<p><strong>ರಾಂಚಿ:</strong> ಭಾರಿ ಮಳೆಯಿಂದಾಗಿ ಜಾರ್ಖಂಡ್ನ ರಾಂಚಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡವೊಂದರ ಪಾರ್ಶ್ವದ ಛಾವಣಿ ಕುಸಿದು ಓರ್ವ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿದ್ದಾಗಿ ಪೊಲೀಸರು ಮಾಹಿತಿ ಶುಕ್ರವಾರ ನೀಡಿದ್ದಾರೆ.</p>.ಜಾರ್ಖಂಡ್ | ಎನ್ಕೌಂಟರ್ನಲ್ಲಿ ತಲೆಗೆ ₹5 ಲಕ್ಷ ಘೋಷಿಸಲಾಗಿದ್ದ ಮಾವೋವಾದಿ ಹತ.<p>ಬೆಳಿಗ್ಗೆ ಸುಮಾರು 7.30ರ ವೇಳೆಗೆ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.</p><p>ಪಿಸ್ಕ ಮೊರೆ ಪ್ರದೇಶದ ತಂಗ್ರಾ ತೋಲಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಸರ್ಕಾರಿ ಶಾಲಾ ಕಟ್ಟಡದ ಛಾವಣಿ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನಮ್ಮ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ’ ಎಂದು ಸುಖೇದೊ ನಗರ ಪೊಲೀಸ್ ಠಾಣೆ ಉಸ್ತುವಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.</p>.ಜಾರ್ಖಂಡ್ | 4 ಸಾವಿರ ನಕಲಿ ಜನನ ಪ್ರಮಾಣಪತ್ರ ವಿತರಣೆ: ಐವರ ಬಂಧನ.<p>ರಾಟು ನಿವಾಸಿ, ಸಹಾಯಕ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಸೂರಜ್ ಭಾಟಿಯಾ (65) ಮೃತ ವ್ಯಕ್ತಿ. ಛಾವಣಿ ಕುಸಿತ ವೇಳೆ ಜಗುಲಿಯಲ್ಲಿ ಮಲಗಿದ್ದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.</p><p>ಮನೀಶ್ ಟಿರ್ಕೆ, ಪ್ರೀತಮ್ ಟಿರ್ಕೆ ಹಾಗೂ ಮೋಟು ಒರೋನ್ ಗಾಯಗೊಂಡವರು. ಈ ಮೂವರೂ 18–19ವರ್ಷದವರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಶಾಲೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಜಾರ್ಖಂಡ್: ಎಂಟು ನಕ್ಸಲರ ಹತ್ಯೆ.<p>ಹಾಜರಾತಿ ಕಡಿಮೆ ಇದ್ದ ಕಾರಣ ಶಾಲೆಯನ್ನು ಮುಚ್ಚಲಾಗದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.</p><p>ಕಳೆದ ಕೆಲವು ದಿನಗಳಿಂದ ಜಾರ್ಖಂಡ್ನಲ್ಲಿ ಭಾರಿ ಮಳೆಯಾಗುತ್ತಿದೆ. ಜೂನ್ 1 ರಿಂದ ಜುಲೈ 16ರವರೆಗೆ ವಾಡಿಕೆಗಿಂತ ಶೇ 71 ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p> .ಜಾರ್ಖಂಡ್ | ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ; 18 ಬಾಲಕರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಭಾರಿ ಮಳೆಯಿಂದಾಗಿ ಜಾರ್ಖಂಡ್ನ ರಾಂಚಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡವೊಂದರ ಪಾರ್ಶ್ವದ ಛಾವಣಿ ಕುಸಿದು ಓರ್ವ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿದ್ದಾಗಿ ಪೊಲೀಸರು ಮಾಹಿತಿ ಶುಕ್ರವಾರ ನೀಡಿದ್ದಾರೆ.</p>.ಜಾರ್ಖಂಡ್ | ಎನ್ಕೌಂಟರ್ನಲ್ಲಿ ತಲೆಗೆ ₹5 ಲಕ್ಷ ಘೋಷಿಸಲಾಗಿದ್ದ ಮಾವೋವಾದಿ ಹತ.<p>ಬೆಳಿಗ್ಗೆ ಸುಮಾರು 7.30ರ ವೇಳೆಗೆ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.</p><p>ಪಿಸ್ಕ ಮೊರೆ ಪ್ರದೇಶದ ತಂಗ್ರಾ ತೋಲಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಸರ್ಕಾರಿ ಶಾಲಾ ಕಟ್ಟಡದ ಛಾವಣಿ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನಮ್ಮ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ’ ಎಂದು ಸುಖೇದೊ ನಗರ ಪೊಲೀಸ್ ಠಾಣೆ ಉಸ್ತುವಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.</p>.ಜಾರ್ಖಂಡ್ | 4 ಸಾವಿರ ನಕಲಿ ಜನನ ಪ್ರಮಾಣಪತ್ರ ವಿತರಣೆ: ಐವರ ಬಂಧನ.<p>ರಾಟು ನಿವಾಸಿ, ಸಹಾಯಕ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಸೂರಜ್ ಭಾಟಿಯಾ (65) ಮೃತ ವ್ಯಕ್ತಿ. ಛಾವಣಿ ಕುಸಿತ ವೇಳೆ ಜಗುಲಿಯಲ್ಲಿ ಮಲಗಿದ್ದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.</p><p>ಮನೀಶ್ ಟಿರ್ಕೆ, ಪ್ರೀತಮ್ ಟಿರ್ಕೆ ಹಾಗೂ ಮೋಟು ಒರೋನ್ ಗಾಯಗೊಂಡವರು. ಈ ಮೂವರೂ 18–19ವರ್ಷದವರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಶಾಲೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಜಾರ್ಖಂಡ್: ಎಂಟು ನಕ್ಸಲರ ಹತ್ಯೆ.<p>ಹಾಜರಾತಿ ಕಡಿಮೆ ಇದ್ದ ಕಾರಣ ಶಾಲೆಯನ್ನು ಮುಚ್ಚಲಾಗದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.</p><p>ಕಳೆದ ಕೆಲವು ದಿನಗಳಿಂದ ಜಾರ್ಖಂಡ್ನಲ್ಲಿ ಭಾರಿ ಮಳೆಯಾಗುತ್ತಿದೆ. ಜೂನ್ 1 ರಿಂದ ಜುಲೈ 16ರವರೆಗೆ ವಾಡಿಕೆಗಿಂತ ಶೇ 71 ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p> .ಜಾರ್ಖಂಡ್ | ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ; 18 ಬಾಲಕರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>