<p><strong>ತಿರುವನಂತಪುರ:</strong> ಕರ್ನಾಟಕದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಗೆ ಕೇರಳ ಜೆಡಿಎಸ್ ಘಟಕ ವಿರೊಧ ವ್ಯಕ್ತಪಡಿಸಿದ್ದು ಸ್ವತಂತ್ರವಾಗಿ ಅಸ್ತಿತ್ವ ಉಳಿಸಿಕೊಳ್ಳಲಿದೆ. </p><p>ಈ ಬಗ್ಗೆ ವಿದ್ಯುತ್ ಸಚಿವ ಕೆ.ಕೃಷ್ಣನ್ಕುಟ್ಟಿ ಹೇಳಿದ್ದಾರೆ.</p><p>ಜೆಡಿಎಸ್ನ ರಾಜ್ಯ ಘಟಕವು ಸ್ವತಂತ್ರವಾಗಿ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ರಾಜ್ಯದ ವಿದ್ಯುತ್ ಸಚಿವ ಕೆ.ಕೃಷ್ಣನ್ಕುಟ್ಟಿ ಅವರು ಹೇಳಿಕೆ ನೀಡಿದ್ದಾರೆ.</p><p>‘ಬಿಜೆಪಿ ಜೊತೆಗಿನ ಮೈತ್ರಿಯು ಸ್ವೀಕಾರಾರ್ಹವಲ್ಲ. ಇದು, ಸರಿಯಾದ ನಿರ್ಧಾರವಲ್ಲ’ ಎಂದು ಕರ್ನಾಟಕದಲ್ಲಿರುವ ಪಕ್ಷದ ನಾಯಕತ್ವಕ್ಕೂ ನಾನು ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮ್ಯಾಥ್ಯೂ ಅವರಿಗೆ ತಿಳಿಸಿದ್ದೇವೆ’ ಎಂದರು.</p><p>‘ನಾವು ಬಾಂಧವ್ಯ ಕಡಿದುಕೊಳ್ಳುತ್ತಿದ್ದು, ಸ್ವತಂತ್ರವಾಗಿ ಇರುತ್ತೇವೆ ಎಂದು ತಿಳಿಸಿದೆವು. ಪಕ್ಷದ ರಾಜ್ಯ ಸಮಿತಿ ಸಭೆ ನಿರ್ಧಾರವು ಇದೇ ಆಗಿದೆ’ ಎಂದು ತಿಳಿಸಿದರು. </p><p>ಮೈತ್ರಿ ಹಿನ್ನೆಲೆಯಲ್ಲಿ, ಜೆಡಿಎಸ್ನಿಂದ ಮೈತ್ರಿ ಕಡಿದುಕೊಳ್ಳದಿರುವುದಕ್ಕೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು ಸಿಪಿಎಂ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.</p><p>ಎಲ್ಡಿಎಫ್ ಮೈತ್ರಿ ಕೂಟದ ಭಾಗವಾಗಿರುವ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಹೊಂದಿರುವುದಕ್ಕೆ ತಮ್ಮ ಸಹಮತವಿ ಇದೆ ಎಂಬುದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೂ ಇತ್ತೀಚೆಗೆ ನಿರಾಕರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕರ್ನಾಟಕದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಗೆ ಕೇರಳ ಜೆಡಿಎಸ್ ಘಟಕ ವಿರೊಧ ವ್ಯಕ್ತಪಡಿಸಿದ್ದು ಸ್ವತಂತ್ರವಾಗಿ ಅಸ್ತಿತ್ವ ಉಳಿಸಿಕೊಳ್ಳಲಿದೆ. </p><p>ಈ ಬಗ್ಗೆ ವಿದ್ಯುತ್ ಸಚಿವ ಕೆ.ಕೃಷ್ಣನ್ಕುಟ್ಟಿ ಹೇಳಿದ್ದಾರೆ.</p><p>ಜೆಡಿಎಸ್ನ ರಾಜ್ಯ ಘಟಕವು ಸ್ವತಂತ್ರವಾಗಿ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ರಾಜ್ಯದ ವಿದ್ಯುತ್ ಸಚಿವ ಕೆ.ಕೃಷ್ಣನ್ಕುಟ್ಟಿ ಅವರು ಹೇಳಿಕೆ ನೀಡಿದ್ದಾರೆ.</p><p>‘ಬಿಜೆಪಿ ಜೊತೆಗಿನ ಮೈತ್ರಿಯು ಸ್ವೀಕಾರಾರ್ಹವಲ್ಲ. ಇದು, ಸರಿಯಾದ ನಿರ್ಧಾರವಲ್ಲ’ ಎಂದು ಕರ್ನಾಟಕದಲ್ಲಿರುವ ಪಕ್ಷದ ನಾಯಕತ್ವಕ್ಕೂ ನಾನು ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮ್ಯಾಥ್ಯೂ ಅವರಿಗೆ ತಿಳಿಸಿದ್ದೇವೆ’ ಎಂದರು.</p><p>‘ನಾವು ಬಾಂಧವ್ಯ ಕಡಿದುಕೊಳ್ಳುತ್ತಿದ್ದು, ಸ್ವತಂತ್ರವಾಗಿ ಇರುತ್ತೇವೆ ಎಂದು ತಿಳಿಸಿದೆವು. ಪಕ್ಷದ ರಾಜ್ಯ ಸಮಿತಿ ಸಭೆ ನಿರ್ಧಾರವು ಇದೇ ಆಗಿದೆ’ ಎಂದು ತಿಳಿಸಿದರು. </p><p>ಮೈತ್ರಿ ಹಿನ್ನೆಲೆಯಲ್ಲಿ, ಜೆಡಿಎಸ್ನಿಂದ ಮೈತ್ರಿ ಕಡಿದುಕೊಳ್ಳದಿರುವುದಕ್ಕೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು ಸಿಪಿಎಂ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.</p><p>ಎಲ್ಡಿಎಫ್ ಮೈತ್ರಿ ಕೂಟದ ಭಾಗವಾಗಿರುವ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಹೊಂದಿರುವುದಕ್ಕೆ ತಮ್ಮ ಸಹಮತವಿ ಇದೆ ಎಂಬುದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೂ ಇತ್ತೀಚೆಗೆ ನಿರಾಕರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>