<p><strong>ಶ್ರೀನಗರ:</strong> ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ತನಿಖಾ ಸಂಸ್ಥೆಯು (ಎಸ್ಐಎ) ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಮತ್ತು ಪುಲ್ವಾಮ ಜಿಲ್ಲೆಗಳ ಎರಡು ಸ್ಥಳಗಳಲ್ಲಿ ಬುಧವಾರ ಮುಂಜಾನೆ ದಾಳಿ ನಡೆಸಿದೆ.</p>.<p>2005ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ನ ವಿಭಾಗೀಯ ಕಮಾಂಡರ್ ಅಮೀನ್ ಬಾಬಾ ಪಾಕಿಸ್ತಾನಕ್ಕೆ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಎಸ್ಐಎ ವಕ್ತಾರರು ತಿಳಿಸಿದ್ದಾರೆ. ಮಾಜಿ ಶಾಸಕ ಗುಲ್ ರಫೀಕಿ ಮತ್ತು ಇತರರ ನೆರವಿನಿಂದ ಬಾಬಾ ಪರಾರಿಯಾಗಿದ್ದಾನೆ ಎಂದು ಅವರು ಹೇಳಿದ್ದಾರೆ.</p>.<p>ಆರೋಪಿಗಳು ಬಾಗಾಗೆ ನಕಲಿ ಪಾಸ್ಪೋರ್ಟ್ ವ್ಯವಸ್ಥೆ ಮಾಡಲು ಸಹಾಯ ಮಾಡಿದ್ದರು ಮತ್ತು ಆತನನ್ನು ಅನಂತನಾಗ್ನಿಂದ ಅಟಾರಿಗೆ ಆಗಿನ ಶಾಸಕರ ಅಧಿಕೃತ ವಾಹನದಲ್ಲಿ ಸಾಗಿಸಿದ್ದರು. ಇದರಿಂದಾಗಿ ಆತ ಪಾಕಿಸ್ತಾನ ತಲುಪುವುದು ಸಾಧ್ಯವಾಯಿತು ಎಂದು ವಕ್ತಾರರು ಹೇಳಿದ್ದಾರೆ.</p>.<p>ಈ ಬಗ್ಗೆ 2005 ರಲ್ಲಿ ಬಿಜ್ಬೆಹರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಅದನ್ನು 2023ರಲ್ಲಿ ಎಸ್ಐಎ ಕಾಶ್ಮೀರಕ್ಕೆ ವರ್ಗಾಯಿಸಲಾಯಿತು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ತನಿಖಾ ಸಂಸ್ಥೆಯು (ಎಸ್ಐಎ) ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಮತ್ತು ಪುಲ್ವಾಮ ಜಿಲ್ಲೆಗಳ ಎರಡು ಸ್ಥಳಗಳಲ್ಲಿ ಬುಧವಾರ ಮುಂಜಾನೆ ದಾಳಿ ನಡೆಸಿದೆ.</p>.<p>2005ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ನ ವಿಭಾಗೀಯ ಕಮಾಂಡರ್ ಅಮೀನ್ ಬಾಬಾ ಪಾಕಿಸ್ತಾನಕ್ಕೆ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಎಸ್ಐಎ ವಕ್ತಾರರು ತಿಳಿಸಿದ್ದಾರೆ. ಮಾಜಿ ಶಾಸಕ ಗುಲ್ ರಫೀಕಿ ಮತ್ತು ಇತರರ ನೆರವಿನಿಂದ ಬಾಬಾ ಪರಾರಿಯಾಗಿದ್ದಾನೆ ಎಂದು ಅವರು ಹೇಳಿದ್ದಾರೆ.</p>.<p>ಆರೋಪಿಗಳು ಬಾಗಾಗೆ ನಕಲಿ ಪಾಸ್ಪೋರ್ಟ್ ವ್ಯವಸ್ಥೆ ಮಾಡಲು ಸಹಾಯ ಮಾಡಿದ್ದರು ಮತ್ತು ಆತನನ್ನು ಅನಂತನಾಗ್ನಿಂದ ಅಟಾರಿಗೆ ಆಗಿನ ಶಾಸಕರ ಅಧಿಕೃತ ವಾಹನದಲ್ಲಿ ಸಾಗಿಸಿದ್ದರು. ಇದರಿಂದಾಗಿ ಆತ ಪಾಕಿಸ್ತಾನ ತಲುಪುವುದು ಸಾಧ್ಯವಾಯಿತು ಎಂದು ವಕ್ತಾರರು ಹೇಳಿದ್ದಾರೆ.</p>.<p>ಈ ಬಗ್ಗೆ 2005 ರಲ್ಲಿ ಬಿಜ್ಬೆಹರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಅದನ್ನು 2023ರಲ್ಲಿ ಎಸ್ಐಎ ಕಾಶ್ಮೀರಕ್ಕೆ ವರ್ಗಾಯಿಸಲಾಯಿತು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>