<p><strong>ನವದೆಹಲಿ</strong>: ಸುಲಿಗೆ ಮತ್ತು ಕಲ್ಲಿದ್ದಲು ಗಣಿಗಾರಿಕೆ ಮೇಲೆ ದಾಳಿ ನಡೆಸಿದ್ದ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡವು (ಎನ್ಐಎ) ಜಾರ್ಖಂಡ್ನ ಮೂರು ಸ್ಥಳಗಳಲ್ಲಿ ವ್ಯಾಪಕ ತನಿಖೆ ನಡೆಸಿತು ಎಂದು ಗುರುವಾರ ಹೊರಡಿಸಲಾಗಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. </p>.<p>ಹಜಾರಿಬಾಗ್ ಮತ್ತು ರಾಂಚಿ ಜಿಲ್ಲೆಗಳಲ್ಲಿ ಬುಧವಾರ ಶೋಧಕಾರ್ಯ ನಡೆಸಲಾಯಿತು. ಈ ಸ್ಥಳಗಳಿಂದ ಡಿಜಿಟಲ್ ಉಪಕರಣಗಳು, ಒಂದು ಫಾರ್ಚುನರ್ ವಾಹನ ಮತ್ತು ಕೆಲ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸ್ವತ್ತುಗಳು ಜಾರ್ಖಂಡ್ನ ಗ್ಯಾಂಗ್ಸ್ಟರ್ ಅಮನ್ ಸಾಹು ನೇತೃತ್ವದ ತಂಡಕ್ಕೆ ಸೇರಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಹಣ ವಸೂಲಿ ಮಾಡುವ ಮತ್ತು ಸರ್ಕಾರದ ಕೆಲಸಗಳಿಗೆ ಅಡ್ಡಿ ಉಂಟುಮಾಡುವ ಉದ್ದೇಶದಿಂದ ಅಮನ್ ನೇತೃತ್ವದ ತಂಡವು 2020ರ ಡಿಸೆಂಬರ್ನಲ್ಲಿ ದಾಳಿ ನಡೆಸಿತ್ತು. 2021ರ ಮಾರ್ಚ್ನಲ್ಲಿ ಎನ್ಐಎ ತನಿಖೆ ಆರಂಭಿಸಿತ್ತು. ಈ ವರ್ಷ ಫೆಬ್ರುವರಿಯಲ್ಲಿ ಅಮನ್ ಸಹಚರ ಶಂಕರ್ ಯಾದವ್ ಎಂಬಾತನ್ನು ಬಂಧಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸುಲಿಗೆ ಮತ್ತು ಕಲ್ಲಿದ್ದಲು ಗಣಿಗಾರಿಕೆ ಮೇಲೆ ದಾಳಿ ನಡೆಸಿದ್ದ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡವು (ಎನ್ಐಎ) ಜಾರ್ಖಂಡ್ನ ಮೂರು ಸ್ಥಳಗಳಲ್ಲಿ ವ್ಯಾಪಕ ತನಿಖೆ ನಡೆಸಿತು ಎಂದು ಗುರುವಾರ ಹೊರಡಿಸಲಾಗಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. </p>.<p>ಹಜಾರಿಬಾಗ್ ಮತ್ತು ರಾಂಚಿ ಜಿಲ್ಲೆಗಳಲ್ಲಿ ಬುಧವಾರ ಶೋಧಕಾರ್ಯ ನಡೆಸಲಾಯಿತು. ಈ ಸ್ಥಳಗಳಿಂದ ಡಿಜಿಟಲ್ ಉಪಕರಣಗಳು, ಒಂದು ಫಾರ್ಚುನರ್ ವಾಹನ ಮತ್ತು ಕೆಲ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸ್ವತ್ತುಗಳು ಜಾರ್ಖಂಡ್ನ ಗ್ಯಾಂಗ್ಸ್ಟರ್ ಅಮನ್ ಸಾಹು ನೇತೃತ್ವದ ತಂಡಕ್ಕೆ ಸೇರಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಹಣ ವಸೂಲಿ ಮಾಡುವ ಮತ್ತು ಸರ್ಕಾರದ ಕೆಲಸಗಳಿಗೆ ಅಡ್ಡಿ ಉಂಟುಮಾಡುವ ಉದ್ದೇಶದಿಂದ ಅಮನ್ ನೇತೃತ್ವದ ತಂಡವು 2020ರ ಡಿಸೆಂಬರ್ನಲ್ಲಿ ದಾಳಿ ನಡೆಸಿತ್ತು. 2021ರ ಮಾರ್ಚ್ನಲ್ಲಿ ಎನ್ಐಎ ತನಿಖೆ ಆರಂಭಿಸಿತ್ತು. ಈ ವರ್ಷ ಫೆಬ್ರುವರಿಯಲ್ಲಿ ಅಮನ್ ಸಹಚರ ಶಂಕರ್ ಯಾದವ್ ಎಂಬಾತನ್ನು ಬಂಧಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>