ಬೆಳಿಗ್ಗೆ 11 ಗಂಟೆಗೆ ಆಲಂ ಇ.ಡಿ ಕಚೇರಿಗೆ ತಲುಪಿದರು. ಕಚೇರಿಗೆ ಒಳಗೆ ಪ್ರವೇಶಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕಾನೂನಿಗೆ ಬದ್ಧನಾಗಿದ್ದೇನೆ, ಇಂದು ವಿಚಾರಣೆಯನ್ನು ಎದುರಿಸಲು ಇಲ್ಲಿಗೆ ಬಂದಿದ್ದೇನೆ’ ಎಂದು ಹೇಳಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮೇ 14ರಂದು ವಿಚಾರಣೆಗೆ ಹಾಜರಾಗುವಂತೆ ಆಲಂಗೀರ್ ಆಲಂ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ನೋಟಿಸ್ ನೀಡಿತ್ತು.
ಇತ್ತೀಚೆಗೆ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಗೆಲಸದ ವ್ಯಕ್ತಿಯ ಮನೆಯಲ್ಲಿ ₹32 ಕೋಟಿ ಹಣವನ್ನು ಇ.ಡಿ ಪತ್ತೆ ಹಚ್ಚಿತ್ತು. ಇದಾದ ಬಳಿಕ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರನ್ನು ಬಂಧಿಸಿತ್ತು.
ಈ ಪ್ರಕರಣದ ಸಂಬಂಧ ರಾಂಚಿಯಲ್ಲಿರುವ ಇ.ಡಿ ಕಚೇರಿಗೆ ಮಂಗಳವಾರ (ಮೇ 14) ಹಾಜರಾಗಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆ ದಾಖಲಿಸುವಂತೆ ಆಲಂ ಅವರಿಗೆ ಸೂಚಿಸಲಾಗಿತ್ತು. ಈ ಪ್ರಕರಣವು ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದೆ ಎನ್ನಲಾಗಿದೆ.