<p><strong>ಪೂಂಚ್/ ಜಮ್ಮು</strong>: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಆರಂಭವಾದ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ನಿಲ್ಲುವದೂ ಇಲ್ಲ, ನಿಧಾನವಾಗುವುದೂ ಇಲ್ಲ. ಭಾರತಕ್ಕೆ ಹಾನಿ ಮಾಡಲು ಯತ್ನಿಸಿದವರು ಬಲವಾದ ಮತ್ತು ಪರಿಣಾಮಕಾರಿ ಆಘಾತವನ್ನೇ ಎದುರಿಸಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದರು.</p><p>ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ಗೆ ಭೇಟಿ ನೀಡಿರುವ ಶಾ, ಇತ್ತೀಚೆಗೆ ನಡೆದ ಕಹಿ ಘಟನೆಗಳಿಂದ ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ಆದರೆ ಆದಷ್ಟು ಬೇಗ ಮತ್ತೆ ಮುಂದುವರಿಯಲಿದೆ ಎಂದರು.</p><p>ಇತ್ತೀಚೆಗೆ ನಡೆದ ಭಾರತ–ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಭದ್ರತಾ ಪಡೆ, ನಾಗರಿಕರು ತೋರಿದ ಧೈರ್ಯವನ್ನು ಶ್ಲಾಘಿಸಿದ ಅವರು, ಹಿರಿಯ ಅಧಿಕಾರಿಗಳ ತ್ಯಾಗವನ್ನು ನೆನಪಿಸಿಕೊಂಡರು.</p><p>2014ರಲ್ಲಿ ಮೋದಿಯವರು ಪ್ರಧಾನಿಯಾಗಿ ಕಚೇರಿಗೆ ಬಂದ ತಕ್ಷಣ ನಾಗರಿಕರನ್ನು ರಕ್ಷಿಸಲು ಗಡಿಗಳಲ್ಲಿ ಬಂಕರ್ಗಳನ್ನು ಸ್ಥಾಪಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದರು. ಇಲ್ಲಿಯವರೆಗೆ ಸುಮಾರು 9,500 ಬಂಕರ್ಗಳನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಕರ್ಗಳನ್ನು ಸ್ಥಾಪಿಸುವುದಾಗಿ ಶಾ ಹೇಳಿದರು.</p><p>ಇಡೀ ದೇಶ, ಸರ್ಕಾರ ಮತ್ತು ಜಮ್ಮು ಕಾಶ್ಮೀರ ರಾಜ್ಯದ ಜನರು ಕಲ್ಲಿನಂತೆ ನಿಮ್ಮೊಂದಿಗೆ ನಿಂತಿದ್ದೇವೆ. ಪಾಕಿಸ್ತಾನ ಮತ್ತು ಉಗ್ರರು ನಡೆಸಿದ ಕೃತ್ಯಗಳು ಭಾರತದ ರಕ್ಷಣಾ ನೀತಿಯನ್ನು ಇನ್ನಷ್ಟು ಬಲಗೊಳಿಸಿದೆ ಎಂದು ಗಡಿ ಪ್ರದೇಶದಲ್ಲಿರುವ ಜನರಿಗೆ ಧೈರ್ಯ ತುಂಬಿದರು.</p><p>ಪಾಕಿಸ್ತಾನದ ದಾಳಿಗೆ ತುತ್ತಾದ ಪೂಂಚ್ನ ವಿವಿಧ ಪ್ರದೇಶಗಳಿಗೆ ಶಾ ಭೇಟಿ ನೀಡಿದರು. ಹಾನಿಗೀಡಾದ ಮನೆ, ಉದ್ಯಮ ಮತ್ತು ಧಾರ್ಮಿಕ ಸ್ಥಳಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ವಿಶೇಷ ಪ್ಯಾಕೇಜ್ ನೀಡುವುದಾಗಿ ಭರವಸೆ ನೀಡಿದರು. </p><p>‘ಪಾಕ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಈಗಾಗಲೇ ನೇಮಕಾತಿ ಪತ್ರವನ್ನು ನೀಡಲಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡ ನಷ್ಟವನ್ನು ಭರಿಸುವುದು ಅಸಾಧ್ಯ, ಆದರೆ ಕುಟುಂಬದ ಹೊರೆಯನ್ನು ಹಂಚಿಕೊಳ್ಳುವ ಪ್ರಯತ್ನ ಮಾಡಿದ್ದೇವೆ’ ಎಂದು ಶಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೂಂಚ್/ ಜಮ್ಮು</strong>: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಆರಂಭವಾದ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ನಿಲ್ಲುವದೂ ಇಲ್ಲ, ನಿಧಾನವಾಗುವುದೂ ಇಲ್ಲ. ಭಾರತಕ್ಕೆ ಹಾನಿ ಮಾಡಲು ಯತ್ನಿಸಿದವರು ಬಲವಾದ ಮತ್ತು ಪರಿಣಾಮಕಾರಿ ಆಘಾತವನ್ನೇ ಎದುರಿಸಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದರು.</p><p>ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ಗೆ ಭೇಟಿ ನೀಡಿರುವ ಶಾ, ಇತ್ತೀಚೆಗೆ ನಡೆದ ಕಹಿ ಘಟನೆಗಳಿಂದ ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ಆದರೆ ಆದಷ್ಟು ಬೇಗ ಮತ್ತೆ ಮುಂದುವರಿಯಲಿದೆ ಎಂದರು.</p><p>ಇತ್ತೀಚೆಗೆ ನಡೆದ ಭಾರತ–ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಭದ್ರತಾ ಪಡೆ, ನಾಗರಿಕರು ತೋರಿದ ಧೈರ್ಯವನ್ನು ಶ್ಲಾಘಿಸಿದ ಅವರು, ಹಿರಿಯ ಅಧಿಕಾರಿಗಳ ತ್ಯಾಗವನ್ನು ನೆನಪಿಸಿಕೊಂಡರು.</p><p>2014ರಲ್ಲಿ ಮೋದಿಯವರು ಪ್ರಧಾನಿಯಾಗಿ ಕಚೇರಿಗೆ ಬಂದ ತಕ್ಷಣ ನಾಗರಿಕರನ್ನು ರಕ್ಷಿಸಲು ಗಡಿಗಳಲ್ಲಿ ಬಂಕರ್ಗಳನ್ನು ಸ್ಥಾಪಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದರು. ಇಲ್ಲಿಯವರೆಗೆ ಸುಮಾರು 9,500 ಬಂಕರ್ಗಳನ್ನು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಕರ್ಗಳನ್ನು ಸ್ಥಾಪಿಸುವುದಾಗಿ ಶಾ ಹೇಳಿದರು.</p><p>ಇಡೀ ದೇಶ, ಸರ್ಕಾರ ಮತ್ತು ಜಮ್ಮು ಕಾಶ್ಮೀರ ರಾಜ್ಯದ ಜನರು ಕಲ್ಲಿನಂತೆ ನಿಮ್ಮೊಂದಿಗೆ ನಿಂತಿದ್ದೇವೆ. ಪಾಕಿಸ್ತಾನ ಮತ್ತು ಉಗ್ರರು ನಡೆಸಿದ ಕೃತ್ಯಗಳು ಭಾರತದ ರಕ್ಷಣಾ ನೀತಿಯನ್ನು ಇನ್ನಷ್ಟು ಬಲಗೊಳಿಸಿದೆ ಎಂದು ಗಡಿ ಪ್ರದೇಶದಲ್ಲಿರುವ ಜನರಿಗೆ ಧೈರ್ಯ ತುಂಬಿದರು.</p><p>ಪಾಕಿಸ್ತಾನದ ದಾಳಿಗೆ ತುತ್ತಾದ ಪೂಂಚ್ನ ವಿವಿಧ ಪ್ರದೇಶಗಳಿಗೆ ಶಾ ಭೇಟಿ ನೀಡಿದರು. ಹಾನಿಗೀಡಾದ ಮನೆ, ಉದ್ಯಮ ಮತ್ತು ಧಾರ್ಮಿಕ ಸ್ಥಳಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ವಿಶೇಷ ಪ್ಯಾಕೇಜ್ ನೀಡುವುದಾಗಿ ಭರವಸೆ ನೀಡಿದರು. </p><p>‘ಪಾಕ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಈಗಾಗಲೇ ನೇಮಕಾತಿ ಪತ್ರವನ್ನು ನೀಡಲಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡ ನಷ್ಟವನ್ನು ಭರಿಸುವುದು ಅಸಾಧ್ಯ, ಆದರೆ ಕುಟುಂಬದ ಹೊರೆಯನ್ನು ಹಂಚಿಕೊಳ್ಳುವ ಪ್ರಯತ್ನ ಮಾಡಿದ್ದೇವೆ’ ಎಂದು ಶಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>