<p><strong>ಜಮ್ಮು</strong>: ಧಾರಾಕಾರ ಮಳೆಯಿಂದಾಗಿ ಮಣ್ಣು ಕುಸಿದು ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಅಪಾರ ಸಂಖ್ಯೆಯ ವಾಹನಗಳು, ಅಮರನಾಥ ಯಾತ್ರಿಗಳು ರಂಬನ್ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ದಟ್ಟಣೆಯಲ್ಲಿ ಸಿಲುಕಿದ್ದಾರೆ. </p>.<p>‘ಜಮ್ಮು ವಲಯದಲ್ಲಿ ಮೂರು ದಿನಗಳಿಂದ ಮಳೆ ಮುಂದುವರಿದಿದೆ. ಈ ಮಧ್ಯೆ, ಮುಂದಿನ 24 ಗಂಟೆಗಳಲ್ಲಿ ದಿಢೀರ್ ಪ್ರವಾಹ ಉಂಟಾಗುವ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಹೀಗಾಗಿ, ಮಾರ್ಗ ಮಧ್ಯೆ ಸಿಲುಕಿರುವ ಅಮರನಾಥ ಯಾತ್ರಿಗಳನ್ನು ವಾಪಸ್ ಶ್ರೀನಗರಕ್ಕೆ ಕರೆತರಲು ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸಿದೆ.</p>.<p>ಮಳೆ ಕಡಿಮೆಯಾಗಿ, ಸಂಚಾರ ಪುನರಾರಂಭಗೊಂಡ ನಂತರವೇ, ಈ ಮಾರ್ಗ ಬಳಸುವಂತೆ ಜನರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.</p>.<p>‘ರಂಬನ್ ಜಿಲ್ಲೆಯ ಮಗರ್ಕೋಟೆ ಕಣಿವೆಯಲ್ಲಿನ ಸೇತುವೆ ಬಳಿ ಮಣ್ಣು ಕುಸಿದಿದೆ. ದೇಶದ ಉಳಿದ ಭಾಗಗಳಿಂದ ಕಾಶ್ಮೀರವನ್ನು ಸಂಪರ್ಕಿಸುವ ಏಕೈಕ ಹೆದ್ದಾರಿ ಇದಾಗಿದ್ದು, ಸಂಚಾರ ಸ್ಥಗಿತಗೊಂಡಿರುವುದರಿಂದ ಜನರು ಪರದಾಡುವಂತಾಗಿದೆ.</p>.<p>‘ಮಳೆ ಮುಂದುವರಿದಿರುವುದು ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹವಾಮಾನ ಪೂರಕವಾಗಿದ್ದರೆ ಮುಂದಿನ ಕೆಲವು ಗಂಟೆಗಳಲ್ಲಿ ಹೆದ್ದಾರಿಯಲ್ಲಿ ಸಂಚಾರ ಪುನರಾರಂಭಗೊಳ್ಳುವ ಸಾಧ್ಯತೆ ಇದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಕಿಶ್ತವಾಡ್ ಜಿಲ್ಲೆಯ ಸಿಂಥನ್ನಲ್ಲ ಮಾರ್ಗದಲ್ಲೂ ಪ್ರವಾಹದಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಜೌರಿ, ಪೂಂಚ್, ರಿಯಾಸಿ, ಉಧಂಪುರ್, ಥೋಡ ಸೇರಿದಂತೆ ಕಣಿವೆ, ಪರ್ತವ ಶ್ರೇಣಿಯ ಮಾರ್ಗಗಳಲ್ಲಿ ಅಲ್ಲಲ್ಲಿ ಮಣ್ಣು ಕುಸಿದಿದೆ. </p>.