<p><strong>ರಾಂಚಿ:</strong> ಜಾರ್ಖಂಡ್ ಸರ್ಕಾರವು ಬಹುಕೋಟಿ ವೆಚ್ಚದ ಆಸ್ಪತ್ರೆಯನ್ನು ನಿರ್ಮಿಸಲು ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದು, ಇದರ ವಿರುದ್ದ ಬುಡಕಟ್ಟು ಸಮುದಾಯಗಳು ಪ್ರತಿಭಟನೆ ನಡೆಸುತ್ತಿವೆ.</p><p>ಬುಡಕಟ್ಟು ಸಮುದಾಯಗಳ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಬಿಜೆಪಿ ನಾಯಕ ಹಾಗೂ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಘೋಷಿಸಿದ್ದರು. </p><p>‘ಬುಡಕಟ್ಟು ಸಮುದಾಯಗಳ ಪ್ರತಿಭಟನೆಗೆ ನಾನು ಬೆಂಬಲ ನೀಡಿದಕ್ಕಾಗಿ ನನ್ನನ್ನು ಗೃಹ ಬಂಧನದಲ್ಲಿ ಇರಿಸಿರುವುದು ಅಸಂವಿಧಾನಿಕವಾಗಿದೆ. ನಾನು ಹೇಗಾದರೂ ಮಾಡಿ ಪ್ರತಿಭಟನೆಗೆ ಸೇರಿಕೊಳ್ಳುತ್ತೇನೆ’ ಎಂದು ಚಂಪೈ ಸೊರೇನ್ ಹೇಳಿದ್ದಾರೆ. </p><p>ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಚಂಪೈ ಸೊರೇನ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. </p><p>ಬುಡಕಟ್ಟು ಜನರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದನ್ನು ವಿರೋಧಿಸಿ ರಾಂಚಿ ಕಡೆಗೆ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದ ಚಂಪೈ ಸೊರೇನ್ ಅವರ ಮಗ ಬಾಬುಲಾಲ್ ಸೊರೇನ್ ಹಾಗೂ ಅವರ ಬೆಂಬಲಿಗರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ಜಾರ್ಖಂಡ್ ಸರ್ಕಾರವು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು(ಆರ್ಐಎಂಎಸ್) ವಿಸ್ತರಿಸುವ ಉದ್ದೇಶದಿಂದ ₹ 1,074 ಕೋಟಿ ವೆಚ್ಚದಲ್ಲಿ ಆರ್ಐಎಂಎಸ್–2 ಯೋಜನೆ ಕೈಗೊಂಡಿದೆ. 2,600 ಹಾಸಿಗೆಗಳ ಆಸ್ಪತ್ರೆಗೆ ಯೋಜನೆ ರೂಪಿಸಿದ್ದು, ಇದಕ್ಕಾಗಿ ನಗ್ರಿ ಪ್ರದೇಶದಲ್ಲಿ 207 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.</p><p>ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿರುವುದರ ವಿರುದ್ಧ 20 ಕ್ಕೂ ಅಧಿಕ ಬುಡಕಟ್ಟು ಸಮುದಾಯಗಳು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. </p><p>ಪ್ರತಿಭಟನೆಯನ್ನು ಹತ್ತಿಕ್ಕಲು ಹೆಚ್ಚಿನ ಪೊಲೀಸ್ ಪಡೆ ನೇಮಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಗ್ರಿ ಪ್ರದೇಶದಲ್ಲಿ ಸಾರ್ವಜನಿಕ ಸಭೆ ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ ಎಂದು ರಾಂಚಿ ಜಿಲ್ಲಾಡಳಿತ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜಾರ್ಖಂಡ್ ಸರ್ಕಾರವು ಬಹುಕೋಟಿ ವೆಚ್ಚದ ಆಸ್ಪತ್ರೆಯನ್ನು ನಿರ್ಮಿಸಲು ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದು, ಇದರ ವಿರುದ್ದ ಬುಡಕಟ್ಟು ಸಮುದಾಯಗಳು ಪ್ರತಿಭಟನೆ ನಡೆಸುತ್ತಿವೆ.</p><p>ಬುಡಕಟ್ಟು ಸಮುದಾಯಗಳ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಬಿಜೆಪಿ ನಾಯಕ ಹಾಗೂ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಘೋಷಿಸಿದ್ದರು. </p><p>‘ಬುಡಕಟ್ಟು ಸಮುದಾಯಗಳ ಪ್ರತಿಭಟನೆಗೆ ನಾನು ಬೆಂಬಲ ನೀಡಿದಕ್ಕಾಗಿ ನನ್ನನ್ನು ಗೃಹ ಬಂಧನದಲ್ಲಿ ಇರಿಸಿರುವುದು ಅಸಂವಿಧಾನಿಕವಾಗಿದೆ. ನಾನು ಹೇಗಾದರೂ ಮಾಡಿ ಪ್ರತಿಭಟನೆಗೆ ಸೇರಿಕೊಳ್ಳುತ್ತೇನೆ’ ಎಂದು ಚಂಪೈ ಸೊರೇನ್ ಹೇಳಿದ್ದಾರೆ. </p><p>ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಚಂಪೈ ಸೊರೇನ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. </p><p>ಬುಡಕಟ್ಟು ಜನರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದನ್ನು ವಿರೋಧಿಸಿ ರಾಂಚಿ ಕಡೆಗೆ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದ ಚಂಪೈ ಸೊರೇನ್ ಅವರ ಮಗ ಬಾಬುಲಾಲ್ ಸೊರೇನ್ ಹಾಗೂ ಅವರ ಬೆಂಬಲಿಗರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ಜಾರ್ಖಂಡ್ ಸರ್ಕಾರವು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು(ಆರ್ಐಎಂಎಸ್) ವಿಸ್ತರಿಸುವ ಉದ್ದೇಶದಿಂದ ₹ 1,074 ಕೋಟಿ ವೆಚ್ಚದಲ್ಲಿ ಆರ್ಐಎಂಎಸ್–2 ಯೋಜನೆ ಕೈಗೊಂಡಿದೆ. 2,600 ಹಾಸಿಗೆಗಳ ಆಸ್ಪತ್ರೆಗೆ ಯೋಜನೆ ರೂಪಿಸಿದ್ದು, ಇದಕ್ಕಾಗಿ ನಗ್ರಿ ಪ್ರದೇಶದಲ್ಲಿ 207 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.</p><p>ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿರುವುದರ ವಿರುದ್ಧ 20 ಕ್ಕೂ ಅಧಿಕ ಬುಡಕಟ್ಟು ಸಮುದಾಯಗಳು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. </p><p>ಪ್ರತಿಭಟನೆಯನ್ನು ಹತ್ತಿಕ್ಕಲು ಹೆಚ್ಚಿನ ಪೊಲೀಸ್ ಪಡೆ ನೇಮಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಗ್ರಿ ಪ್ರದೇಶದಲ್ಲಿ ಸಾರ್ವಜನಿಕ ಸಭೆ ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ ಎಂದು ರಾಂಚಿ ಜಿಲ್ಲಾಡಳಿತ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>