<p>ಜಮ್ಮು: ಜಮ್ಮು ಗಡಿ ಪ್ರದೇಶದಲ್ಲಿ ಬೆದರಿಕೆ ಪತ್ರ ಹೊತ್ತೊಯ್ಯುತ್ತಿದ್ದ ಪಾರಿವಾಳವನ್ನು ಭದ್ರತಾ ಪಡೆಯ ಸಿಬ್ಬಂದಿ ಹಿಡಿದಿದ್ದಾರೆ. ‘ಜಮ್ಮು ರೈಲು ನಿಲ್ದಾಣವನ್ನು ಸ್ಫೋಟಿಸುತ್ತೇವೆ’ ಎಂಬ ಬೆದರಿಕೆಯ ಒಕ್ಕಣೆ ಆ ಪತ್ರದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಆಗಸ್ಟ್ 18ರ ರಾತ್ರಿ ಸುಮಾರು 9 ಗಂಟೆಗೆ ಪಾಕಿಸ್ತಾನದಿಂದ ಹಾರಿಬಂದ ಪಾರಿವಾಳವನ್ನು ಅಂತರರಾಷ್ಟ್ರೀಯ ಗಡಿ ಪ್ರದೇಶವಾದ ಕಟಾರಿಯಾ ಬಳಿ ಸೆರೆಹಿಡಿಯಲಾಗಿದೆ. ಬೆದರಿಕೆ ಪತ್ರವನ್ನು ಪಾರಿವಾಳದ ಉಗುರಿಗೆ ಕಟ್ಟಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಉರ್ದು ಮತ್ತು ಇಂಗ್ಲಿಷ್ನಲ್ಲಿ ಬರೆಯಲಾದ ಈ ಬೆದರಿಕೆ ಪತ್ರದಲ್ಲಿ ‘ಕಾಶ್ಮೀರ ಸ್ವಾತಂತ್ರ್ಯ’ ಮತ್ತು ‘ಕಾಲ ಕೂಡಿಬಂದಿದೆ’ ಎಂಬ ಅರ್ಥದ ಸಾಲುಗಳು ಸಹ ಇದ್ದವು ಎಂದು ಮೂಲಗಳು ತಿಳಿಸಿವೆ. </p>.<p>ಪಾಕಿಸ್ತಾನವು ಬಲೂನ್, ಧ್ವಜ ಮತ್ತು ಪಾರಿವಾಳಗಳ ಮೂಲಕ ಭಾರತದ ಗಡಿ ಪ್ರದೇಶಗಳಲ್ಲಿ ಅನೇಕ ಸಂದೇಶಗಳನ್ನು ಕಳುಹಿಸುತ್ತಿತ್ತು. ಆದರೆ, ಬೆದರಿಕೆ ಪತ್ರ ಹೊತ್ತೊಯ್ಯುತ್ತಿದ್ದ ಪಾರಿವಾಳವನ್ನು ಇದೇ ಮೊದಲ ಬಾರಿಗೆ ಸೆರೆಹಿಡಿಯಲಾಗಿದೆ ಎಂದು ಅವರು ತಿಳಿಸಿದ್ದಾರೆ. </p>.<p>ದೇಶದ ರಕ್ಷಣೆಯ ದೃಷ್ಟಿಯಿಂದಾಗಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ ಮತ್ತು ರೈಲು ನಿಲ್ದಾಣದಲ್ಲಿ ಹೆಚ್ಚು ಭದ್ರತೆ ಕಲ್ಪಿಸಿದ್ದು, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮ್ಮು: ಜಮ್ಮು ಗಡಿ ಪ್ರದೇಶದಲ್ಲಿ ಬೆದರಿಕೆ ಪತ್ರ ಹೊತ್ತೊಯ್ಯುತ್ತಿದ್ದ ಪಾರಿವಾಳವನ್ನು ಭದ್ರತಾ ಪಡೆಯ ಸಿಬ್ಬಂದಿ ಹಿಡಿದಿದ್ದಾರೆ. ‘ಜಮ್ಮು ರೈಲು ನಿಲ್ದಾಣವನ್ನು ಸ್ಫೋಟಿಸುತ್ತೇವೆ’ ಎಂಬ ಬೆದರಿಕೆಯ ಒಕ್ಕಣೆ ಆ ಪತ್ರದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಆಗಸ್ಟ್ 18ರ ರಾತ್ರಿ ಸುಮಾರು 9 ಗಂಟೆಗೆ ಪಾಕಿಸ್ತಾನದಿಂದ ಹಾರಿಬಂದ ಪಾರಿವಾಳವನ್ನು ಅಂತರರಾಷ್ಟ್ರೀಯ ಗಡಿ ಪ್ರದೇಶವಾದ ಕಟಾರಿಯಾ ಬಳಿ ಸೆರೆಹಿಡಿಯಲಾಗಿದೆ. ಬೆದರಿಕೆ ಪತ್ರವನ್ನು ಪಾರಿವಾಳದ ಉಗುರಿಗೆ ಕಟ್ಟಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಉರ್ದು ಮತ್ತು ಇಂಗ್ಲಿಷ್ನಲ್ಲಿ ಬರೆಯಲಾದ ಈ ಬೆದರಿಕೆ ಪತ್ರದಲ್ಲಿ ‘ಕಾಶ್ಮೀರ ಸ್ವಾತಂತ್ರ್ಯ’ ಮತ್ತು ‘ಕಾಲ ಕೂಡಿಬಂದಿದೆ’ ಎಂಬ ಅರ್ಥದ ಸಾಲುಗಳು ಸಹ ಇದ್ದವು ಎಂದು ಮೂಲಗಳು ತಿಳಿಸಿವೆ. </p>.<p>ಪಾಕಿಸ್ತಾನವು ಬಲೂನ್, ಧ್ವಜ ಮತ್ತು ಪಾರಿವಾಳಗಳ ಮೂಲಕ ಭಾರತದ ಗಡಿ ಪ್ರದೇಶಗಳಲ್ಲಿ ಅನೇಕ ಸಂದೇಶಗಳನ್ನು ಕಳುಹಿಸುತ್ತಿತ್ತು. ಆದರೆ, ಬೆದರಿಕೆ ಪತ್ರ ಹೊತ್ತೊಯ್ಯುತ್ತಿದ್ದ ಪಾರಿವಾಳವನ್ನು ಇದೇ ಮೊದಲ ಬಾರಿಗೆ ಸೆರೆಹಿಡಿಯಲಾಗಿದೆ ಎಂದು ಅವರು ತಿಳಿಸಿದ್ದಾರೆ. </p>.<p>ದೇಶದ ರಕ್ಷಣೆಯ ದೃಷ್ಟಿಯಿಂದಾಗಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ ಮತ್ತು ರೈಲು ನಿಲ್ದಾಣದಲ್ಲಿ ಹೆಚ್ಚು ಭದ್ರತೆ ಕಲ್ಪಿಸಿದ್ದು, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>