<p>ಪಟ್ನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಜಾರಿಗೊಳಿಸಿದ್ದ ‘ಅಗ್ನಿವೀರ್’ ಯೋಜನೆ ಕುರಿತು ಮರುಚಿಂತನೆ ನಡೆಸಬೇಕು ಎಂದು ಜನತಾದಳ (ಯು) ಬೇಡಿಕೆ ಮಂಡಿಸಿದೆ. ಈ ಮೂಲಕ ಹೊಸ ಜನಾದೇಶದ ಬಳಿಕ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರದ ಸ್ವರೂಪ ಯಾವ ರೀತಿ ಇರಬಹುದು ಎಂಬ ಸೂಚನೆಯನ್ನು ನೀಡಿದೆ.</p><p>ನೂತನ ಸರ್ಕಾರ ರಚನೆಯಲ್ಲಿ ಜೆಡಿಯು ಪಾತ್ರ ನಿರ್ಣಾಯಕವಾಗಿದೆ. ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಆಪ್ತರಾದ ಕೆ.ಸಿ.ತ್ಯಾಗಿ, ಅಗ್ನಿವೀರ್ ಯೋಜನೆಯ ಮರುಪರಿಶೀಲನೆಗೆ ಪಕ್ಷ ಬೇಡಿಕೆ ಮಂಡಿಸಲಿದೆ ಎಂದು ತಿಳಿಸಿದರು. </p><p>ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಆದರೆ, ಏಕರೂಪದ ನಾಗರಿಕ ಸಂಹಿತೆಗೆ ಕುರಿತ ತೀರ್ಮಾನವನ್ನು ಬೆಂಬಲಿಸಲಿದೆ ಎಂದು ಸ್ಪಷ್ಟಪಡಿಸಿದರು. ಅಗ್ನಿವೀರ್ ಯೋಜನೆಗೆ ವಿರೋಧವಿದೆ. ಹೀಗಾಗಿ, ಮರುಪರಿಶೀಲಿಸಲು ಕೋರುತ್ತೇವೆ. ಆದರೆ, ನಾವು ಇದನ್ನು ವಿರೋಧಿಸುತ್ತಿಲ್ಲ ಎಂದು ತ್ಯಾಗಿ ತಿಳಿಸಿದರು. </p><p>ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬುದು ಮೈತ್ರಿಗಾಗಿ ಪಕ್ಷ ಮಂಡಿಸಲಿರುವ ಮತ್ತೊಂದು ಬೇಡಿಕೆಯಾಗಿದೆ. ಇದು, ನಮ್ಮ ಮನಸ್ಸಿನಲ್ಲಿದೆ ಎಂದು ಹೇಳಿದರು.</p><p>ಜಾತಿಗಣತಿಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ ಎಂದು ತ್ಯಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಜಾತಿಗಣತಿ ಬೇಡಿಕೆ ಮಂಡಿಸಿದ್ದಕ್ಕಾಗಿ ಬಿಜೆಪಿಯು ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿತ್ತು.</p><p>ದೇಶದ ಯಾವುದೇ ರಾಜಕೀಯ ಪಕ್ಷವು ಜಾತಿ ಆಧಾರಿತ ಗಣತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಬಿಹಾರ ಈ ವಿಷಯದಲ್ಲಿ ಪಂಕ್ತಿ ಹಾಕಿಕೊಟ್ಟಿದೆ. ಸರ್ವಪಕ್ಷ ನಿಯೋಗ ಭೇಟಿ ಮಾಡಿದ್ದಾಗ ಪ್ರಧಾನಿಕೂಡಾ ವಿರೋಧಿಸಿಲ್ಲ. ಜಾತಿಗಣತಿಯು ಈ ಹೊತ್ತಿನ ಅಗತ್ಯವಾಗಿದೆ. ಅದಕ್ಕಾಗಿ ನಾವು ಒತ್ತಾಯಿಸುತ್ತೇವೆ ಎಂದು ಹೇಳಿದರು.