<p><strong>ಚಾಯಿಬಾಸಾ</strong>: ಜಾರ್ಖಂಡ್ನ ಪಶ್ಚಿಮ ಸಿಂಹಭೂಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಬೃಹತ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ನಕ್ಸಲ್ ಸಂಘಟನೆಯ ಉನ್ನತ ನಾಯಕ ಸೇರಿದಂತೆ 15 ನಕ್ಸಲರು ಗುರುವಾರ ಹತ್ಯೆಯಾಗಿದ್ದಾರೆ.</p>.<p>ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ‘ಕೋಬ್ರಾ’ ಘಟಕದ 1500 ಸಿಬ್ಬಂದಿ ಮತ್ತು ಪೊಲೀಸರು ಸರಂಡಾ ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರಿಂದ ಗುಂಡಿನ ದಾಳಿ ನಡೆದಿದೆ. ಭದ್ರತಾ ಸಿಬ್ಬಂದಿಯು ಪ್ರತಿದಾಳಿ ನಡೆಸಿದ್ದಾರೆ.</p>.<p>15 ನಕ್ಸಲರ ಮೃತದೇಹ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಕ್ಸಲರ ಪ್ರಮುಖ ನಾಯಕ ಪತಿರಾಂ ಮಾಝಿ ಅಲಿಯಾಸ್ ಅನಲ್ ದಾ ಮೃತಪಟ್ಟಿದ್ದಾನೆ. 35 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ ಆತನನ್ನು ಹುಡುಕಿಕೊಟ್ಟವರಿಗೆ ₹1 ಕೋಟಿ ಬಹುಮಾನ ಘೋಷಣೆಯಾಗಿತ್ತು.</p>.<p>ಕಾರ್ಯಾಚರಣೆ ಮಂಗಳವಾರವೇ ಆರಂಭಗೊಂಡಿದ್ದು, ಗುರುವಾರವೂ ಮುಂದುವರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಯಿಬಾಸಾ</strong>: ಜಾರ್ಖಂಡ್ನ ಪಶ್ಚಿಮ ಸಿಂಹಭೂಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಬೃಹತ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ನಕ್ಸಲ್ ಸಂಘಟನೆಯ ಉನ್ನತ ನಾಯಕ ಸೇರಿದಂತೆ 15 ನಕ್ಸಲರು ಗುರುವಾರ ಹತ್ಯೆಯಾಗಿದ್ದಾರೆ.</p>.<p>ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ‘ಕೋಬ್ರಾ’ ಘಟಕದ 1500 ಸಿಬ್ಬಂದಿ ಮತ್ತು ಪೊಲೀಸರು ಸರಂಡಾ ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರಿಂದ ಗುಂಡಿನ ದಾಳಿ ನಡೆದಿದೆ. ಭದ್ರತಾ ಸಿಬ್ಬಂದಿಯು ಪ್ರತಿದಾಳಿ ನಡೆಸಿದ್ದಾರೆ.</p>.<p>15 ನಕ್ಸಲರ ಮೃತದೇಹ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಕ್ಸಲರ ಪ್ರಮುಖ ನಾಯಕ ಪತಿರಾಂ ಮಾಝಿ ಅಲಿಯಾಸ್ ಅನಲ್ ದಾ ಮೃತಪಟ್ಟಿದ್ದಾನೆ. 35 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ ಆತನನ್ನು ಹುಡುಕಿಕೊಟ್ಟವರಿಗೆ ₹1 ಕೋಟಿ ಬಹುಮಾನ ಘೋಷಣೆಯಾಗಿತ್ತು.</p>.<p>ಕಾರ್ಯಾಚರಣೆ ಮಂಗಳವಾರವೇ ಆರಂಭಗೊಂಡಿದ್ದು, ಗುರುವಾರವೂ ಮುಂದುವರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>