<p><strong>ರಾಂಚಿ:</strong> ಜಾರ್ಖಂಡ್ನ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಐವರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಶುಕ್ರವಾರ ತಡರಾತ್ರಿ ಸೆರೈಕೆಲಾ–ಖಾರ್ಸಾವಾನ್ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮತ್ತು ಏಳು ವರ್ಷದ ಮಗ ಸಾವಿಗೀಡಾಗಿದ್ದಾರೆ. ರಾಜನಗರ ಬ್ಲಾಕ್ನ ದಂಡು ಗ್ರಾಮದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಖಾರ್ಸಾವಾನ್ ಪ್ರದೇಶದ ಶಿಮ್ಲಾದಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಮನೆಯ ಗೋಡೆ ಕುಸಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಗೌರವ್ ಕುಮಾರ್ ತಿಳಿಸಿದ್ದಾರೆ.</p><p>ಮತ್ತೊಂದೆಡೆ ಉಕ್ಕಿ ಹರಿಯುತ್ತಿರುವ ಸಿಯಾರಿ ನದಿಯಲ್ಲಿ ದಂಪತಿ ಕೊಚ್ಚಿಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ರಾಜ್ಯದಾದ್ಯಂತ ನಿರಂತರ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಮನೆಗಳು ಕುಸಿದಿದ್ದು, ರಸ್ತೆಗಳು ಮತ್ತು ಕೃಷಿಭೂಮಿ ಜಲಾವೃತಗೊಂಡಿದೆ. </p><p>ರಾಂಚಿಯ ಪಿಸ್ಕಾ ರೈಲು ನಿಲ್ದಾಣದ ಬಳಿ ನಿರ್ಮಾಣ ಹಂತದ ಮೇಲ್ಸೇತುವೆಯ ಎರಡೂ ಬದಿಗಳಲ್ಲಿನ ಕಾಂಕ್ರೀಟ್ ಚಪ್ಪಡಿಗಳು ಕುಸಿದು, ಸಂಚಾರ ದಟ್ಟಣೆ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಆಗಸ್ಟ್ 25ರವರೆಗೆ ರಾಜ್ಯದ ಹಲವೆಡೆ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜಾರ್ಖಂಡ್ನ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಐವರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಶುಕ್ರವಾರ ತಡರಾತ್ರಿ ಸೆರೈಕೆಲಾ–ಖಾರ್ಸಾವಾನ್ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮತ್ತು ಏಳು ವರ್ಷದ ಮಗ ಸಾವಿಗೀಡಾಗಿದ್ದಾರೆ. ರಾಜನಗರ ಬ್ಲಾಕ್ನ ದಂಡು ಗ್ರಾಮದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಖಾರ್ಸಾವಾನ್ ಪ್ರದೇಶದ ಶಿಮ್ಲಾದಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಮನೆಯ ಗೋಡೆ ಕುಸಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಗೌರವ್ ಕುಮಾರ್ ತಿಳಿಸಿದ್ದಾರೆ.</p><p>ಮತ್ತೊಂದೆಡೆ ಉಕ್ಕಿ ಹರಿಯುತ್ತಿರುವ ಸಿಯಾರಿ ನದಿಯಲ್ಲಿ ದಂಪತಿ ಕೊಚ್ಚಿಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ರಾಜ್ಯದಾದ್ಯಂತ ನಿರಂತರ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಮನೆಗಳು ಕುಸಿದಿದ್ದು, ರಸ್ತೆಗಳು ಮತ್ತು ಕೃಷಿಭೂಮಿ ಜಲಾವೃತಗೊಂಡಿದೆ. </p><p>ರಾಂಚಿಯ ಪಿಸ್ಕಾ ರೈಲು ನಿಲ್ದಾಣದ ಬಳಿ ನಿರ್ಮಾಣ ಹಂತದ ಮೇಲ್ಸೇತುವೆಯ ಎರಡೂ ಬದಿಗಳಲ್ಲಿನ ಕಾಂಕ್ರೀಟ್ ಚಪ್ಪಡಿಗಳು ಕುಸಿದು, ಸಂಚಾರ ದಟ್ಟಣೆ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಆಗಸ್ಟ್ 25ರವರೆಗೆ ರಾಜ್ಯದ ಹಲವೆಡೆ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>