<p><strong>ಹೈದರಾಬಾದ್:</strong> ಮುಂದಿನ ವರ್ಷ ಆಂಧ್ರಪ್ರದೇಶ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಜನ ಸೇನಾ ಪಕ್ಷದ ನಾಯಕ ಹಾಗೂ ಚಿತ್ರನಟ ಪವನ್ ಕಲ್ಯಾಣ್ ಗುರುವಾರ ಘೋಷಿಸಿದ್ದಾರೆ.</p><p>ಟಿಡಿಪಿ, ಬಿಜೆಪಿ ಹಾಗೂ ಜನ ಸೇನಾ ಒಳಗೊಂಡ ‘ಮಹಾ ಮೈತ್ರಿ’ ರಚಿಸಿ, ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಬೇಕು ಎಂದು ಕೆಲ ವರ್ಷಗಳಿಂದ ಪವನ್ ಕಲ್ಯಾಣ್ ಹೇಳುತ್ತಲೇ ಇದ್ದರು. ‘ಮಹಾಮೈತ್ರಿ’ ಮಾಡಿಕೊಳ್ಳುವ ಕುರಿತ ಪವನ್ ಕಲ್ಯಾಣ್ ಪ್ರಸ್ತಾವಕ್ಕೆ ಈ ಹಿಂದೆ ಬಿಜೆಪಿ ಉತ್ಸಾಹ ತೋರಿರಲಿಲ್ಲ. ಈಗ, ಬಿಜೆಪಿಯ ಪ್ರತಿಕ್ರಿಯೆಗೆ ಕಾಯದೇ, ನಟ ಪವನ್ ಕಲ್ಯಾಣ್ ಅವರು ತಮ್ಮ ಚುನಾವಣಾ ನಡೆಯನ್ನು ಪ್ರಕಟಿಸಿದ್ದಾರೆ. ಚೆಂಡು ಈಗ ಬಿಜೆಪಿ ಅಂಗಳದಲ್ಲಿ ಬಿದ್ದಿದ್ದು, ಕುತೂಹಲ ಕೆರಳಿಸಿದೆ.</p>.ಹಣ ದುರುಪಯೋಗ ಪ್ರಕರಣ: ಕೇಂದ್ರ ಕಾರಾಗೃಹಕ್ಕೆ ತಲುಪಿದ ಚಂದ್ರಬಾಬು ನಾಯ್ಡು.<p>ಭ್ರಷ್ಟಾಚಾರ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ಸದ್ಯ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಜೈಲಿನಲ್ಲಿರುವ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ, ಪವನ್ಕಲ್ಯಾಣ್ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.</p><p>ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ನಾಯ್ಡು ಪುತ್ರ ಹಾಗೂ ಹಿಂದೂಪುರ ಶಾಸಕ ನಾರಾ ಲೋಕೇಶ್, ಚಿತ್ರನಟ ನಂದಮೂರಿ ಬಾಲಕೃಷ್ಣ ಇದ್ದರು. </p><p>ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, ‘ಮುಂದಿನ ವರ್ಷ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಮ್ಮ ಮೈತ್ರಿಯ ಭಾಗವಾಗಲಿದೆ ಎಂಬ ಭರವಸೆ ಇದೆ’ ಎಂದು ಹೇಳಿದರು.</p><p>‘ಆಂಧ್ರಪ್ರದೇಶದ ಭವಿಷ್ಯ ಹಾಗೂ ರಾಜಕಾರಣದ ದೃಷ್ಟಿಯಿಂದ ರಾಜಮಹೇಂದ್ರವರಂನಲ್ಲಿ ನಡೆದ ಈ ಭೇಟಿ ಮಹತ್ವದ್ದು ಹಾಗೂ ನಿರ್ಣಾಯಕವೂ ಆಗಿದೆ. ಇನ್ನು ಮುಂದೆ ರಾಜ್ಯವು ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p><p>‘ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಜಂಟಿ ಹೋರಾಟದ ಅಗತ್ಯದ ಬಗ್ಗೆ ನಾನು ಇಲ್ಲಿಯವರೆಗೆ ಮಾತನಾಡುತ್ತಿದ್ದೆ. ಈ ದಿನ ನಾಯ್ಡು ಅವರನ್ನು ಭೇಟಿ ಮಾಡಿದ ನಂತರ, ಮುಂದಿನ ವರ್ಷ ನಡೆಯುವ ಚುನಾವಣೆಗೆ ಟಿಡಿಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ದೃಢ ನಿರ್ಧಾರ ಮಾಡಿದೆ’ ಎಂದು ಹೇಳಿದರು.</p>.ಏತಕ್ಕಾಗಿ ಚಂದ್ರಬಾಬು ನಾಯ್ಡು ಬಂಧನ? ಆಂಧ್ರ ಮಾಜಿ ಸಿಎಂಗೆ ಸಂಕಷ್ಟ.<p>‘ಚಂದ್ರಬಾಬು ನಾಯ್ಡು ಅವರ ಬಂಧನ ಕಾನೂನುಬಾಹಿರ. ನಾಯ್ಡು ಅಂಥವರನ್ನೇ ಬಂಧಿಸುತ್ತಿರುವಾಗ, ಆಂಧ್ರಪ್ರದೇಶದಲ್ಲಿ ಯಾರಿಗೆ ಏನೂ ಬೇಕಾದರೂ ಆಗಬಹುದು’ ಎಂದು ಆಡಳಿತಾರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.</p><p>‘ಮೈತ್ರಿಯ ಮುಂದಿನ ನಡೆ ಕುರಿತು ಚರ್ಚಿಸಲು ಜಂಟಿ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗುವುದು. ಆಂಧ್ರಪ್ರದೇಶದಲ್ಲಿ ಈಗ ಅರಾಜಕತೆಯೇ ಮನೆ ಮಾಡಿದೆ. ಇದರ ವಿರುದ್ಧ ಈಗ ನಾವು ಜಂಟಿ ಹೋರಾಟ ಆರಂಭಿಸದಿದ್ದರೆ ಈ ಅರಾಜಕತೆ ದಶಕಗಳ ಕಾಲ ಮುಂದುವರಿಯುವ ಅಪಾಯ ಇದೆ’ ಎಂದರು.</p><p>‘ಚಂದ್ರಬಾಬು ನಾಯ್ಡು ಅವರೊಂದಿಗೆ ನನಗೆ ಯಾವುದೇ ಮನಸ್ತಾಪ ಇಲ್ಲ. ಕೆಲ ನೀತಿಗಳಿಗೆ ಸಂಬಂಧಿಸಿ ಈ ಹಿಂದೆ ಅವರೊಂದಿಗೆ ನಾನು ಭಿನ್ನಾಭಿಪ್ರಾಯ ಹೊಂದಿದ್ದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>ವೈಎಸ್ಆರ್ಸಿಪಿ ಪ್ರತಿಕ್ರಿಯೆ: ಈ ಬೆಳವಣಿಗೆ ಬಗ್ಗೆ ಅಚ್ಚರಿಪಡುವಂಥದ್ದು ಏನೂ ಇಲ್ಲ ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷ ಪ್ರತಿಕ್ರಿಯಿಸಿದೆ.</p><p>‘ಅವರಿಬ್ಬರು ಕೆಲ ವರ್ಷಗಳಿಂದ ಗುಟ್ಟಾಗಿಯೇ ಕೈಜೋಡಿಸಿದ್ದರು. ಈಗ ತಮ್ಮ ಮುಖವಾಡಗಳನ್ನು ಕಳಚಿದ್ದಾರಷ್ಟೆ’ ಎಂದು ವಿಜಯವಾಡ ಪಶ್ಚಿಮ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವೆಲ್ಲಂಪಲ್ಲಿ ಶ್ರೀನಿವಾಸ ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಮುಂದಿನ ವರ್ಷ ಆಂಧ್ರಪ್ರದೇಶ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಜನ ಸೇನಾ ಪಕ್ಷದ ನಾಯಕ ಹಾಗೂ ಚಿತ್ರನಟ ಪವನ್ ಕಲ್ಯಾಣ್ ಗುರುವಾರ ಘೋಷಿಸಿದ್ದಾರೆ.