<p><strong>ಚಾಯಿಬಾಸಾ (ಜಾರ್ಖಂಡ್):</strong> ಜಾರ್ಖಂಡ್ನ ಪಶ್ಚಿಮ ಸಿಂಗಬುಮ್ ಜಿಲ್ಲೆಯ ಕೊಲ್ಹಾನ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಗೋಯಿಲ್ಕೆರಾ ಮತ್ತು ಟೊಂಟೊ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಜಿಲ್ಲಾ ಪೊಲೀಸರು ಮತ್ತು ಸಿಆರ್ಪಿಎಫ್ ಜಂಟಿಯಾಗಿ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪಶ್ಚಿಮ ಸಿಂಗಬುಮ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ರೇಣು ತಿಳಿಸಿದ್ದಾರೆ.</p>.<p>ಈ ಕ್ಷಣದಲ್ಲಿ ನಕ್ಸಲರ ಯಾವು ಗುಂಪು ಈ ಗುಂಡಿನ ಕಾಳಗದಲ್ಲಿ ಭಾಗಿಯಾದೆ ಎಂದು ತಿಳಿಯುವುದು ಕಷ್ಟ. ಅವರನ್ನು ಪ್ರದೇಶದಿಂದ ಹೊರದಬ್ಬುವವರೆಗೆ ನಮ್ಮ ಕಾರ್ಯಾಚರಣೆ ನಡೆಯುತ್ತಿರುತ್ತದೆ ಎಂದು ಅವರು ಹೇಳಿದ್ದಾರೆ</p>.<p>ಈ ವರ್ಷದ ಆರಂಭದಲ್ಲಿ ಪ್ರದೇಶದ ಹಲವು ನಕ್ಸಲ್ ಉನ್ನತ ನಾಯಕರನ್ನು ಹತ್ಯೆ ಮಾಡಲಾಗಿತ್ತು. ಅದರ ನಂತರ, ಸಿಪಿಐ (ಮಾಮೋವಾದಿ) ಪಾಲಿಟ್ಬ್ಯೂರೊ ಸದಸ್ಯ ಮಿಸಿರ್ ಬೆಸ್ರಾ ಮಾತ್ರ ತಮ್ಮ ಗುಂಪಿನೊಂದಿಗೆ ಇಲ್ಲಿ ಸಕ್ರಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರ ಪತ್ತೆಗಾಗಿ ₹1 ಕೋಟಿ ಬಹುಮಾನ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಯಿಬಾಸಾ (ಜಾರ್ಖಂಡ್):</strong> ಜಾರ್ಖಂಡ್ನ ಪಶ್ಚಿಮ ಸಿಂಗಬುಮ್ ಜಿಲ್ಲೆಯ ಕೊಲ್ಹಾನ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಗೋಯಿಲ್ಕೆರಾ ಮತ್ತು ಟೊಂಟೊ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಜಿಲ್ಲಾ ಪೊಲೀಸರು ಮತ್ತು ಸಿಆರ್ಪಿಎಫ್ ಜಂಟಿಯಾಗಿ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪಶ್ಚಿಮ ಸಿಂಗಬುಮ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ರೇಣು ತಿಳಿಸಿದ್ದಾರೆ.</p>.<p>ಈ ಕ್ಷಣದಲ್ಲಿ ನಕ್ಸಲರ ಯಾವು ಗುಂಪು ಈ ಗುಂಡಿನ ಕಾಳಗದಲ್ಲಿ ಭಾಗಿಯಾದೆ ಎಂದು ತಿಳಿಯುವುದು ಕಷ್ಟ. ಅವರನ್ನು ಪ್ರದೇಶದಿಂದ ಹೊರದಬ್ಬುವವರೆಗೆ ನಮ್ಮ ಕಾರ್ಯಾಚರಣೆ ನಡೆಯುತ್ತಿರುತ್ತದೆ ಎಂದು ಅವರು ಹೇಳಿದ್ದಾರೆ</p>.<p>ಈ ವರ್ಷದ ಆರಂಭದಲ್ಲಿ ಪ್ರದೇಶದ ಹಲವು ನಕ್ಸಲ್ ಉನ್ನತ ನಾಯಕರನ್ನು ಹತ್ಯೆ ಮಾಡಲಾಗಿತ್ತು. ಅದರ ನಂತರ, ಸಿಪಿಐ (ಮಾಮೋವಾದಿ) ಪಾಲಿಟ್ಬ್ಯೂರೊ ಸದಸ್ಯ ಮಿಸಿರ್ ಬೆಸ್ರಾ ಮಾತ್ರ ತಮ್ಮ ಗುಂಪಿನೊಂದಿಗೆ ಇಲ್ಲಿ ಸಕ್ರಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರ ಪತ್ತೆಗಾಗಿ ₹1 ಕೋಟಿ ಬಹುಮಾನ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>