<p><strong>ಜಲ್ನಾ</strong>: ಮರಾಠ ಸಮುದಾಯಕ್ಕೆ ಒಬಿಸಿ ಅಡಿ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರದ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಇಂದು ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದಾರೆ.</p><p>ಜಲ್ನಾ ಜಿಲ್ಲೆಯ ಅಂತರ್ವಾಲಿ ಸಾರಥಿ ಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮರಾಠರನ್ನು ಕುಂಬಿಗಳು (ಕೃಷಿ ಸಮುದಾಯ) ಎಂದು ಗುರುತಿಸಿದ್ದ ಹಿಂದಿನ ಹೈದರಾಬಾದ್ ರಾಜ್ಯ, ಬಾಂಬೆ ಪ್ರೆಸಿಡೆನ್ಸಿ ಮತ್ತು ಸತಾರಾ ಸಂಸ್ಥಾನದ ಐತಿಹಾಸಿಕ ಗೆಜೆಟ್ಗಳ ಮಾದರಿಗಳನ್ನು ಅನುಸರಿಸುವಂತೆ ಒತ್ತಾಯಿಸಿದರು.</p><p>‘ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾವಿನವರೆಗೆ ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಆಯ್ಕೆ ಇಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳು ಸೋಲಿಸುವುದನ್ನು ಬಿಟ್ಟರೆ ಬೇರೆ ನಮಗೆ ಮಾರ್ಗ ಇಲ್ಲ’ಎಂದಿದ್ದಾರೆ.</p><p>ಇದೇವೇಳೆ, ಡಿಸಿಎಂ ದೇವೇಂದ್ರ ಫಡಣವೀಸ್ ಮತ್ತು ಸಚಿವ ಛಗನ್ ಭುಜಬಲ್ ವಿರುದ್ಧ ಮತ್ತೆ ಕಿಡಿಕಾರಿದ ಜರಾಂಗೆ, ‘ಮರಾಠ ಸಮುದಾಯಕ್ಕೆ ಮೀಸಲಾತಿಗೆ ಕಲ್ಪಿಸುವುದಕ್ಕೆ ಫಡಣವೀಸ್ ತೊಡಕಾಗಿದ್ದಾರೆ. ಒಬಿಸಿ ಸಮುದಾಯದ ಜನರನ್ನು ಮರಾಠ ಮೀಸಲಾತಿ ವಿರುದ್ಧ ಎತ್ತಿಕಟ್ಟುವ ಮೂಲಕ ಛಗನ್ ಭುಜಬಲ್ ಗಲಭೆ ಸೃಷ್ಟಿಸುತ್ತಿದ್ದಾರೆ’ಎಂದರು.</p><p>ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಿರುವ ಧನಗರ್ ಸಮುದಾಯವನ್ನು ಜರಾಂಗೆ ಬೆಂಬಲಿಸಿದ್ದಾರೆ.</p><p>ಮರಾಠರಿಗೆ ಮೀಸಲಾತಿಗೆ ಒತ್ತಾಯಿಸಿ ಕಳೆದ ವರ್ಷ ಆಗಸ್ಟ್ 29 ಮತ್ತು ಅಕ್ಟೋಬರ್ 25ರಂದು ಜರಾಂಗೆ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವರ್ಷ ಫೆಬ್ರುವರಿ 10, ಜೂನ್ 4 ಮತ್ತು ಜುಲೈ 20ರಂದೂ ಧರಣಿ ನಡೆಸಿದ್ದರು.</p><p>ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸಬೇಕೆಂಬುದು ಜರಾಂಗೆಯವರ ಪ್ರಮುಖ ಬೇಡಿಕೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವುದು ಅವರ ಉದ್ದೇಶವಾಗಿದೆ ಎಂದು ವರದಿ ತಿಳಿಸಿದೆ.</p><p>ಉಪವಾಸದ ಹೆಸರಲ್ಲಿ ಜರಾಂಗೆ ನಾಟಕ ಮಾಡುತ್ತಿದ್ದಾರೆ ಎಂದು ಮತ್ತೊಬ್ಬ ಹೋರಾಟಗಾರ ವಾಘ್ಮರೆ ಆರೋಪಿಸಿದ್ದಾರೆ.