<p><strong>ಛತ್ರಪತಿ ಸಂಭಾಜಿನಗರ:</strong> ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದ್ದು, ನಮ್ಮ ಮುಂದಿನ ಹೋರಾಟದ ರೂಪುರೇಷೆ ರೂಪಿಸಲು ಸಮುದಾಯವು ಡಿಸೆಂಬರ್ 17ರಂದು ಸಭೆ ನಡೆಸಲಿದೆ ಎಂದು ಹೋರಾಟಗಾರ ಮನೋಜ್ ಜರಾಂಗೆ ತಿಳಿಸಿದರು. </p>.<p>ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜರಾಂಗೆ, ‘ಮರಾಠರಿಗೆ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಡಿಸೆಂಬರ್ 24ರವರಗೆ ಗಡುವು ನೀಡಿದ್ದು, ಆ ಬಳಿಕವೇ ಸಭೆ ನಡೆಸಬೇಕೆಂದು ನಾವು ತೀರ್ಮಾನಿಸಿದ್ದೇವು. ಆದರೆ, ಕೆಲವು ಬೆಳವಣಿಗೆಗಳಿಂದಾಗಿ, ಡಿಸೆಂಬರ್ 17ರಂದೇ ಸಭೆ ನಡೆಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.</p>.<p>‘ಅಂತರ್ವಲಿ ಸರತಿ ಗ್ರಾಮದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ, ಬಂಧಿತರ ಮೇಲಿನ ಪ್ರಕರಣಗಳನ್ನು ಕೈಬಿಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ, ಸಚಿವ ಛಗನ್ ಭುಜಬಲ್ ಅವರ ಹೇಳಿಕೆಯ ಬಳಿಕ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದೆ’ ಎಂದು ತಿಳಿಸಿದರು.</p>.<p>‘ಸರ್ಕಾರ ಈವರೆಗೆ ಮರಾಠ ಮೀಸಲಾತಿಯ ಬಗ್ಗೆ ಯಾವುದೇ ಲಿಖಿತ ಹೇಳಿಕೆಯನ್ನು ನೀಡಿಲ್ಲ. ಹಿಂಸಾಚಾರದ ಬಗ್ಗೆ ಮಾತನಾಡಿದ್ದು ಭುಜಬಲ ಅವರು, ಆದರೆ, ನಮ್ಮ ಮೇಲೆ ಕ್ರಮಕೈಗೊಳ್ಳಲಾಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಂಭಾಜಿನಗರ:</strong> ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದ್ದು, ನಮ್ಮ ಮುಂದಿನ ಹೋರಾಟದ ರೂಪುರೇಷೆ ರೂಪಿಸಲು ಸಮುದಾಯವು ಡಿಸೆಂಬರ್ 17ರಂದು ಸಭೆ ನಡೆಸಲಿದೆ ಎಂದು ಹೋರಾಟಗಾರ ಮನೋಜ್ ಜರಾಂಗೆ ತಿಳಿಸಿದರು. </p>.<p>ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜರಾಂಗೆ, ‘ಮರಾಠರಿಗೆ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಡಿಸೆಂಬರ್ 24ರವರಗೆ ಗಡುವು ನೀಡಿದ್ದು, ಆ ಬಳಿಕವೇ ಸಭೆ ನಡೆಸಬೇಕೆಂದು ನಾವು ತೀರ್ಮಾನಿಸಿದ್ದೇವು. ಆದರೆ, ಕೆಲವು ಬೆಳವಣಿಗೆಗಳಿಂದಾಗಿ, ಡಿಸೆಂಬರ್ 17ರಂದೇ ಸಭೆ ನಡೆಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.</p>.<p>‘ಅಂತರ್ವಲಿ ಸರತಿ ಗ್ರಾಮದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ, ಬಂಧಿತರ ಮೇಲಿನ ಪ್ರಕರಣಗಳನ್ನು ಕೈಬಿಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ, ಸಚಿವ ಛಗನ್ ಭುಜಬಲ್ ಅವರ ಹೇಳಿಕೆಯ ಬಳಿಕ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದೆ’ ಎಂದು ತಿಳಿಸಿದರು.</p>.<p>‘ಸರ್ಕಾರ ಈವರೆಗೆ ಮರಾಠ ಮೀಸಲಾತಿಯ ಬಗ್ಗೆ ಯಾವುದೇ ಲಿಖಿತ ಹೇಳಿಕೆಯನ್ನು ನೀಡಿಲ್ಲ. ಹಿಂಸಾಚಾರದ ಬಗ್ಗೆ ಮಾತನಾಡಿದ್ದು ಭುಜಬಲ ಅವರು, ಆದರೆ, ನಮ್ಮ ಮೇಲೆ ಕ್ರಮಕೈಗೊಳ್ಳಲಾಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>