ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ‘ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ಬೆನ್ನುಮೂಳೆ' ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ’ ಎಂದು ಹೇಳಿದ್ದಾರೆ.