‘ಮೂರ್ತಿ ಪೂಜೆ ಮಾಡಿದರೂ ಹಿಂದೂ, ಪ್ರಕೃತಿ ಪೂಜಿಸಿದರೂ ಹಿಂದೂ, ದೇವನೊಬ್ಬ ಎಂದರೂ ಹಿಂದೂ, ದೇವನಿಲ್ಲ ಎಂದರೂ ಹಿಂದೂ, ಮುಕ್ಕೋಟಿ ದೇವರನ್ನು ಪೂಜಿಸಿದರೂ ಹಿಂದೂ... ಹೀಗಾಗಿಯೇ ಎಲ್ಲರನ್ನೂ ಮತ್ತು ಎಲ್ಲವನ್ನೂ ಒಳಗೊಳ್ಳುವ ಸಹಿಷ್ಣುತೆ ಹಿಂದೂ ಧರ್ಮಕ್ಕಿದೆ. ಹಿಂದೂ ಧರ್ಮ ನನ್ನ ಮೇಲೂ ಪ್ರಭಾವ ಬೀರಿದೆ. ಈ ಧರ್ಮದಿಂದಲೇ ಭಾರತದಲ್ಲಿ ಈವರೆಗೂ ಪ್ರಜಾಪ್ರಭುತ್ವ ಉಳಿದಿದೆ. ಭವಿಷ್ಯದಲ್ಲಿ ಗೊತ್ತಿಲ್ಲ’ ಎಂದು ಅಖ್ತರ್ ಹೇಳಿದ್ದಾರೆ.
‘ಭಗವಾನ್ ರಾಮ ಹಾಗೂ ಸೀತಾ ಅವರಿದ್ದ ನೆಲದಲ್ಲಿ ಜನಿಸಿದ್ದೇ ನನ್ನ ಪುಣ್ಯ. ಅವರು ಕೇವಲ ಹಿಂದೂ ದೇವರು ಮಾತ್ರವಲ್ಲ, ಈ ನೆಲದ, ಪರಂಪರೆಯ ಸ್ವರೂಪ’ ಎಂದು ಹೇಳಿದ ಅಖ್ತರ್, ಜೈ ಶ್ರೀರಾಮ್ ಮಂತ್ರವನ್ನು ಜಪಿಸಿ, ಸಭಿಕರಿಗೂ ಜಪಿಸಲು ಹೇಳಿದರು.
ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರೂ ಈ ಕಾರ್ಯಕ್ರಮದಲ್ಲಿದ್ದರು.