<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಎಲ್ಲೆಡೆ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಅನಂತ್ನಾಗ್ ಜಿಲ್ಲೆಯಲ್ಲಿ ಸೇತುವೆ ಕೆಳಗೆ ಸಿಲುಕಿದ್ದ ಅಲೆಮಾರಿ ಸಮುದಾಯದ 25 ಕುಟುಂಬಗಳನ್ನು ರಕ್ಷಿಸಲಾಗಿದೆ. </p><p>ದಕ್ಷಿಣ ಕಾಶ್ಮಿರದಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಪುಲ್ವಾಮಾ, ಶೋಪಿಯನ್ ಮತ್ತು ಕುಲ್ಗಾಮ್ ಜಿಲ್ಲೆ ಸೇರಿದಂತೆ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p><p>.</p><p>‘ಆಂಗ್ ಅಂಜ್ವಾಲಾದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅನಂತ್ನಾಗ್ ಪೊಲೀಸರು ಅಲೆಮಾರಿ ಸಮುದಾಯದ 25 ಕುಟುಂಬಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ. ಲಿಡ್ಡರ್ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಸೇತುವೆ ಕೆಳಗೆ ವಾಸಿಸುತ್ತಿದ್ದ ಈ ಕುಟುಂಬಗಳು ಅಪಾಯಕ್ಕೆ ಸಿಲುