ಇದು ಬಿಹಾರದಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮೂರನೇ ಹಿಂಸಾಚಾರ ಘಟನೆಯಾಗಿದೆ. ಮೊದಲಿಗೆ ಮತದಾನ ನಡೆಯುತ್ತಿದ್ದ ಮೇ 20ರಂದು ಸರಣ್ ಲೋಕಸಭಾ ಕ್ಷೇತ್ರದ ಆರ್ಜೆಡಿ ಅಭ್ಯರ್ಥಿಯಾದ ಲಾಲು ಪ್ರಸಾದ್ ಅವರ ಪುತ್ರಿ ರೋಹಿಣಿ ಆಚಾರ್ಯ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿತ್ತು. ಇದರ ಮಾರನೇ ದಿನ ಗಲಾಟೆ ತೀವ್ರಗೊಂಡು, ಗುಂಡಿನ ದಾಳಿಯೂ ನಡೆದಿತ್ತು. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿದ್ದರು.