ಮುಂಬೈನ ಆಸೀಯನ್ ಹಾರ್ಟ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್ ಯಾದವ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರಪಿಂಡ ಮತ್ತು ಕಣ್ಣಿನಪೊರೆಗೆ ಸಂಬಂಧಿಸಿದಂತೆ ಮತ್ತೆ ಮೂರು ಶಸ್ತ್ರಚಿಕಿತ್ಸೆ ನಡೆಸಬೇಕು ಎಂದು ವೈದ್ಯರು ತಿಳಿಸಿರುವುದರಿಂದ ಮತ್ತೆ ಮೂರು ತಿಂಗಳು ಜಾಮೀನು ವಿಸ್ತರಿಸುವಂತೆ ನ್ಯಾಯಾಲಯಕ್ಕೆಲಾಲು ಪ್ರಸಾದ್ ಅವರ ವಕೀಲ ಪ್ರಬಾತ್ ಕುಮಾರ್ ಮನವಿ ಮಾಡಿದರು. ಈ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.