ರಾಂಚಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಜಾರ್ಖಂಡ್ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳಿಂದ ಬಂಧನವಾಗಿರುವ ಸೊರೇನ್, ಸೋಮವಾರ ಜಾಮೀನು ಅರ್ಜಿ ಸಲ್ಲಿಸಿದ್ದು, ತ್ವರಿತ ವಿಚಾರಣೆಗೆ ಕೋರಿದ್ದಾರೆ.
‘ಜೆಎಂಎಂ ಪಕ್ಷದ ಮುಖಂಡ ಸೊರೇನ್ ಅವರು ರಾಜಕೀಯ ಪಿತೂರಿಯ ಸಂತ್ರಸ್ತರಾಗಿದ್ದಾರೆ’ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಪೀಠಕ್ಕೆ ತಿಳಿಸಿದರು.
ಈ ವೇಳೆ ತನ್ನ ಅಭಿಪ್ರಾಯ ತಿಳಿಸುವಂತೆ ಇ.ಡಿಗೆ ಸೂಚಿಸಿದ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಜೂನ್ 10ರಂದು ನಿಗದಿಪಡಿಸಿದೆ.