗಲೇ ಈ ಅಪಘಾತದ ಬಗ್ಗೆ ಮ್ಯಾಜಿಸ್ಟ್ರಿಯಲ್ ತನಿಖೆ ಆರಂಭಿಸಿದ್ದಾರೆ.</p><p>ಹರಿಯಾಣದ ಕುರುಕ್ಷೇತ್ರದಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇಗುಲಕ್ಕೆ ಗುರುವಾರ 86 ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಜಮ್ಮು–ಪೂಂಛ್ ಹೆದ್ದಾರಿಯಿಂದ 150 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಜಮ್ಮು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಬಸ್ ಅಪಘಾತದಲ್ಲಿ 22 ಜನರು ಮೃತಪಟ್ಟು, 64 ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಸಾರಿಗೆ ಇಲಾಖೆಯ ಆರು ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಶುಕ್ರವಾರ ಅಮಾನತುಗೊಳಿಸಲಾಗಿದೆ.</p><p>ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಚಂದ್ರಾಕರ ಭಾರತಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಸಾರಿಗೆ ಇಲಾಖೆಯ ಕಾರ್ಯದರ್ಶಿ ನೀರಜ್ ಕುಮಾರ್ ಅವರು, ಕರ್ತವ್ಯಲೋಪದ ಆರೋಪದಡಿ ಕಠುವಾ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿದ್ದಾರೆ.</p><p>ರಂಜೀವ್ ಭಾಸಿನ್ (ಮೋಟರ್ ವಾಹನ ಇನ್ಸ್ಪೆಕ್ಟರ್), ಸುಮಿತ್ ಮಾಗೋತ್ರಾ (ಕಿರಿಯ ಸಹಾಯಕ) ಹಾಗೂ ಬಹುಕಾರ್ಯ ವಿಭಾಗದ ಸಿಬ್ಬಂದಿ (ಎಂಟಿಎಸ್) ಅಶ್ವನಿ ಕುಮಾರ್, ಅಮನ್ ಕುಮಾರ್, ಕೇಶವ್ ಸಿಂಗ್ ಮತ್ತು ರಾಕೇಶ್ ಕುಮಾರ್ ಅಮಾನತುಗೊಂಡವರು.</p><p>ಜಮ್ಮು ಜಿಲ್ಲಾ ಮ್ಯಾಜಿಸ್ಟ್ರೇಟ್ ಈಗಾಗಲೇ ಈ ಅಪಘಾತದ ಬಗ್ಗೆ ಮ್ಯಾಜಿಸ್ಟ್ರಿಯಲ್ ತನಿಖೆ ಆರಂಭಿಸಿದ್ದಾರೆ.</p><p>ಹರಿಯಾಣದ ಕುರುಕ್ಷೇತ್ರದಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇಗುಲಕ್ಕೆ ಗುರುವಾರ 86 ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಜಮ್ಮು–ಪೂಂಛ್ ಹೆದ್ದಾರಿಯಿಂದ 150 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>