<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಶೀಘ್ರದಲ್ಲಿ ಮರುಸ್ಥಾಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದಾರೆ.</p><p>ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ಕೇಂದ್ರ ಸರ್ಕಾರ ರದ್ದು ಮಾಡಿದ ನಂತರ ಆಯ್ಕೆಗೊಂಡ ಮೊದಲ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ಶಾ ಅವರನ್ನು ಭೇಟಿ ಮಾಡಿದರು.</p><p>ಈ ಭೇಟಿಯ ನಂತರ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸ್ಥಾನಮಾನ ಶೀಘ್ರದಲ್ಲಿ ಮರುಸ್ಥಾಪಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.</p><p>ಇದರೊಂದಿಗೆ ರಾಜ್ಯದ ವ್ಯವಹಾರಗಳನ್ನು ನಡೆಸುವ ನಿಯಮಗಳ (ಟಿಬಿಆರ್) ಕುರಿತು ಹಾಗೂ ಚುನಾಯಿತ ಸರ್ಕಾರದ ಅಧಿಕಾರ ವ್ಯಾಪ್ತಿಯ ಕುರಿತೂ ಸ್ಪಷ್ಟತೆಯನ್ನು ಕೋರಿದ್ದಾರೆ. </p><p>‘ಜಮ್ಮು ಮತ್ತು ಕಾಶ್ಮೀರವು ಸದ್ಯ ಕೇಂದ್ರಾಡಳಿತ ಪ್ರದೇಶವಾಗಿದ್ದು, ನಮಗೆ ರಾಜ್ಯ ಸ್ಥಾನಮಾನ ಬೇಕಿದೆ. ಕೇಂದ್ರಾಡಳಿತ ಪ್ರದೇಶದ ಮೇಲೆ ಗೃಹ ಸಚಿವರಿಗೆ ವಿಶೇಷ ಅಧಿಕಾರ ಇದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಶೀಘ್ರದಲ್ಲಿ ಮರುಸ್ಥಾಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದಾರೆ.</p><p>ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ಕೇಂದ್ರ ಸರ್ಕಾರ ರದ್ದು ಮಾಡಿದ ನಂತರ ಆಯ್ಕೆಗೊಂಡ ಮೊದಲ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ಶಾ ಅವರನ್ನು ಭೇಟಿ ಮಾಡಿದರು.</p><p>ಈ ಭೇಟಿಯ ನಂತರ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸ್ಥಾನಮಾನ ಶೀಘ್ರದಲ್ಲಿ ಮರುಸ್ಥಾಪಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.</p><p>ಇದರೊಂದಿಗೆ ರಾಜ್ಯದ ವ್ಯವಹಾರಗಳನ್ನು ನಡೆಸುವ ನಿಯಮಗಳ (ಟಿಬಿಆರ್) ಕುರಿತು ಹಾಗೂ ಚುನಾಯಿತ ಸರ್ಕಾರದ ಅಧಿಕಾರ ವ್ಯಾಪ್ತಿಯ ಕುರಿತೂ ಸ್ಪಷ್ಟತೆಯನ್ನು ಕೋರಿದ್ದಾರೆ. </p><p>‘ಜಮ್ಮು ಮತ್ತು ಕಾಶ್ಮೀರವು ಸದ್ಯ ಕೇಂದ್ರಾಡಳಿತ ಪ್ರದೇಶವಾಗಿದ್ದು, ನಮಗೆ ರಾಜ್ಯ ಸ್ಥಾನಮಾನ ಬೇಕಿದೆ. ಕೇಂದ್ರಾಡಳಿತ ಪ್ರದೇಶದ ಮೇಲೆ ಗೃಹ ಸಚಿವರಿಗೆ ವಿಶೇಷ ಅಧಿಕಾರ ಇದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>