ಬುಡಕಟ್ಟು ಸಂಘಟನೆಗಳ ಪ್ರತಿಭಟನೆ
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ತನಿಖಾ ಸಂಸ್ಥೆಗಳ ಮೂಲಕ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿ ಆಡಳಿತಾರೂಢ ಜೆಎಂಎಂ ಹಾಗೂ ವಿವಿಧ ಬುಡಕಟ್ಟು ಸಂಘಟನೆಗಳು ಶನಿವಾರ ಜಾರ್ಖಡ್ನಾದ್ಯಂತ ಪ್ರತಿಭಟಿಸಿದವು. ಬಿಲ್ಲು–ಬಾಣಗಳೊಂದಿಗೆ ಬುಡಕಟ್ಟು ಜನರು ಹಾಗೂ ಜೆಎಂಎಂ ಕಾರ್ಯಕರ್ತರು ಸೊರೇನ್ ಅವರ ವಿಚಾರಣೆ ನಡೆಯುತ್ತಿದ್ದ ಅಧಿಕೃತ ನಿವಾಸದಿಂದ ಅನತಿ ದೂರದಲ್ಲಿ ಪ್ರತಿಭಟನೆ ನಡೆಸಿದರು. ಬುಡಕಟ್ಟು ಮುಖ್ಯಮಂತ್ರಿಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ದೂರಿರುವ ಆದಿವಾಸಿ ಸಂಘಟನೆಯು ಗಿರಿದಿಹ್–ದುಮ್ರಿ ರಸ್ತೆ ತಡೆ ನಡೆಸಿದೆ. ‘ಜೆಎಂಎಂ ಪ್ರತಿಭಟನೆಗೆ ಕರೆ ನೀಡಿಲ್ಲ. ಅದು ಸ್ವಯಂಪ್ರೇರಿತ’ ಎಂದು ಬುಡಕಟ್ಟು ಜನಾಂಗದವರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದಾರೆ.