<p><strong>ಶ್ರೀನಗರ:</strong> ‘ರಾಷ್ಟ್ರೀಯವಾದಿ ಹಿಂದೂಗಳು’ ವಾಸವಿರುವ ಕಿಶ್ತ್ವಾರ್ ಪ್ರದೇಶವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರವು ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಶಾಸಕಿ ಶಗುನ್ ಪರಿಹಾರ್ ಅವರು ಬುಧವಾರ ಆರೋಪಿಸಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಅವರು ಮಾತನಾಡಿದ್ದಾರೆ. ಅವರ ಹೇಳಿಕೆಯ ನಂತರ ಸದನದಲ್ಲಿ ಕೋಲಾಹಲ ಉಂಟಾಗಿದೆ.</p><p>ಶಗುನ್ ಪರಿಹಾರ್ ಅವರ ಹೇಳಿಕೆಯನ್ನು ವಿರೋಧಿಸಿರುವ ಉಪ ಮುಖ್ಯಮಂತ್ರಿ ಸುರಿಂದರ್ ಚೌಧರಿ ‘ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳಷ್ಟೇ ಮುಸ್ಲಿಂ, ಸಿಖ್ ಹಾಗೂ ಕ್ರೈಸ್ತರು ಕೂಡ ರಾಷ್ಟ್ರೀಯವಾದಿಗಳು’ ಎಂದು ಹೇಳಿದ್ದಾರೆ. </p><p>‘ಸರ್ಕಾರವು ಧರ್ಮದ ಆಧಾರದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಇದು ಕೋಮುವಾದಿ ಹೇಳಿಕೆಯಾಗಿದ್ದು, ಸದನದ ಕಡತದಿಂದ ಈ ಹೇಳಿಕೆಯನ್ನು ತೆಗೆಯಬೇಕು’ ಎಂದು ಸಚಿವ ಜಾವಿದ್ ದಾರ್ ಆಗ್ರಹಿಸಿದ್ದಾರೆ.</p><p>'ಈ ದೇಶಕ್ಕಾಗಿ ಸಾವಿರಾರು ಜನ ಮುಸಲ್ಮಾನರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ಅವಮಾನಿಸುವುದು ಸರಿಯಲ್ಲ’ ಎಂದು ಎನ್ಸಿ ಪಕ್ಷದ ಶಾಸಕ ನಜೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.</p><p>‘ನೀವು ಇದೇ ಮೊದಲ ಬಾರಿಗೆ ಸದನವನ್ನು ಪ್ರವೇಶಿಸಿದ್ದು, ಮಾತನಾಡುವಾಗ ಎಚ್ಚರಿಕೆಯಿಂದ ಪದಗಳನ್ನು ಬಳಸಿ. ವಿವಾದಾತ್ಮಕ ಪದಗಳನ್ನು ಸದನದಲ್ಲಿ ಬಳಸಬೇಡಿ’ ಎಂದು ಸ್ಪೀಕರ್ ಅಬ್ದುಲ್ ರಹೀಮ್ ಅವರು ಶಗುನ್ ಪರಿಹಾರ್ ಅವರಿಗೆ ಎಚ್ಚರಿಕೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ‘ರಾಷ್ಟ್ರೀಯವಾದಿ ಹಿಂದೂಗಳು’ ವಾಸವಿರುವ ಕಿಶ್ತ್ವಾರ್ ಪ್ರದೇಶವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರವು ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಶಾಸಕಿ ಶಗುನ್ ಪರಿಹಾರ್ ಅವರು ಬುಧವಾರ ಆರೋಪಿಸಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಅವರು ಮಾತನಾಡಿದ್ದಾರೆ. ಅವರ ಹೇಳಿಕೆಯ ನಂತರ ಸದನದಲ್ಲಿ ಕೋಲಾಹಲ ಉಂಟಾಗಿದೆ.</p><p>ಶಗುನ್ ಪರಿಹಾರ್ ಅವರ ಹೇಳಿಕೆಯನ್ನು ವಿರೋಧಿಸಿರುವ ಉಪ ಮುಖ್ಯಮಂತ್ರಿ ಸುರಿಂದರ್ ಚೌಧರಿ ‘ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳಷ್ಟೇ ಮುಸ್ಲಿಂ, ಸಿಖ್ ಹಾಗೂ ಕ್ರೈಸ್ತರು ಕೂಡ ರಾಷ್ಟ್ರೀಯವಾದಿಗಳು’ ಎಂದು ಹೇಳಿದ್ದಾರೆ. </p><p>‘ಸರ್ಕಾರವು ಧರ್ಮದ ಆಧಾರದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಇದು ಕೋಮುವಾದಿ ಹೇಳಿಕೆಯಾಗಿದ್ದು, ಸದನದ ಕಡತದಿಂದ ಈ ಹೇಳಿಕೆಯನ್ನು ತೆಗೆಯಬೇಕು’ ಎಂದು ಸಚಿವ ಜಾವಿದ್ ದಾರ್ ಆಗ್ರಹಿಸಿದ್ದಾರೆ.</p><p>'ಈ ದೇಶಕ್ಕಾಗಿ ಸಾವಿರಾರು ಜನ ಮುಸಲ್ಮಾನರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ಅವಮಾನಿಸುವುದು ಸರಿಯಲ್ಲ’ ಎಂದು ಎನ್ಸಿ ಪಕ್ಷದ ಶಾಸಕ ನಜೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.</p><p>‘ನೀವು ಇದೇ ಮೊದಲ ಬಾರಿಗೆ ಸದನವನ್ನು ಪ್ರವೇಶಿಸಿದ್ದು, ಮಾತನಾಡುವಾಗ ಎಚ್ಚರಿಕೆಯಿಂದ ಪದಗಳನ್ನು ಬಳಸಿ. ವಿವಾದಾತ್ಮಕ ಪದಗಳನ್ನು ಸದನದಲ್ಲಿ ಬಳಸಬೇಡಿ’ ಎಂದು ಸ್ಪೀಕರ್ ಅಬ್ದುಲ್ ರಹೀಮ್ ಅವರು ಶಗುನ್ ಪರಿಹಾರ್ ಅವರಿಗೆ ಎಚ್ಚರಿಕೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>