</p><p>ಟಿಡಿಪಿ, ಬಿಜೆಪಿ ಹಾಗೂ ಜನ ಸೇನಾ ಒಳಗೊಂಡ ‘ಮಹಾ ಮೈತ್ರಿ’ ರಚಿಸಿ, ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಬೇಕು ಎಂದು ಕೆಲ ವರ್ಷಗಳಿಂದ ಪವನ್ ಕಲ್ಯಾಣ್ ಹೇಳುತ್ತಲೇ ಇದ್ದರು. ‘ಮಹಾಮೈತ್ರಿ’ ಮಾಡಿಕೊಳ್ಳುವ ಕುರಿತ ಪವನ್ ಕಲ್ಯಾಣ್ ಪ್ರಸ್ತಾವಕ್ಕೆ ಈ ಹಿಂದೆ ಬಿಜೆಪಿ ಉತ್ಸಾಹ ತೋರಿರಲಿಲ್ಲ. ಈಗ, ಬಿಜೆಪಿಯ ಪ್ರತಿಕ್ರಿಯೆಗೆ ಕಾಯದೇ, ನಟ ಪವನ್ ಕಲ್ಯಾಣ್ ಅವರು ತಮ್ಮ ಚುನಾವಣಾ ನಡೆಯನ್ನು ಪ್ರಕಟಿಸಿದ್ದಾರೆ. ಚೆಂಡು ಈಗ ಬಿಜೆಪಿ ಅಂಗಳದಲ್ಲಿ ಬಿದ್ದಿದ್ದು, ಕುತೂಹಲ ಕೆರಳಿಸಿದೆ.</p>.ಹಣ ದುರುಪಯೋಗ ಪ್ರಕರಣ: ಕೇಂದ್ರ ಕಾರಾಗೃಹಕ್ಕೆ ತಲುಪಿದ ಚಂದ್ರಬಾಬು ನಾಯ್ಡು.<p>ಭ್ರಷ್ಟಾಚಾರ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ಸದ್ಯ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಜೈಲಿನಲ್ಲಿರುವ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ, ಪವನ್ಕಲ್ಯಾಣ್ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.</p><p>ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ನಾಯ್ಡು ಪುತ್ರ ಹಾಗೂ ಹಿಂದೂಪುರ ಶಾಸಕ ನಾರಾ ಲೋಕೇಶ್, ಚಿತ್ರನಟ ನಂದಮೂರಿ ಬಾಲಕೃಷ್ಣ ಇದ್ದರು. </p><p>ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, ‘ಮುಂದಿನ ವರ್ಷ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಮ್ಮ ಮೈತ್ರಿಯ ಭಾಗವಾಗಲಿದೆ ಎಂಬ ಭರವಸೆ ಇದೆ’ ಎಂದು ಹೇಳಿದರು.