<p><strong>ಜೆಮ್ಶೆಡ್ಪುರ(ಜಾರ್ಖಂಡ್):</strong> ಜಾರ್ಖಂಡ್ನಲ್ಲಿ ಭಾರಿ ಮಳೆ ಸುರಿದು ಪ್ರವಾಹ ಉಂಟಾದ ಪರಿಣಾಮ, ಪೂರ್ವ ಸಿಂಗಭೂಮ್ ಜಿಲ್ಲೆಯ ಖಾಸಗಿ ವಸತಿ ಶಾಲೆಯೊಂದರಲ್ಲಿ ಸಿಲುಕಿದ್ದ 162 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ಧಾರೆ.</p><p>‘ಪ್ರವಾಹದಿಂದಾಗಿ, ಕೌವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪಂಡರ್ಸೋಲಿ ಎಂಬಲ್ಲಿನ ಲವಕುಶ ವಸತಿ ಶಾಲೆಯು ಭಾಗಶಃ ಮುಳುಗಿ, ವಿದ್ಯಾರ್ಥಿಗಳು ಸಿಲುಕಿದ್ದರು. ಶಿಕ್ಷಕರು ಎಲ್ಲ ವಿದ್ಯಾರ್ಥಿಗಳನ್ನು ಶಾಲೆಯ ಚಾವಣಿಗೆ ಸ್ಥಳಾಂತರಿಸಿದ್ದರು. ರಾತ್ರಿಯಿಡೀ ಅವರು ಚಾವಣಿಯಲ್ಲಿ ಇದ್ದರು’ ಎಂದು ತಿಳಿಸಿದ್ದಾರೆ.</p><p>‘ಈ ಕುರಿತು ಭಾನುವಾರ ಬೆಳಿಗ್ಗೆ 5.30ಕ್ಕೆ ಮಾಹಿತಿ ಲಭಿಸಿದ ತಕ್ಷಣ, ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದರು. ಗ್ರಾಮಸ್ಥರ ನೆರವಿನಿಂದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ) ರಿಷಭ ಗರ್ಗ್ ಹೇಳಿದ್ದಾರೆ.</p>.ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿದ 25 ಬಿಆರ್ಒ ಕಾರ್ಮಿಕರು.ಉತ್ತರಾಖಂಡ | ಅಲಕಾನಂದ ನದಿಗೆ ಉರುಳಿದ ಬಸ್: 40 KM ದೂರದಲ್ಲಿ ಮಹಿಳೆ ಶವ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆಮ್ಶೆಡ್ಪುರ(ಜಾರ್ಖಂಡ್):</strong> ಜಾರ್ಖಂಡ್ನಲ್ಲಿ ಭಾರಿ ಮಳೆ ಸುರಿದು ಪ್ರವಾಹ ಉಂಟಾದ ಪರಿಣಾಮ, ಪೂರ್ವ ಸಿಂಗಭೂಮ್ ಜಿಲ್ಲೆಯ ಖಾಸಗಿ ವಸತಿ ಶಾಲೆಯೊಂದರಲ್ಲಿ ಸಿಲುಕಿದ್ದ 162 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ಧಾರೆ.</p><p>‘ಪ್ರವಾಹದಿಂದಾಗಿ, ಕೌವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪಂಡರ್ಸೋಲಿ ಎಂಬಲ್ಲಿನ ಲವಕುಶ ವಸತಿ ಶಾಲೆಯು ಭಾಗಶಃ ಮುಳುಗಿ, ವಿದ್ಯಾರ್ಥಿಗಳು ಸಿಲುಕಿದ್ದರು. ಶಿಕ್ಷಕರು ಎಲ್ಲ ವಿದ್ಯಾರ್ಥಿಗಳನ್ನು ಶಾಲೆಯ ಚಾವಣಿಗೆ ಸ್ಥಳಾಂತರಿಸಿದ್ದರು. ರಾತ್ರಿಯಿಡೀ ಅವರು ಚಾವಣಿಯಲ್ಲಿ ಇದ್ದರು’ ಎಂದು ತಿಳಿಸಿದ್ದಾರೆ.</p><p>‘ಈ ಕುರಿತು ಭಾನುವಾರ ಬೆಳಿಗ್ಗೆ 5.30ಕ್ಕೆ ಮಾಹಿತಿ ಲಭಿಸಿದ ತಕ್ಷಣ, ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದರು. ಗ್ರಾಮಸ್ಥರ ನೆರವಿನಿಂದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ) ರಿಷಭ ಗರ್ಗ್ ಹೇಳಿದ್ದಾರೆ.</p>.ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿದ 25 ಬಿಆರ್ಒ ಕಾರ್ಮಿಕರು.ಉತ್ತರಾಖಂಡ | ಅಲಕಾನಂದ ನದಿಗೆ ಉರುಳಿದ ಬಸ್: 40 KM ದೂರದಲ್ಲಿ ಮಹಿಳೆ ಶವ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>