<p><strong>ನವದೆಹಲಿ: </strong>ತೆಲಂಗಾಣದಲ್ಲಿ ಪಶು ವೈದ್ಯೆಯ ಮೇಲೆ ನಡೆದ <a href="www.prajavani.net/tags/telangana-doctor-rape-murder-case" target="_blank">ಸಾಮೂಹಿಕ ಅತ್ಯಾಚಾರ ಪ್ರಕರಣ</a> ರಾಜ್ಯಸಭೆಯಲ್ಲಿ ಸೋಮವಾರಚರ್ಚೆಯಾಗಿದೆ. ಅತ್ಯಾಚಾರವನ್ನು ಖಂಡಿಸಿದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್, ರೇಪಿಸ್ಟ್ಗಳನ್ನು ಜನರ ಮುಂದೆ ತಂದು ಥಳಿಸಿ ಕೊಲ್ಲಬೇಕುಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.</p>.<p>ಅತ್ಯಾಚಾರ ಪ್ರಕರಣದಆರೋಪಿಗಳ ಹೆಸರನ್ನು ಬಹಿರಂಗ ಪಡಿಸುವ ಮೂಲಕ ಅವಮಾನಿಸಬೇಕುಎಂದಿದ್ದಾರೆ ಜಯಾ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/rape-on-veterinarians-fire-to-body-widespread-outrage-686177.html" target="_blank">ಪಶು ವೈದ್ಯೆ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಕೊಲೆ: ವ್ಯಾಪಕ ಆಕ್ರೋಶ </a></p>.<p>ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ರೀತಿಯ ಅತ್ಯಾಚಾರ ಕೃತ್ಯಗಳನ್ನು ತಡೆಯಲು ಯಾವ ರೀತಿಯ ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ಸರ್ಕಾರ ಉತ್ತರಿಸಬೇಕಿದೆ. ಪಶುವೈದ್ಯೆ ಅತ್ಯಾಚಾರಕ್ಕೊಳಗಾಗುವ ಒಂದು ದಿನಕ್ಕೆ ಮುನ್ನ ಇಂತದ್ದೇ ಘಟನೆ ಹೈದರಾಬಾದ್ನಲ್ಲಿ ನಡೆದಿತ್ತು ಎಂದಿದ್ದಾರೆ ಸಂಸದೆ.</p>.<p>ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಬೇಕಾದರೆ ಮಸೂದೆ ಬೇಕಿಲ್ಲ. ರಾಜಕೀಯ ಇಚ್ಛಾಶಕ್ತಿ, ಕಾರ್ಯ ನಿರ್ವಹಣೆಕೌಶಲ ಮತ್ತು ಬದಲಾದ ಮನಸ್ಥಿತಿ ಇದ್ದರೆ ಸಾಮಾಜಿಕ ಪಿಡುಗುಗಳನ್ನು ನಿವಾರಿಸಬಹುದು ಎಂದು ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/three-suspended-686637.html" target="_blank">ಹೈದರಾಬಾದ್ ಅತ್ಯಾಚಾರ ಪ್ರಕರಣ: ಮೂವರ ಪೊಲೀಸರು ಅಮಾನತು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ತೆಲಂಗಾಣದಲ್ಲಿ ಪಶು ವೈದ್ಯೆಯ ಮೇಲೆ ನಡೆದ <a href="www.prajavani.net/tags/telangana-doctor-rape-murder-case" target="_blank">ಸಾಮೂಹಿಕ ಅತ್ಯಾಚಾರ ಪ್ರಕರಣ</a> ರಾಜ್ಯಸಭೆಯಲ್ಲಿ ಸೋಮವಾರಚರ್ಚೆಯಾಗಿದೆ. ಅತ್ಯಾಚಾರವನ್ನು ಖಂಡಿಸಿದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್, ರೇಪಿಸ್ಟ್ಗಳನ್ನು ಜನರ ಮುಂದೆ ತಂದು ಥಳಿಸಿ ಕೊಲ್ಲಬೇಕುಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.</p>.<p>ಅತ್ಯಾಚಾರ ಪ್ರಕರಣದಆರೋಪಿಗಳ ಹೆಸರನ್ನು ಬಹಿರಂಗ ಪಡಿಸುವ ಮೂಲಕ ಅವಮಾನಿಸಬೇಕುಎಂದಿದ್ದಾರೆ ಜಯಾ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/rape-on-veterinarians-fire-to-body-widespread-outrage-686177.html" target="_blank">ಪಶು ವೈದ್ಯೆ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಕೊಲೆ: ವ್ಯಾಪಕ ಆಕ್ರೋಶ </a></p>.<p>ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ರೀತಿಯ ಅತ್ಯಾಚಾರ ಕೃತ್ಯಗಳನ್ನು ತಡೆಯಲು ಯಾವ ರೀತಿಯ ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ಸರ್ಕಾರ ಉತ್ತರಿಸಬೇಕಿದೆ. ಪಶುವೈದ್ಯೆ ಅತ್ಯಾಚಾರಕ್ಕೊಳಗಾಗುವ ಒಂದು ದಿನಕ್ಕೆ ಮುನ್ನ ಇಂತದ್ದೇ ಘಟನೆ ಹೈದರಾಬಾದ್ನಲ್ಲಿ ನಡೆದಿತ್ತು ಎಂದಿದ್ದಾರೆ ಸಂಸದೆ.</p>.<p>ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಬೇಕಾದರೆ ಮಸೂದೆ ಬೇಕಿಲ್ಲ. ರಾಜಕೀಯ ಇಚ್ಛಾಶಕ್ತಿ, ಕಾರ್ಯ ನಿರ್ವಹಣೆಕೌಶಲ ಮತ್ತು ಬದಲಾದ ಮನಸ್ಥಿತಿ ಇದ್ದರೆ ಸಾಮಾಜಿಕ ಪಿಡುಗುಗಳನ್ನು ನಿವಾರಿಸಬಹುದು ಎಂದು ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/three-suspended-686637.html" target="_blank">ಹೈದರಾಬಾದ್ ಅತ್ಯಾಚಾರ ಪ್ರಕರಣ: ಮೂವರ ಪೊಲೀಸರು ಅಮಾನತು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>