<p class="title"><strong>ಜೈಪುರ</strong>: ಬಿಜೆಪಿ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ, ಶಾಸಕ ಮಾನವೇಂದ್ರ ಸಿಂಗ್ ಅವರು ಬುಧವಾರ (ಅಕ್ಟೋಬರ್ 17) ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.</p>.<p class="title">ರಾಜಸ್ಥಾನದ ವಿಧಾನಸಭೆ ಚುನಾವಣೆಯ ಈ ಸಂದರ್ಭದಲ್ಲಿ ಮಾನವೇಂದ್ರ ಅವರ ಈ ನಿರ್ಧಾರ ರಾಜಕೀಯವಾಗಿಮಹತ್ವ ಪಡೆದಿದೆ.ಬಿಜೆಪಿ ತೊರೆಯುವುದಾಗಿ ಕಳೆದ ತಿಂಗಳು ಬಾರ್ಮೇರ್ನಲ್ಲಿ ನಡೆದ ಸ್ವಾಭಿಮಾನ ರ್ಯಾಲಿಯಲ್ಲಿ ಮಾನವೇಂದ್ರ ಅವರು ಪ್ರಕಟಿಸಿದ್ದರು.</p>.<p class="title">‘ಮಾನವೇಂದ್ರ ಅವರು ತಮ್ಮ ಪತ್ನಿ ಚಿತ್ರಾ ಸಿಂಗ್ ಜೊತೆಗೆ ಬುಧವಾರ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ’ ಎಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ತಿಳಿಸಿದ್ದಾರೆ.</p>.<p class="title">‘ಮಾನವೇಂದ್ರ ಅವರ ನಿರ್ಧಾರವು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ರಾಜಕೀಯವಾಗಿ ಅವರು ತೆಗೆದುಕೊಂಡ ತಪ್ಪು ನಿರ್ಧಾರ ಇದು. ರಜಪೂತ ಸಮುದಾಯದ ಮತದಾರರು ಬಿಜೆಪಿ ಜೊತೆಗೇ ಇರಲಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ರಾಜೇಂದ್ರ ರಾಥೋಡ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೈಪುರ</strong>: ಬಿಜೆಪಿ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ, ಶಾಸಕ ಮಾನವೇಂದ್ರ ಸಿಂಗ್ ಅವರು ಬುಧವಾರ (ಅಕ್ಟೋಬರ್ 17) ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.</p>.<p class="title">ರಾಜಸ್ಥಾನದ ವಿಧಾನಸಭೆ ಚುನಾವಣೆಯ ಈ ಸಂದರ್ಭದಲ್ಲಿ ಮಾನವೇಂದ್ರ ಅವರ ಈ ನಿರ್ಧಾರ ರಾಜಕೀಯವಾಗಿಮಹತ್ವ ಪಡೆದಿದೆ.ಬಿಜೆಪಿ ತೊರೆಯುವುದಾಗಿ ಕಳೆದ ತಿಂಗಳು ಬಾರ್ಮೇರ್ನಲ್ಲಿ ನಡೆದ ಸ್ವಾಭಿಮಾನ ರ್ಯಾಲಿಯಲ್ಲಿ ಮಾನವೇಂದ್ರ ಅವರು ಪ್ರಕಟಿಸಿದ್ದರು.</p>.<p class="title">‘ಮಾನವೇಂದ್ರ ಅವರು ತಮ್ಮ ಪತ್ನಿ ಚಿತ್ರಾ ಸಿಂಗ್ ಜೊತೆಗೆ ಬುಧವಾರ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ’ ಎಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ತಿಳಿಸಿದ್ದಾರೆ.</p>.<p class="title">‘ಮಾನವೇಂದ್ರ ಅವರ ನಿರ್ಧಾರವು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ರಾಜಕೀಯವಾಗಿ ಅವರು ತೆಗೆದುಕೊಂಡ ತಪ್ಪು ನಿರ್ಧಾರ ಇದು. ರಜಪೂತ ಸಮುದಾಯದ ಮತದಾರರು ಬಿಜೆಪಿ ಜೊತೆಗೇ ಇರಲಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ರಾಜೇಂದ್ರ ರಾಥೋಡ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>