</p><p>ಇದರ ಜೊತೆಗೆ, ಬಿಹಾರದಲ್ಲಿ ಪ್ರಸ್ತುತ ಜೆಡಿಯುಗೆ ಇರುವ ಜನಬೆಂಬಲದ ಲಾಭ ಪಡೆಯುವ ಕ್ರಮವಾಗಿ ಅವಧಿಪೂರ್ವ ಚುನಾವಣೆ ನಡೆಸಬೇಕು ಎಂಬ ಬೇಡಿಕೆಯನ್ನು ಜೆಡಿಯು ಮಂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಟ್ನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಜಾರಿಗೊಳಿಸಿದ್ದ ‘ಅಗ್ನಿವೀರ್’ ಯೋಜನೆ ಕುರಿತು ಮರುಚಿಂತನೆ ನಡೆಸಬೇಕು ಎಂದು ಜನತಾದಳ (ಯು) ಬೇಡಿಕೆ ಮಂಡಿಸಿದೆ. ಈ ಮೂಲಕ ಹೊಸ ಜನಾದೇಶದ ಬಳಿಕ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರದ ಸ್ವರೂಪ ಯಾವ ರೀತಿ ಇರಬಹುದು ಎಂಬ ಸೂಚನೆಯನ್ನು ನೀಡಿದೆ.</p><p>ನೂತನ ಸರ್ಕಾರ ರಚನೆಯಲ್ಲಿ ಜೆಡಿಯು ಪಾತ್ರ ನಿರ್ಣಾಯಕವಾಗಿದೆ. ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಆಪ್ತರಾದ ಕೆ.ಸಿ.ತ್ಯಾಗಿ, ಅಗ್ನಿವೀರ್ ಯೋಜನೆಯ ಮರುಪರಿಶೀಲನೆಗೆ ಪಕ್ಷ ಬೇಡಿಕೆ ಮಂಡಿಸಲಿದೆ ಎಂದು ತಿಳಿಸಿದರು. </p><p>ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಆದರೆ, ಏಕರೂಪದ ನಾಗರಿಕ ಸಂಹಿತೆಗೆ ಕುರಿತ ತೀರ್ಮಾನವನ್ನು ಬೆಂಬಲಿಸಲಿದೆ ಎಂದು ಸ್ಪಷ್ಟಪಡಿಸಿದರು. ಅಗ್ನಿವೀರ್ ಯೋಜನೆಗೆ ವಿರೋಧವಿದೆ. ಹೀಗಾಗಿ, ಮರುಪರಿಶೀಲಿಸಲು ಕೋರುತ್ತೇವೆ. ಆದರೆ, ನಾವು ಇದನ್ನು ವಿರೋಧಿಸುತ್ತಿಲ್ಲ ಎಂದು ತ್ಯಾಗಿ ತಿಳಿಸಿದರು. </p><p>ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬುದು ಮೈತ್ರಿಗಾಗಿ ಪಕ್ಷ ಮಂಡಿಸಲಿರುವ ಮತ್ತೊಂದು ಬೇಡಿಕೆಯಾಗಿದೆ. ಇದು, ನಮ್ಮ ಮನಸ್ಸಿನಲ್ಲಿದೆ ಎಂದು ಹೇಳಿದರು.</p><p>ಜಾತಿಗಣತಿಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ ಎಂದು ತ್ಯಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಜಾತಿಗಣತಿ ಬೇಡಿಕೆ ಮಂಡಿಸಿದ್ದಕ್ಕಾಗಿ ಬಿಜೆಪಿಯು ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿತ್ತು.</p><p>ದೇಶದ ಯಾವುದೇ ರಾಜಕೀಯ ಪಕ್ಷವು ಜಾತಿ ಆಧಾರಿತ ಗಣತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಬಿಹಾರ ಈ ವಿಷಯದಲ್ಲಿ ಪಂಕ್ತಿ ಹಾಕಿಕೊಟ್ಟಿದೆ. ಸರ್ವಪಕ್ಷ ನಿಯೋಗ ಭೇಟಿ ಮಾಡಿದ್ದಾಗ ಪ್ರಧಾನಿಕೂಡಾ ವಿರೋಧಿಸಿಲ್ಲ. ಜಾತಿಗಣತಿಯು ಈ ಹೊತ್ತಿನ ಅಗತ್ಯವಾಗಿದೆ. ಅದಕ್ಕಾಗಿ ನಾವು ಒತ್ತಾಯಿಸುತ್ತೇವೆ ಎಂದು ಹೇಳಿದರು.</p><p>ಇದರ ಜೊತೆಗೆ, ಬಿಹಾರದಲ್ಲಿ ಪ್ರಸ್ತುತ ಜೆಡಿಯುಗೆ ಇರುವ ಜನಬೆಂಬಲದ ಲಾಭ ಪಡೆಯುವ ಕ್ರಮವಾಗಿ ಅವಧಿಪೂರ್ವ ಚುನಾವಣೆ ನಡೆಸಬೇಕು ಎಂಬ ಬೇಡಿಕೆಯನ್ನು ಜೆಡಿಯು ಮಂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>