ಜೆಸಿಒ ಕೋನ್ಸಮ್ ಖೇದಾ ಸಿಂಗ್ ಅವರು ರಜೆಯ ಮೇಲೆ ಮನೆಗೆ ತೆರಳಿದ್ದರು. ಈ ವೇಳೆ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರನ್ನು ಅಪಹರಣ ಮಾಡಿದ್ದಾರೆ. ಇದಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಆದರೆ ಸುಲಿಗೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗಿದೆ. ಇದಕ್ಕೂ ಮುನ್ನ ಸಹ ಅವರ ಕುಟುಂಬಕ್ಕೆ ಇಂಥ ಬೆದರಿಕೆಗಳು ಬಂದಿದ್ದವು ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ.