<p>ಬಿಟ್ಕಾಯಿನ್ ಪ್ರಕರಣ: ನಲಪಾಡ್ ಹ್ಯಾರಿಸ್ ಮನೆ ಸೇರಿ 17 ಕಡೆ ಇ.ಡಿ ದಾಳಿ, ಜಪಾನ್ನಲ್ಲಿ ಭೂಕಂಪನ ಸೇರಿ ಈ ದಿನದ ಪ್ರಮುಖ ಸುದ್ದಿಗಳು</p>.<p><strong>ಟೋಕಿಯೊ:</strong> ಜಪಾನ್ನ ಈಶಾನ್ಯ ಕರಾವಳಿಯಲ್ಲಿ ಸೋಮವಾರ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.</p><p>ಇದರ ಬೆನ್ನಲ್ಲೇ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.</p><p><em><strong><a href="https://www.prajavani.net/news/world-news/japan-earthquake-tsunami-alert-3922031">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಆದೇಶದಂತೆ ಮತದಾರರ ಪಟ್ಟಿಯ ವಿಶೇಷ ಪರಷ್ಕರಣೆ (ಎಸ್ಐಆರ್ ) ಮೇಲ್ಮನವಿ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಕೀಲರೊಬ್ಬರು ಪ್ರತಿಪಾದಿಸಿದ್ದು, ಈ ಕುರಿತು ಕಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಂದ ವರದಿ ಕೋರಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.</p><p><em><strong><a href="https://www.prajavani.net/news/india-news/supreme-court-to-seek-report-on-bengal-voter-list-revision-tribunals-3921579">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಹುಬ್ಬಳ್ಳಿ:</strong> ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ ಭಾನುವಾರ ಮಧ್ಯಾಹ್ನ ಹೊರಟಿದ್ದ ಫ್ಲೈ91 ವಿಮಾನವು ಹವಾಮಾನ ವೈಪರಿತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೆ ಬಾನಂಗಳದಲ್ಲಿಯೇ ಮೂರು ಗಂಟೆಗೂ ಹೆಚ್ಚುಕಾಲ ಹಾರಾಡಿದೆ.</p><p><em><strong><a href="https://www.prajavani.net/district/dharwad/fly-ninety-one-flight-delay-hubli-bangalore-3921654">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ತೂತುಕುಡಿ:</strong> 'ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ದೇಶಕ್ಕೆ ಭೇಟಿ ಕೊಟ್ಟಿದ್ದರು' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p><p><em><strong><a href="https://www.prajavani.net/news/india-news/rahul-gandhi-criticizes-modi-israel-visit-3921742">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ನವದೆಹಲಿ:</strong> ಭಾರತವು ಈಗ 'ವಿಶ್ವಗುರು' ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ.</p><p><em><strong><a href="https://www.prajavani.net/news/india-news/we-are-not-vishwaguru-now-says-senior-bjp-leader-murli-manohar-joshi-3921649">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಹಾವೇರಿ:</strong> ಇಲ್ಲಿಯ ನಗರಸಭೆ ಬಳಿ ಪ್ರತಿಷ್ಠಾಪಿಸಿದ್ದ ಮಹಾತ್ಮ ಗಾಂಧೀಜಿ ಪುತ್ಥಳಿಯು ಭಗ್ನಗೊಂಡು ಬಿದ್ದಿದ್ದು, ಈ ಬಗ್ಗೆ ಶಹರ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.</p><p><em><strong><a href="https://www.prajavani.net/district/haveri/mahatma-gandhi-statue-damaged-haveri-case-registered-3921497">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಬೆಂಗಳೂರು:</strong> ಬಿಟ್ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಕಾರಣಕ್ಕೆ ಕಾಂಗ್ರೆಸ್ನ ಯುವ ಮುಖಂಡ ಮಹಮದ್ ನಲಪಾಡ್ ಹ್ಯಾರಿಸ್ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸಿದ್ದಾರೆ.</p><p><strong><a href="https://www.prajavani.net/news/karnataka-news/bitcoin-case-ed-raids-residence-of-na-harris-sons-including-nalapad-3921465">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></p>.<p><strong>ಚಂಡೀಗಢ: </strong>2027ರ<strong> </strong>ವಿಧಾನಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಮ್ಮೊಂದಿಗಿರುತ್ತದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p><br><em><strong><a href="https://www.prajavani.net/news/india-news/akhilesh-yadav-sp-congress-alliance-up-polls-3921520">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p>ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸಾರಿಗೆ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p><em><strong><a href="https://www.prajavani.net/news/india-news/udhampur-kashmir-bus-accident-deaths-3921494">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಬೆಳಗಾವಿ:</strong> ‘ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿಯಾಗುವುದು ಸಹಜ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.</p> <p><em><strong><a href="https://www.prajavani.net/news/karnataka-news/satish-jarkiholi-meets-dk-shivakumar-congress-strategy-3921702">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಟ್ಕಾಯಿನ್ ಪ್ರಕರಣ: ನಲಪಾಡ್ ಹ್ಯಾರಿಸ್ ಮನೆ ಸೇರಿ 17 ಕಡೆ ಇ.