ಜೈಪುರ: ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಕೇಂದ್ರದಲ್ಲಿ ಸಚಿವರಾಗಿದ್ದ ಜಸ್ವಂತ್ ಸಿಂಗ್ ಅವರ ಮಗ ಮಾನವೇಂದ್ರ ಸಿಂಗ್ ಅವರು ರಾಜಸ್ಥಾನದ ಬಾರ್ಮೇರ್ನಲ್ಲಿ ಭಾನುವಾರ ‘ಸ್ವಾಭಿಮಾನ ರ್ಯಾಲಿ’ ನಡೆಸಿದ್ದಾರೆ. ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮೊದಲೇ ಅವರು ಬಿಜೆಪಿ ತೊರೆಯುತ್ತಾರೆ ಎಂಬ ವದಂತಿಗಳಿಗೆ ಇದು ಪುಷ್ಟಿ ನೀಡಿದೆ.