<p><strong>ರಾಂಚಿ:</strong> ಪಾನಿಪುರಿ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಪಾನಿಪುರಿಯನ್ನು ಇಷ್ಟಪಟ್ಟು ತಿನ್ನುವವರಿದ್ದಾರೆ. ಆದರೆ ಇದೇ ಪಾನಿಪುರಿ ತಿಂದು ಬಾಲಕ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಗಿರಿದಿಹ್ನಲ್ಲಿ ನಡೆದಿದೆ.</p><p>ರಸ್ತೆ ಬದಿ ಪಾನಿಪುರಿ ಸೇವಿಸಿದ ನಂತರ ಮನೆಗೆ ಹೀಗಿದ್ದ ಕೆಲವರಿಗೆ ತೀವ್ರ ಜ್ವರ, ಹೊಟ್ಟೆನೋವು, ವಾಂತಿ ಶುರುವಾಗಿದೆ. ಆ ಕೂಡಲೇ ಅಸ್ವಸ್ಥರಾಗಿದ್ದ 18 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದ ಪಾನಿಪುರಿ ಮಾರಾಟಗಾರ ನಾಪತ್ತೆಯಾಗಿದ್ದಾರೆ.</p>.ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!.ಬಿಸಲಬ್ಬರಕ್ಕೆ ಜೀವತೆತ್ತ ಶಿಕ್ಷಕರು; ಜನಗಣತಿಯಲ್ಲಿದ್ದಾಗಲೇ ತಾಪ ತಾಳದೇ ಸಾವು.<p>ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಹಾಗೂ ಆರೋಗ್ಯ ಇಲಾಖೆ ತನಿಖೆ ಆರಂಭಿಸಿದೆ. ಗ್ರಾಮಸ್ಥರ ಪ್ರಕಾರ, ಅವರೆಲ್ಲರೂ ಒಂದೇ ವ್ಯಕ್ತಿಯ ಬಳಿ ಪಾನಿಪುರಿ ಸೇವಿಸಿದ್ದಾರೆ. ಶನಿವಾರ ರಾತ್ರಿಯ ವೇಳೆಗೆ ಅನೇಕರು ಅನಾರೋಗ್ಯಕ್ಕಿಡಾಗಿದ್ದು, ಭಾನುವಾರದ ವೇಳೆಗೆ ಜ್ವರ ಹಾಗೂ ಹೊಟ್ಟೆನೋವು ತೀವ್ರಗೊಂಡಿದೆ.</p><p>ಘಟನೆಯ ಬಳಿಕ ಸ್ಥಳೀಯ ಪೊಲೀಸರು ಹಾಗೂ ಆಡಳಿತ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕ್ಷೇಮ ವಿಚಾರಿಸಿದ್ದಾರೆ. ಈ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ.</p><p>ಈ ಕುರಿತು ಮಾತನಾಡಿದ ಸಿವಿಲ್ ಸರ್ಜನ್ ಡಾ ಬಚ್ಛಾ ಪ್ರಸಾದ್ ಸಿಂಗ್, ಪಾನಿಪುರಿ ಸೇವಿಸಿದ ಬಳಿಕ 18 ಜನ ಅನಾರೋಗ್ಯಕ್ಕೀಡಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯ ನಿಜವಾದ ಕಾರಣ ಏನು ಎಂಬುದು ತನಿಖೆಯಿಂದ ತಿಳಿದು ಬರಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಪಾನಿಪುರಿ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಪಾನಿಪುರಿಯನ್ನು ಇಷ್ಟಪಟ್ಟು ತಿನ್ನುವವರಿದ್ದಾರೆ. ಆದರೆ ಇದೇ ಪಾನಿಪುರಿ ತಿಂದು ಬಾಲಕ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಗಿರಿದಿಹ್ನಲ್ಲಿ ನಡೆದಿದೆ.</p><p>ರಸ್ತೆ ಬದಿ ಪಾನಿಪುರಿ ಸೇವಿಸಿದ ನಂತರ ಮನೆಗೆ ಹೀಗಿದ್ದ ಕೆಲವರಿಗೆ ತೀವ್ರ ಜ್ವರ, ಹೊಟ್ಟೆನೋವು, ವಾಂತಿ ಶುರುವಾಗಿದೆ. ಆ ಕೂಡಲೇ ಅಸ್ವಸ್ಥರಾಗಿದ್ದ 18 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದ ಪಾನಿಪುರಿ ಮಾರಾಟಗಾರ ನಾಪತ್ತೆಯಾಗಿದ್ದಾರೆ.</p>.ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!.ಬಿಸಲಬ್ಬರಕ್ಕೆ ಜೀವತೆತ್ತ ಶಿಕ್ಷಕರು; ಜನಗಣತಿಯಲ್ಲಿದ್ದಾಗಲೇ ತಾಪ ತಾಳದೇ ಸಾವು.<p>ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಹಾಗೂ ಆರೋಗ್ಯ ಇಲಾಖೆ ತನಿಖೆ ಆರಂಭಿಸಿದೆ. ಗ್ರಾಮಸ್ಥರ ಪ್ರಕಾರ, ಅವರೆಲ್ಲರೂ ಒಂದೇ ವ್ಯಕ್ತಿಯ ಬಳಿ ಪಾನಿಪುರಿ ಸೇವಿಸಿದ್ದಾರೆ. ಶನಿವಾರ ರಾತ್ರಿಯ ವೇಳೆಗೆ ಅನೇಕರು ಅನಾರೋಗ್ಯಕ್ಕಿಡಾಗಿದ್ದು, ಭಾನುವಾರದ ವೇಳೆಗೆ ಜ್ವರ ಹಾಗೂ ಹೊಟ್ಟೆನೋವು ತೀವ್ರಗೊಂಡಿದೆ.</p><p>ಘಟನೆಯ ಬಳಿಕ ಸ್ಥಳೀಯ ಪೊಲೀಸರು ಹಾಗೂ ಆಡಳಿತ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕ್ಷೇಮ ವಿಚಾರಿಸಿದ್ದಾರೆ. ಈ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ.</p><p>ಈ ಕುರಿತು ಮಾತನಾಡಿದ ಸಿವಿಲ್ ಸರ್ಜನ್ ಡಾ ಬಚ್ಛಾ ಪ್ರಸಾದ್ ಸಿಂಗ್, ಪಾನಿಪುರಿ ಸೇವಿಸಿದ ಬಳಿಕ 18 ಜನ ಅನಾರೋಗ್ಯಕ್ಕೀಡಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯ ನಿಜವಾದ ಕಾರಣ ಏನು ಎಂಬುದು ತನಿಖೆಯಿಂದ ತಿಳಿದು ಬರಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>