</p><p>‘ಆಂಧ್ರಪ್ರದೇಶದ ಭವಿಷ್ಯ ಹಾಗೂ ರಾಜಕಾರಣದ ದೃಷ್ಟಿಯಿಂದ ರಾಜಮಹೇಂದ್ರವರಂನಲ್ಲಿ ನಡೆದ ಈ ಭೇಟಿ ಮಹತ್ವದ್ದು ಹಾಗೂ ನಿರ್ಣಾಯಕವೂ ಆಗಿದೆ. ಇನ್ನು ಮುಂದೆ ರಾಜ್ಯವು ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p><p>‘ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಜಂಟಿ ಹೋರಾಟದ ಅಗತ್ಯದ ಬಗ್ಗೆ ನಾನು ಇಲ್ಲಿಯವರೆಗೆ ಮಾತನಾಡುತ್ತಿದ್ದೆ. ಈ ದಿನ ನಾಯ್ಡು ಅವರನ್ನು ಭೇಟಿ ಮಾಡಿದ ನಂತರ, ಮುಂದಿನ ವರ್ಷ ನಡೆಯುವ ಚುನಾವಣೆಗೆ ಟಿಡಿಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ದೃಢ ನಿರ್ಧಾರ ಮಾಡಿದೆ’ ಎಂದು ಹೇಳಿದರು.</p>.ಏತಕ್ಕಾಗಿ ಚಂದ್ರಬಾಬು ನಾಯ್ಡು ಬಂಧನ? ಆಂಧ್ರ ಮಾಜಿ ಸಿಎಂಗೆ ಸಂಕಷ್ಟ.<p>‘ಚಂದ್ರಬಾಬು ನಾಯ್ಡು ಅವರ ಬಂಧನ ಕಾನೂನುಬಾಹಿರ. ನಾಯ್ಡು ಅಂಥವರನ್ನೇ ಬಂಧಿಸುತ್ತಿರುವಾಗ, ಆಂಧ್ರಪ್ರದೇಶದಲ್ಲಿ ಯಾರಿಗೆ ಏನೂ ಬೇಕಾದರೂ ಆಗಬಹುದು’ ಎಂದು ಆಡಳಿತಾರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.</p><p>‘ಮೈತ್ರಿಯ ಮುಂದಿನ ನಡೆ ಕುರಿತು ಚರ್ಚಿಸಲು ಜಂಟಿ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗುವುದು. ಆಂಧ್ರಪ್ರದೇಶದಲ್ಲಿ ಈಗ ಅರಾಜಕತೆಯೇ ಮನೆ ಮಾಡಿದೆ. ಇದರ ವಿರುದ್ಧ ಈಗ ನಾವು ಜಂಟಿ ಹೋರಾಟ ಆರಂಭಿಸದಿದ್ದರೆ ಈ ಅರಾಜಕತೆ ದಶಕಗಳ ಕಾಲ ಮುಂದುವರಿಯುವ ಅಪಾಯ ಇದೆ’ ಎಂದರು.</p><p>‘ಚಂದ್ರಬಾಬು ನಾಯ್ಡು ಅವರೊಂದಿಗೆ ನನಗೆ ಯಾವುದೇ ಮನಸ್ತಾಪ ಇಲ್ಲ. ಕೆಲ ನೀತಿಗಳಿಗೆ ಸಂಬಂಧಿಸಿ ಈ ಹಿಂದೆ ಅವರೊಂದಿಗೆ ನಾನು ಭಿನ್ನಾಭಿಪ್ರಾಯ ಹೊಂದಿದ್ದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>ವೈಎಸ್ಆರ್ಸಿಪಿ ಪ್ರತಿಕ್ರಿಯೆ: ಈ ಬೆಳವಣಿಗೆ ಬಗ್ಗೆ ಅಚ್ಚರಿಪಡುವಂಥದ್ದು ಏನೂ ಇಲ್ಲ ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷ ಪ್ರತಿಕ್ರಿಯಿಸಿದೆ.</p><p>‘ಅವರಿಬ್ಬರು ಕೆಲ ವರ್ಷಗಳಿಂದ ಗುಟ್ಟಾಗಿಯೇ ಕೈಜೋಡಿಸಿದ್ದರು. ಈಗ ತಮ್ಮ ಮುಖವಾಡಗಳನ್ನು ಕಳಚಿದ್ದಾರಷ್ಟೆ’ ಎಂದು ವಿಜಯವಾಡ ಪಶ್ಚಿಮ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವೆಲ್ಲಂಪಲ್ಲಿ ಶ್ರೀನಿವಾಸ ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>