</p><p>ಒಬಿಸಿ ಅಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ವಾಘ್ಮರೆ ಮತ್ತು ಜರಾಂಗೆ ಸಹವರ್ತಿಯೇ ಆಗಿರುವ ಲಕ್ಷ್ಮಣ್ ಹಕೆ ವಿರೋಧಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಲ್ನಾ</strong>: ಮರಾಠ ಸಮುದಾಯಕ್ಕೆ ಒಬಿಸಿ ಅಡಿ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರದ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಇಂದು ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದಾರೆ.</p><p>ಜಲ್ನಾ ಜಿಲ್ಲೆಯ ಅಂತರ್ವಾಲಿ ಸಾರಥಿ ಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮರಾಠರನ್ನು ಕುಂಬಿಗಳು (ಕೃಷಿ ಸಮುದಾಯ) ಎಂದು ಗುರುತಿಸಿದ್ದ ಹಿಂದಿನ ಹೈದರಾಬಾದ್ ರಾಜ್ಯ, ಬಾಂಬೆ ಪ್ರೆಸಿಡೆನ್ಸಿ ಮತ್ತು ಸತಾರಾ ಸಂಸ್ಥಾನದ ಐತಿಹಾಸಿಕ ಗೆಜೆಟ್ಗಳ ಮಾದರಿಗಳನ್ನು ಅನುಸರಿಸುವಂತೆ ಒತ್ತಾಯಿಸಿದರು.</p><p>‘ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾವಿನವರೆಗೆ ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಆಯ್ಕೆ ಇಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳು ಸೋಲಿಸುವುದನ್ನು ಬಿಟ್ಟರೆ ಬೇರೆ ನಮಗೆ ಮಾರ್ಗ ಇಲ್ಲ’ಎಂದಿದ್ದಾರೆ.</p><p>ಇದೇವೇಳೆ, ಡಿಸಿಎಂ ದೇವೇಂದ್ರ ಫಡಣವೀಸ್ ಮತ್ತು ಸಚಿವ ಛಗನ್ ಭುಜಬಲ್ ವಿರುದ್ಧ ಮತ್ತೆ ಕಿಡಿಕಾರಿದ ಜರಾಂಗೆ, ‘ಮರಾಠ ಸಮುದಾಯಕ್ಕೆ ಮೀಸಲಾತಿಗೆ ಕಲ್ಪಿಸುವುದಕ್ಕೆ ಫಡಣವೀಸ್ ತೊಡಕಾಗಿದ್ದಾರೆ. ಒಬಿಸಿ ಸಮುದಾಯದ ಜನರನ್ನು ಮರಾಠ ಮೀಸಲಾತಿ ವಿರುದ್ಧ ಎತ್ತಿಕಟ್ಟುವ ಮೂಲಕ ಛಗನ್ ಭುಜಬಲ್ ಗಲಭೆ ಸೃಷ್ಟಿಸುತ್ತಿದ್ದಾರೆ’ಎಂದರು.</p><p>ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಿರುವ ಧನಗರ್ ಸಮುದಾಯವನ್ನು ಜರಾಂಗೆ ಬೆಂಬಲಿಸಿದ್ದಾರೆ.</p><p>ಮರಾಠರಿಗೆ ಮೀಸಲಾತಿಗೆ ಒತ್ತಾಯಿಸಿ ಕಳೆದ ವರ್ಷ ಆಗಸ್ಟ್ 29 ಮತ್ತು ಅಕ್ಟೋಬರ್ 25ರಂದು ಜರಾಂಗೆ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವರ್ಷ ಫೆಬ್ರುವರಿ 10, ಜೂನ್ 4 ಮತ್ತು ಜುಲೈ 20ರಂದೂ ಧರಣಿ ನಡೆಸಿದ್ದರು.</p><p>ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸಬೇಕೆಂಬುದು ಜರಾಂಗೆಯವರ ಪ್ರಮುಖ ಬೇಡಿಕೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವುದು ಅವರ ಉದ್ದೇಶವಾಗಿದೆ ಎಂದು ವರದಿ ತಿಳಿಸಿದೆ.</p><p>ಉಪವಾಸದ ಹೆಸರಲ್ಲಿ ಜರಾಂಗೆ ನಾಟಕ ಮಾಡುತ್ತಿದ್ದಾರೆ ಎಂದು ಮತ್ತೊಬ್ಬ ಹೋರಾಟಗಾರ ವಾಘ್ಮರೆ ಆರೋಪಿಸಿದ್ದಾರೆ.</p><p>ಒಬಿಸಿ ಅಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ವಾಘ್ಮರೆ ಮತ್ತು ಜರಾಂಗೆ ಸಹವರ್ತಿಯೇ ಆಗಿರುವ ಲಕ್ಷ್ಮಣ್ ಹಕೆ ವಿರೋಧಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>