<p><strong>ಜಮ್ಮು: </strong>‘ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ’ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರೈಫಲ್ ಮೆನ್ ವಿಕ್ರಮ್ ಸಿಂಗ್ ನೇಗಿ (26) ಮತ್ತು ಯೋಗಂಬರ್ ಸಿಂಗ್ (27) ಹುತಾತ್ಮರಾದವರು. ಪೂಂಚ್ ಜಿಲ್ಲೆಯ ಮೆಂಧಾರ್ ಉಪ ವಿಭಾಗದ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>‘ಮೆಂಧಾರ್ ಉಪ ವಿಭಾಗದ ನರ್ಖಾಸ್ ಅರಣ್ಯದ ಸಾಮಾನ್ಯ ಪ್ರದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಗುರುವಾರ ಸಂಜೆ ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸೈನಿಕರು ಸಾವಿಗೀಡಾದರು’ ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದರು.</p>.<p>ಕರ್ತವ್ಯದ ವೇಳೆ ಇಬ್ಬರೂ ತೋರಿದ ಧೈರ್ಯ ಅಸಾಧಾರಣವಾದದ್ದು. ಅವರ ಸರ್ವೋಚ್ಛ ತ್ಯಾಗಕ್ಕಾಗಿ ದೇಶವು ಅವರಿಗೆ ಎಂದಿಗೂ ಋಣಿಯಾಗಿರುತ್ತದೆ ’ ಎಂದು ಅವರು ತಿಳಿಸಿದ್ದಾರೆ.</p>.<p>ಸೇನೆಯ ನಿಯೋಜಿತ ಕಿರಿಯ ಅಧಿಕಾರಿಯೊಬ್ಬರು ಕಾಣೆಯಾಗಿದ್ದು, ಅವರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಓದಿ:</strong><a href="https://www.prajavani.net/india-news/badal-other-akali-leaders-briefly-detained-during-protest-over-centres-bsf-jurisdiction-order-875547.html" itemprop="url" target="_blank">ಬಿಎಸ್ಎಫ್ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ; ಪಂಜಾಬ್ನಲ್ಲಿ ಭಾರಿ ವಿರೋಧ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು: </strong>‘ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ’ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರೈಫಲ್ ಮೆನ್ ವಿಕ್ರಮ್ ಸಿಂಗ್ ನೇಗಿ (26) ಮತ್ತು ಯೋಗಂಬರ್ ಸಿಂಗ್ (27) ಹುತಾತ್ಮರಾದವರು. ಪೂಂಚ್ ಜಿಲ್ಲೆಯ ಮೆಂಧಾರ್ ಉಪ ವಿಭಾಗದ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>‘ಮೆಂಧಾರ್ ಉಪ ವಿಭಾಗದ ನರ್ಖಾಸ್ ಅರಣ್ಯದ ಸಾಮಾನ್ಯ ಪ್ರದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಗುರುವಾರ ಸಂಜೆ ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸೈನಿಕರು ಸಾವಿಗೀಡಾದರು’ ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದರು.</p>.<p>ಕರ್ತವ್ಯದ ವೇಳೆ ಇಬ್ಬರೂ ತೋರಿದ ಧೈರ್ಯ ಅಸಾಧಾರಣವಾದದ್ದು. ಅವರ ಸರ್ವೋಚ್ಛ ತ್ಯಾಗಕ್ಕಾಗಿ ದೇಶವು ಅವರಿಗೆ ಎಂದಿಗೂ ಋಣಿಯಾಗಿರುತ್ತದೆ ’ ಎಂದು ಅವರು ತಿಳಿಸಿದ್ದಾರೆ.</p>.<p>ಸೇನೆಯ ನಿಯೋಜಿತ ಕಿರಿಯ ಅಧಿಕಾರಿಯೊಬ್ಬರು ಕಾಣೆಯಾಗಿದ್ದು, ಅವರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಓದಿ:</strong><a href="https://www.prajavani.net/india-news/badal-other-akali-leaders-briefly-detained-during-protest-over-centres-bsf-jurisdiction-order-875547.html" itemprop="url" target="_blank">ಬಿಎಸ್ಎಫ್ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ; ಪಂಜಾಬ್ನಲ್ಲಿ ಭಾರಿ ವಿರೋಧ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>