<p><strong>ರಾಂಚಿ:</strong> ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೆ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಸಮರ ಸಾರಿದ್ದಾರೆ.</p><p>ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿರುವ ಕಲ್ಲಿದ್ದಲು ಬಾಕಿ ಮೊತ್ತ ₹1.36 ಲಕ್ಷ ಕೋಟಿ ಪಡೆಯಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಮಂತ್ ಸೋರೆನ್ ಹೇಳಿದ್ದಾರೆ.</p>.<p>ಸೋರೆನ್ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ನಡೆದ ಕ್ಯಾಬಿನಟ್ ಸಭೆಯಲ್ಲಿ ಕೇಂದ್ರದ ವಿರುದ್ಧದ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ಚುನಾವಣೆ ಪೂರ್ವದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಸೋರೆನ್ ‘ಪ್ರಧಾನಿ ಮತ್ತು ಗೃಹ ಸಚಿವರು ಜಾರ್ಖಂಡ್ ರಾಜ್ಯಕ್ಕೆ ಬರುತ್ತಿದ್ದಾರೆ. ಬಾಕಿ ಇರುವ ₹ 1.36 ಲಕ್ಷ ಕೋಟಿ ಬಿಡುಗಡೆ ಮಾಡಿ ಎಂದು ನಾನು ಮತ್ತೊಮ್ಮೆ ಕೈ ಮುಗಿದು ನಿಮ್ಮನ್ನು ವಿನಂತಿಸುತ್ತೇನೆ. ಈ ಮೊತ್ತ ರಾಜ್ಯಕ್ಕೆ ಅತ್ಯಂತ ಮುಖ್ಯವಾಗಿದೆ‘ ಎಂದು ಹೇಳಿದ್ದರು.</p><p>ಮುಂದುವರೆದು ‘ನಾನು ನನ್ನ ಬಿಜೆಪಿ ಸಂಸದರಿಗೆ ನಮ್ಮ ಬಾಕಿ ಹಣವನ್ನು ಪಡೆಯಲು ಸಹಾಯ ಮಾಡಲು ವಿನಂತಿಸುತ್ತೇನೆ‘ ಎಂದು ಪ್ರಧಾನಿಗೆ ಬರೆದ ಪತ್ರದ ಪ್ರತಿಯನ್ನು ಹಂಚಿಕೊಂಡು ಸೋರೆನ್ ಪೋಸ್ಟ್ ಮಾಡಿದ್ದರು.</p><p>ಇದೀಗ ಸೋರೆನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.</p>.ಜಾರ್ಖಂಡ್: ವಿಶ್ವಾಸ ಮತ ಪಡೆದ ಹೇಮಂತ್ ಸೋರೆನ್.ಪ್ರಧಾನಿ ಭೇಟಿ ಮಾಡಿದ ಜಾರ್ಖಂಡ್ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೋರೆನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೆ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಸಮರ ಸಾರಿದ್ದಾರೆ.</p><p>ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿರುವ ಕಲ್ಲಿದ್ದಲು ಬಾಕಿ ಮೊತ್ತ ₹1.36 ಲಕ್ಷ ಕೋಟಿ ಪಡೆಯಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಮಂತ್ ಸೋರೆನ್ ಹೇಳಿದ್ದಾರೆ.</p>.<p>ಸೋರೆನ್ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ನಡೆದ ಕ್ಯಾಬಿನಟ್ ಸಭೆಯಲ್ಲಿ ಕೇಂದ್ರದ ವಿರುದ್ಧದ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ಚುನಾವಣೆ ಪೂರ್ವದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಸೋರೆನ್ ‘ಪ್ರಧಾನಿ ಮತ್ತು ಗೃಹ ಸಚಿವರು ಜಾರ್ಖಂಡ್ ರಾಜ್ಯಕ್ಕೆ ಬರುತ್ತಿದ್ದಾರೆ. ಬಾಕಿ ಇರುವ ₹ 1.36 ಲಕ್ಷ ಕೋಟಿ ಬಿಡುಗಡೆ ಮಾಡಿ ಎಂದು ನಾನು ಮತ್ತೊಮ್ಮೆ ಕೈ ಮುಗಿದು ನಿಮ್ಮನ್ನು ವಿನಂತಿಸುತ್ತೇನೆ. ಈ ಮೊತ್ತ ರಾಜ್ಯಕ್ಕೆ ಅತ್ಯಂತ ಮುಖ್ಯವಾಗಿದೆ‘ ಎಂದು ಹೇಳಿದ್ದರು.</p><p>ಮುಂದುವರೆದು ‘ನಾನು ನನ್ನ ಬಿಜೆಪಿ ಸಂಸದರಿಗೆ ನಮ್ಮ ಬಾಕಿ ಹಣವನ್ನು ಪಡೆಯಲು ಸಹಾಯ ಮಾಡಲು ವಿನಂತಿಸುತ್ತೇನೆ‘ ಎಂದು ಪ್ರಧಾನಿಗೆ ಬರೆದ ಪತ್ರದ ಪ್ರತಿಯನ್ನು ಹಂಚಿಕೊಂಡು ಸೋರೆನ್ ಪೋಸ್ಟ್ ಮಾಡಿದ್ದರು.</p><p>ಇದೀಗ ಸೋರೆನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.</p>.ಜಾರ್ಖಂಡ್: ವಿಶ್ವಾಸ ಮತ ಪಡೆದ ಹೇಮಂತ್ ಸೋರೆನ್.ಪ್ರಧಾನಿ ಭೇಟಿ ಮಾಡಿದ ಜಾರ್ಖಂಡ್ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೋರೆನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>