<p><strong>ಶ್ರೀನಗರ:</strong> ಜಮ್ಮು–ಕಾಶ್ಮೀರದ ಪುಲ್ವಾಮಾ ಹಾಗೂ ಶ್ರೀನಗರ ಜಿಲ್ಲೆಗಳಲ್ಲಿನ ಆಸ್ಪತ್ರೆಗಳಿಗೆ ಪೊಲೀಸರು ಸೋಮವಾರ ದಿಢೀರ್ ಭೇಟಿ ನೀಡಿದ್ದಲ್ಲದೇ, ಆಸ್ಪತ್ರೆಗಳಲ್ಲಿನ ಲಾಕರ್ಗಳ ಪರಿಶೀಲನೆ ನಡೆಸಿದ್ದಾರೆ. </p>.<p>ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಹಾಗೂ ‘ವೈಟ್ ಕಾಲರ್ ಭಯೋತ್ಪಾದಕ’ ಜಾಲಕ್ಕೆ ಸಂಬಂಧಿಸಿದ ಸ್ಫೋಟಕಗಳನ್ನು ವಶಪಡಿಸಿಕೊಂಡಿರುವ ಪ್ರಕರಣಗಳಿಂದಾಗಿ ಎಲ್ಲೆಡೆ ಭದ್ರತೆ, ಕಣ್ಗಾವಲು ಹೆಚ್ಚಿಸಿರುವಾಗಲೇ ಈ ಬೆಳವಣಿಗೆ ನಡೆದಿದೆ.</p>.<p class="title">ಆರೋಗ್ಯ ಸಂಸ್ಥೆಗಳಲ್ಲಿ ಪಾರದರ್ಶಕತೆ ಹಾಗೂ ನಗರದಲ್ಲಿ ಭದ್ರತಾ ಶಿಷ್ಠಾಚಾರಗಳನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. </p>.<p class="title">ಅಲ್ಲದೇ, ಜಿಲ್ಲಾ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಒದಗಿಸಿರುವ ಲಾಕರ್ಗಳನ್ನು ದುರುಪಯೋಗವಾಗದಂತೆ ತಡೆಗಟ್ಟಲು ಈ ಕಾರ್ಯಾಚರಣೆ ನಡೆಸಲಾಗಿದೆ. ಆಸ್ಪತ್ರೆಗಳಲ್ಲಿನ ಆಂತರಿಕ ಭದ್ರತೆಗಾಗಿ ಆಗಾಗ ಈ ರೀತಿಯ ಶೋಧ ಕಾರ್ಯಾಚರಣೆಗಳು ನಡೆಯಲಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p class="title">ನಗರದ ರಾಸಾಯನಿಕ ಹಾಗೂ ರಸಗೊಬ್ಬರ ಮಳಿಗೆಗಳಲ್ಲೂ ಶ್ರೀನಗರ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು–ಕಾಶ್ಮೀರದ ಪುಲ್ವಾಮಾ ಹಾಗೂ ಶ್ರೀನಗರ ಜಿಲ್ಲೆಗಳಲ್ಲಿನ ಆಸ್ಪತ್ರೆಗಳಿಗೆ ಪೊಲೀಸರು ಸೋಮವಾರ ದಿಢೀರ್ ಭೇಟಿ ನೀಡಿದ್ದಲ್ಲದೇ, ಆಸ್ಪತ್ರೆಗಳಲ್ಲಿನ ಲಾಕರ್ಗಳ ಪರಿಶೀಲನೆ ನಡೆಸಿದ್ದಾರೆ. </p>.<p>ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಹಾಗೂ ‘ವೈಟ್ ಕಾಲರ್ ಭಯೋತ್ಪಾದಕ’ ಜಾಲಕ್ಕೆ ಸಂಬಂಧಿಸಿದ ಸ್ಫೋಟಕಗಳನ್ನು ವಶಪಡಿಸಿಕೊಂಡಿರುವ ಪ್ರಕರಣಗಳಿಂದಾಗಿ ಎಲ್ಲೆಡೆ ಭದ್ರತೆ, ಕಣ್ಗಾವಲು ಹೆಚ್ಚಿಸಿರುವಾಗಲೇ ಈ ಬೆಳವಣಿಗೆ ನಡೆದಿದೆ.</p>.<p class="title">ಆರೋಗ್ಯ ಸಂಸ್ಥೆಗಳಲ್ಲಿ ಪಾರದರ್ಶಕತೆ ಹಾಗೂ ನಗರದಲ್ಲಿ ಭದ್ರತಾ ಶಿಷ್ಠಾಚಾರಗಳನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. </p>.<p class="title">ಅಲ್ಲದೇ, ಜಿಲ್ಲಾ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಒದಗಿಸಿರುವ ಲಾಕರ್ಗಳನ್ನು ದುರುಪಯೋಗವಾಗದಂತೆ ತಡೆಗಟ್ಟಲು ಈ ಕಾರ್ಯಾಚರಣೆ ನಡೆಸಲಾಗಿದೆ. ಆಸ್ಪತ್ರೆಗಳಲ್ಲಿನ ಆಂತರಿಕ ಭದ್ರತೆಗಾಗಿ ಆಗಾಗ ಈ ರೀತಿಯ ಶೋಧ ಕಾರ್ಯಾಚರಣೆಗಳು ನಡೆಯಲಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p class="title">ನಗರದ ರಾಸಾಯನಿಕ ಹಾಗೂ ರಸಗೊಬ್ಬರ ಮಳಿಗೆಗಳಲ್ಲೂ ಶ್ರೀನಗರ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>