<p><strong>ರಾಂಚಿ:</strong> ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ (ಜೆಎಂಎಂ) ಚಂಪೈ ಸೊರೇನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.</p><p>ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.</p>.ಜಾರ್ಖಂಡ್ ಮಾಜಿ ಸಿಎಂ ಸೊರೇನ್ ಬಂಧನ; ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಕಾರ.<p>ಚಂಪೈ ಅವರ ಜತೆ ಕಾಂಗ್ರೆಸ್ನ ಅಲಂಗಿರ್ ಆಲಂ ಹಾಗೂ ಆರ್ಜೆಡಿಯಯ ಸತ್ಯಾನಂದ್ ಭೋಕ್ತ ಅವರು ಸಚಿವರಾಗಿ ಶಪಥಗೈದರು.</p><p>ರಾಜಭವನದ ದರ್ಬಾರ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದ ಹಿರಿಯ ನಾಯಕರು ಹಾಜರಿದ್ದರು. ಬುಡಕಟ್ಟು ಜನಾಂಗಕ್ಕೆ ಸೇರಿದ 67 ವರ್ಷದ ಚಂಪೈ ಅವರು ರಾಜ್ಯದ 12ನೇ ಮುಖ್ಯಮಂತ್ರಿ ಎನಿಸಿಕೊಂಡರು.</p><p>ಹಣ ಅಕ್ರಮ ವರ್ಗಾವಣೆ ಸಂಬಂಧ ಇ.ಡಿ ಇಕ್ಕಳದಲ್ಲಿ ಸಿಲುಕಿಕೊಂಡಿದ್ದ ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಚಂಪೈ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. </p>.'ಜಾರ್ಖಂಡ್ ಟೈಗರ್' ಎನಿಸಿದ್ದ ಚಂಪೈ ಸೊರೇನ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.<p>ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ‘ಹೇಮಂತ್ ಸೊರೇನ್ ಅವರು ಜಾರಿಗೆ ತಂದಿದ್ದ ಕಲ್ಯಾಣ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವೆ. ಜಾರ್ಖಂಡ್ನ ಅಭಿವೃದ್ಧಿಗೆ ಬದ್ಧ. ಜಲ, ಅರಣ್ಯ ಹಾಗೂ ಭೂಮಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಹೇಳಿದರು.</p><p>ಬಹುಮತ ಸಾಬೀತು ಪಡಿಸಲು ಚಂಪೈ ಸೊರೇನ್ ಅವರಿಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಹೇಳಿದ್ದಾರೆ. ಅಲ್ಲದೆ ನಮ್ಮ ಮೈತ್ರಿ ಗಟ್ಟಿಯಾಗಿದೆ. ನಾವು ಒಗ್ಗಟ್ಟಾಗಿದ್ದು, ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p> .ಇ.ಡಿ ಬಂಧನ: ಹೈಕೋರ್ಟ್ ಮೊರೆ ಹೋದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ (ಜೆಎಂಎಂ) ಚಂಪೈ ಸೊರೇನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.</p><p>ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.</p>.ಜಾರ್ಖಂಡ್ ಮಾಜಿ ಸಿಎಂ ಸೊರೇನ್ ಬಂಧನ; ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಕಾರ.<p>ಚಂಪೈ ಅವರ ಜತೆ ಕಾಂಗ್ರೆಸ್ನ ಅಲಂಗಿರ್ ಆಲಂ ಹಾಗೂ ಆರ್ಜೆಡಿಯಯ ಸತ್ಯಾನಂದ್ ಭೋಕ್ತ ಅವರು ಸಚಿವರಾಗಿ ಶಪಥಗೈದರು.</p><p>ರಾಜಭವನದ ದರ್ಬಾರ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದ ಹಿರಿಯ ನಾಯಕರು ಹಾಜರಿದ್ದರು. ಬುಡಕಟ್ಟು ಜನಾಂಗಕ್ಕೆ ಸೇರಿದ 67 ವರ್ಷದ ಚಂಪೈ ಅವರು ರಾಜ್ಯದ 12ನೇ ಮುಖ್ಯಮಂತ್ರಿ ಎನಿಸಿಕೊಂಡರು.</p><p>ಹಣ ಅಕ್ರಮ ವರ್ಗಾವಣೆ ಸಂಬಂಧ ಇ.ಡಿ ಇಕ್ಕಳದಲ್ಲಿ ಸಿಲುಕಿಕೊಂಡಿದ್ದ ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಚಂಪೈ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. </p>.'ಜಾರ್ಖಂಡ್ ಟೈಗರ್' ಎನಿಸಿದ್ದ ಚಂಪೈ ಸೊರೇನ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.<p>ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ‘ಹೇಮಂತ್ ಸೊರೇನ್ ಅವರು ಜಾರಿಗೆ ತಂದಿದ್ದ ಕಲ್ಯಾಣ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವೆ. ಜಾರ್ಖಂಡ್ನ ಅಭಿವೃದ್ಧಿಗೆ ಬದ್ಧ. ಜಲ, ಅರಣ್ಯ ಹಾಗೂ ಭೂಮಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಹೇಳಿದರು.</p><p>ಬಹುಮತ ಸಾಬೀತು ಪಡಿಸಲು ಚಂಪೈ ಸೊರೇನ್ ಅವರಿಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಹೇಳಿದ್ದಾರೆ. ಅಲ್ಲದೆ ನಮ್ಮ ಮೈತ್ರಿ ಗಟ್ಟಿಯಾಗಿದೆ. ನಾವು ಒಗ್ಗಟ್ಟಾಗಿದ್ದು, ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p> .ಇ.ಡಿ ಬಂಧನ: ಹೈಕೋರ್ಟ್ ಮೊರೆ ಹೋದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>