ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜರಾಂಗೆ, ‘ಮರಾಠರಿಗೆ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಡಿಸೆಂಬರ್ 24ರವರಗೆ ಗಡುವು ನೀಡಿದ್ದು, ಆ ಬಳಿಕವೇ ಸಭೆ ನಡೆಸಬೇಕೆಂದು ನಾವು ತೀರ್ಮಾನಿಸಿದ್ದೇವು. ಆದರೆ, ಕೆಲವು ಬೆಳವಣಿಗೆಗಳಿಂದಾಗಿ, ಡಿಸೆಂಬರ್ 17ರಂದೇ ಸಭೆ ನಡೆಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.