<p><strong>ಗರ್ಹ್ವಾ, ಜಾರ್ಖಂಡ್:</strong> ‘ಜಾರ್ಖಂಡ್ಗೆ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ₹2 ಲಕ್ಷ ಕೋಟಿ ಮೊತ್ತದ ವಿವಿಧ ಯೋಜನೆಗಳು ಜಾರಿ ಹಂತದಲ್ಲಿವೆ’ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.</p>.<p>ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಛತ್ತೀಸ್ಗಢ– ಜಾರ್ಖಂಡ್ ನಡುವೆ 1,330 ಕೋಟಿ ವೆಚ್ಚದ ನಾಲ್ಕು ಪಥದ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ರಾಜ್ಯವು ದೊಡ್ಡ ಪ್ರಮಾಣದಲ್ಲಿ ಖನಿಜ ಸಂಪನ್ಮೂಲಗಳನ್ನು ಹೊಂದಿದ್ದು, ಹೆದ್ದಾರಿ ಕ್ಷೇತ್ರದಲ್ಲಿ ಅಭೂತಪೂರ್ವ ಬೆಳವಣಿಗೆ ಸಾಧಿಸಲಿದೆ’ ಎಂದು ತಿಳಿಸಿದರು.</p>.<p>‘ನಾವು ಈಗಾಗಲೇ ₹40 ಸಾವಿರ ಕೋಟಿ ವೆಚ್ಚದ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ₹70 ಸಾವಿರ ಕೋಟಿ ವೆಚ್ಚದ ಯೋಜನೆಗಳು ಜಾರಿ ಹಂತದಲ್ಲಿವೆ. ₹75 ಸಾವಿರ ಕೋಟಿ ವೆಚ್ಚದ ಯೋಜನೆಗಳು ಅನುಮೋದನೆ ಹಂತದಲ್ಲಿವೆ’ ಎಂದು ಮಾಹಿತಿ ನೀಡಿದರು.</p>.<p>‘₹36 ಸಾವಿರ ಕೋಟಿ ವೆಚ್ಚದಲ್ಲಿ ವಾರಾಣಸಿ–ರಾಂಚಿ–ಕೋಲ್ಕತ್ತ ಗ್ರೀನ್ ಕಾರಿಡಾರ್ 2028ರ ಮಾರ್ಚ್ ಒಳಗಾಗಿ ನಿರ್ಮಾಣವಾಗಲಿದ್ದು, ರಾಂಚಿ– ವಾರಾಣಸಿ ಮಾರ್ಗವು 2028ರ ಜನವರಿ ಒಳಗಾಗಿ ನಿರ್ಮಾಣವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗರ್ಹ್ವಾ, ಜಾರ್ಖಂಡ್:</strong> ‘ಜಾರ್ಖಂಡ್ಗೆ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ₹2 ಲಕ್ಷ ಕೋಟಿ ಮೊತ್ತದ ವಿವಿಧ ಯೋಜನೆಗಳು ಜಾರಿ ಹಂತದಲ್ಲಿವೆ’ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.</p>.<p>ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಛತ್ತೀಸ್ಗಢ– ಜಾರ್ಖಂಡ್ ನಡುವೆ 1,330 ಕೋಟಿ ವೆಚ್ಚದ ನಾಲ್ಕು ಪಥದ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ರಾಜ್ಯವು ದೊಡ್ಡ ಪ್ರಮಾಣದಲ್ಲಿ ಖನಿಜ ಸಂಪನ್ಮೂಲಗಳನ್ನು ಹೊಂದಿದ್ದು, ಹೆದ್ದಾರಿ ಕ್ಷೇತ್ರದಲ್ಲಿ ಅಭೂತಪೂರ್ವ ಬೆಳವಣಿಗೆ ಸಾಧಿಸಲಿದೆ’ ಎಂದು ತಿಳಿಸಿದರು.</p>.<p>‘ನಾವು ಈಗಾಗಲೇ ₹40 ಸಾವಿರ ಕೋಟಿ ವೆಚ್ಚದ ಹೆದ್ದಾರಿ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ₹70 ಸಾವಿರ ಕೋಟಿ ವೆಚ್ಚದ ಯೋಜನೆಗಳು ಜಾರಿ ಹಂತದಲ್ಲಿವೆ. ₹75 ಸಾವಿರ ಕೋಟಿ ವೆಚ್ಚದ ಯೋಜನೆಗಳು ಅನುಮೋದನೆ ಹಂತದಲ್ಲಿವೆ’ ಎಂದು ಮಾಹಿತಿ ನೀಡಿದರು.</p>.<p>‘₹36 ಸಾವಿರ ಕೋಟಿ ವೆಚ್ಚದಲ್ಲಿ ವಾರಾಣಸಿ–ರಾಂಚಿ–ಕೋಲ್ಕತ್ತ ಗ್ರೀನ್ ಕಾರಿಡಾರ್ 2028ರ ಮಾರ್ಚ್ ಒಳಗಾಗಿ ನಿರ್ಮಾಣವಾಗಲಿದ್ದು, ರಾಂಚಿ– ವಾರಾಣಸಿ ಮಾರ್ಗವು 2028ರ ಜನವರಿ ಒಳಗಾಗಿ ನಿರ್ಮಾಣವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>