<p>‘ಮಳೆ ಮತ್ತು ಪ್ರವಾಹ ಸಂಬಂಧಿತ ಅನಾಹುತಗಳಿಗೆ ತುರ್ತಾಗಿ ಸ್ಪಂದಿಸಲು ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧವಾಗಿಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಧಾರಾಕಾರ ಮಳೆಯಿಂದಾಗಿ ಮಣ್ಣು ಕುಸಿದು ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಅಪಾರ ಸಂಖ್ಯೆಯ ವಾಹನಗಳು, ಅಮರನಾಥ ಯಾತ್ರಿಗಳು ರಂಬನ್ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ದಟ್ಟಣೆಯಲ್ಲಿ ಸಿಲುಕಿದ್ದಾರೆ. </p>.<p>‘ಜಮ್ಮು ವಲಯದಲ್ಲಿ ಮೂರು ದಿನಗಳಿಂದ ಮಳೆ ಮುಂದುವರಿದಿದೆ. ಈ ಮಧ್ಯೆ, ಮುಂದಿನ 24 ಗಂಟೆಗಳಲ್ಲಿ ದಿಢೀರ್ ಪ್ರವಾಹ ಉಂಟಾಗುವ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಹೀಗಾಗಿ, ಮಾರ್ಗ ಮಧ್ಯೆ ಸಿಲುಕಿರುವ ಅಮರನಾಥ ಯಾತ್ರಿಗಳನ್ನು ವಾಪಸ್ ಶ್ರೀನಗರಕ್ಕೆ ಕರೆತರಲು ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸಿದೆ.</p>.<p>ಮಳೆ ಕಡಿಮೆಯಾಗಿ, ಸಂಚಾರ ಪುನರಾರಂಭಗೊಂಡ ನಂತರವೇ, ಈ ಮಾರ್ಗ ಬಳಸುವಂತೆ ಜನರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.</p>.<p>‘ರಂಬನ್ ಜಿಲ್ಲೆಯ ಮಗರ್ಕೋಟೆ ಕಣಿವೆಯಲ್ಲಿನ ಸೇತುವೆ ಬಳಿ ಮಣ್ಣು ಕುಸಿದಿದೆ. ದೇಶದ ಉಳಿದ ಭಾಗಗಳಿಂದ ಕಾಶ್ಮೀರವನ್ನು ಸಂಪರ್ಕಿಸುವ ಏಕೈಕ ಹೆದ್ದಾರಿ ಇದಾಗಿದ್ದು, ಸಂಚಾರ ಸ್ಥಗಿತಗೊಂಡಿರುವುದರಿಂದ ಜನರು ಪರದಾಡುವಂತಾಗಿದೆ.</p>.<p>‘ಮಳೆ ಮುಂದುವರಿದಿರುವುದು ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹವಾಮಾನ ಪೂರಕವಾಗಿದ್ದರೆ ಮುಂದಿನ ಕೆಲವು ಗಂಟೆಗಳಲ್ಲಿ ಹೆದ್ದಾರಿಯಲ್ಲಿ ಸಂಚಾರ ಪುನರಾರಂಭಗೊಳ್ಳುವ ಸಾಧ್ಯತೆ ಇದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಕಿಶ್ತವಾಡ್ ಜಿಲ್ಲೆಯ ಸಿಂಥನ್ನಲ್ಲ ಮಾರ್ಗದಲ್ಲೂ ಪ್ರವಾಹದಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಜೌರಿ, ಪೂಂಚ್, ರಿಯಾಸಿ, ಉಧಂಪುರ್, ಥೋಡ ಸೇರಿದಂತೆ ಕಣಿವೆ, ಪರ್ತವ ಶ್ರೇಣಿಯ ಮಾರ್ಗಗಳಲ್ಲಿ ಅಲ್ಲಲ್ಲಿ ಮಣ್ಣು ಕುಸಿದಿದೆ. </p>.<p>‘ಮಳೆ ಮತ್ತು ಪ್ರವಾಹ ಸಂಬಂಧಿತ ಅನಾಹುತಗಳಿಗೆ ತುರ್ತಾಗಿ ಸ್ಪಂದಿಸಲು ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧವಾಗಿಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>