<p><strong>ಶ್ರೀನಗರ:</strong> ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ಐವರು ಸರ್ಕಾರಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶಿಸಿದ್ದಾರೆ.</p><p>ಈ ಮೂಲಕ, ಸರ್ಕಾರಿ ವ್ಯವಸ್ಥೆಯ ಒಳಗಿದ್ದುಕೊಂಡು ಭಯೋತ್ಪಾದಕ ಜಾಲಕ್ಕೆ ಬೆಂಬಲ ನೀಡುವವರ ವಿರುದ್ಧದ ಅಭಿಯಾನವನ್ನು ಚುರುಕುಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸಂವಿಧಾನದ 311(2)(ಸಿ) ಪರಿಚ್ಛೇದದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಚ್ಛೇದವು ಇಲಾಖಾ ತನಿಖೆ ಇಲ್ಲದೇ ಸರ್ಕಾರಿ ಉದ್ಯೋಗಿಗಳ ವಜಾಕ್ಕೆ ಅವಕಾಶ ನೀಡುತ್ತದೆ.</p><p>‘ಕೆಲವು ಸರ್ಕಾರಿ ಉದ್ಯೋಗಿಗಳು ನಿಷೇಧಿತ ಲಷ್ಕರ್–ಎ–ತೊಯಬಾ ಮತ್ತು ಹಿಜ್ಬುಲ್ ಮುಜಾಹಿದೀನ್ ಜೊತೆ ಸಂಪರ್ಕ ಹೊಂದಿರುವ ಬಗ್ಗೆ ಗುಪ್ತಚರ ಮತ್ತು ತನಿಖಾ ಸಂಸ್ಥೆಗಳು ಮಾಹಿತಿ ನೀಡಿದ್ದವು’ ಎಂದು ಅವರು ತಿಳಿಸಿದರು.</p><p>ಲೆಫ್ಟಿನೆಂಟ್ ಗವರ್ನರ್ ಕಚೇರಿಯು 2021ರಿಂದ ಭಯೋತ್ಪಾದನೆ ಜಾಲಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಉಗ್ರ ಜಾಲದೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಪ್ರಮುಖ ಸರ್ಕಾರಿ ಉದ್ಯೋಗಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ಐವರು ಸರ್ಕಾರಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶಿಸಿದ್ದಾರೆ.</p><p>ಈ ಮೂಲಕ, ಸರ್ಕಾರಿ ವ್ಯವಸ್ಥೆಯ ಒಳಗಿದ್ದುಕೊಂಡು ಭಯೋತ್ಪಾದಕ ಜಾಲಕ್ಕೆ ಬೆಂಬಲ ನೀಡುವವರ ವಿರುದ್ಧದ ಅಭಿಯಾನವನ್ನು ಚುರುಕುಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸಂವಿಧಾನದ 311(2)(ಸಿ) ಪರಿಚ್ಛೇದದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಚ್ಛೇದವು ಇಲಾಖಾ ತನಿಖೆ ಇಲ್ಲದೇ ಸರ್ಕಾರಿ ಉದ್ಯೋಗಿಗಳ ವಜಾಕ್ಕೆ ಅವಕಾಶ ನೀಡುತ್ತದೆ.</p><p>‘ಕೆಲವು ಸರ್ಕಾರಿ ಉದ್ಯೋಗಿಗಳು ನಿಷೇಧಿತ ಲಷ್ಕರ್–ಎ–ತೊಯಬಾ ಮತ್ತು ಹಿಜ್ಬುಲ್ ಮುಜಾಹಿದೀನ್ ಜೊತೆ ಸಂಪರ್ಕ ಹೊಂದಿರುವ ಬಗ್ಗೆ ಗುಪ್ತಚರ ಮತ್ತು ತನಿಖಾ ಸಂಸ್ಥೆಗಳು ಮಾಹಿತಿ ನೀಡಿದ್ದವು’ ಎಂದು ಅವರು ತಿಳಿಸಿದರು.</p><p>ಲೆಫ್ಟಿನೆಂಟ್ ಗವರ್ನರ್ ಕಚೇರಿಯು 2021ರಿಂದ ಭಯೋತ್ಪಾದನೆ ಜಾಲಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಉಗ್ರ ಜಾಲದೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಪ್ರಮುಖ ಸರ್ಕಾರಿ ಉದ್ಯೋಗಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>