ಡಿ ದಾಳಿ, ಜಪಾನ್ನಲ್ಲಿ ಭೂಕಂಪನ ಸೇರಿ ಈ ದಿನದ ಪ್ರಮುಖ ಸುದ್ದಿಗಳು</p>.<p><strong>ಟೋಕಿಯೊ:</strong> ಜಪಾನ್ನ ಈಶಾನ್ಯ ಕರಾವಳಿಯಲ್ಲಿ ಸೋಮವಾರ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.</p><p>ಇದರ ಬೆನ್ನಲ್ಲೇ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.</p><p><em><strong><a href="https://www.prajavani.net/news/world-news/japan-earthquake-tsunami-alert-3922031">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಆದೇಶದಂತೆ ಮತದಾರರ ಪಟ್ಟಿಯ ವಿಶೇಷ ಪರಷ್ಕರಣೆ (ಎಸ್ಐಆರ್ ) ಮೇಲ್ಮನವಿ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಕೀಲರೊಬ್ಬರು ಪ್ರತಿಪಾದಿಸಿದ್ದು, ಈ ಕುರಿತು ಕಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಂದ ವರದಿ ಕೋರಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.</p><p><em><strong><a href="https://www.prajavani.net/news/india-news/supreme-court-to-seek-report-on-bengal-voter-list-revision-tribunals-3921579">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಹುಬ್ಬಳ್ಳಿ:</strong> ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ ಭಾನುವಾರ ಮಧ್ಯಾಹ್ನ ಹೊರಟಿದ್ದ ಫ್ಲೈ91 ವಿಮಾನವು ಹವಾಮಾನ ವೈಪರಿತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೆ ಬಾನಂಗಳದಲ್ಲಿಯೇ ಮೂರು ಗಂಟೆಗೂ ಹೆಚ್ಚುಕಾಲ ಹಾರಾಡಿದೆ.</p><p><em><strong><a href="https://www.prajavani.net/district/dharwad/fly-ninety-one-flight-delay-hubli-bangalore-3921654">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ತೂತುಕುಡಿ:</strong> 'ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ದೇಶಕ್ಕೆ ಭೇಟಿ ಕೊಟ್ಟಿದ್ದರು' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p><p><em><strong><a href="https://www.prajavani.net/news/india-news/rahul-gandhi-criticizes-modi-israel-visit-3921742">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ನವದೆಹಲಿ:</strong> ಭಾರತವು ಈಗ 'ವಿಶ್ವಗುರು' ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ.</p><p><em><strong><a href="https://www.prajavani.net/news/india-news/we-are-not-vishwaguru-now-says-senior-bjp-leader-murli-manohar-joshi-3921649">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಹಾವೇರಿ:</strong> ಇಲ್ಲಿಯ ನಗರಸಭೆ ಬಳಿ ಪ್ರತಿಷ್ಠಾಪಿಸಿದ್ದ ಮಹಾತ್ಮ ಗಾಂಧೀಜಿ ಪುತ್ಥಳಿಯು ಭಗ್ನಗೊಂಡು ಬಿದ್ದಿದ್ದು, ಈ ಬಗ್ಗೆ ಶಹರ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.</p><p><em><strong><a href="https://www.prajavani.net/district/haveri/mahatma-gandhi-statue-damaged-haveri-case-registered-3921497">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಬೆಂಗಳೂರು:</strong> ಬಿಟ್ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಕಾರಣಕ್ಕೆ ಕಾಂಗ್ರೆಸ್ನ ಯುವ ಮುಖಂಡ ಮಹಮದ್ ನಲಪಾಡ್ ಹ್ಯಾರಿಸ್ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸಿದ್ದಾರೆ.</p><p><strong><a href="https://www.prajavani.net/news/karnataka-news/bitcoin-case-ed-raids-residence-of-na-harris-sons-including-nalapad-3921465">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></p>.<p><strong>ಚಂಡೀಗಢ: </strong>2027ರ<strong> </strong>ವಿಧಾನಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಮ್ಮೊಂದಿಗಿರುತ್ತದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p><br><em><strong><a href="https://www.prajavani.net/news/india-news/akhilesh-yadav-sp-congress-alliance-up-polls-3921520">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p>ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸಾರಿಗೆ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p><em><strong><a href="https://www.prajavani.net/news/india-news/udhampur-kashmir-bus-accident-deaths-3921494">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<p><strong>ಬೆಳಗಾವಿ:</strong> ‘ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿಯಾಗುವುದು ಸಹಜ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.</p> <p><em><strong><a href="https://www.prajavani.net/news/karnataka-news/satish-jarkiholi-meets-dk-shivakumar-congress-strategy-3921702">ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ</a></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>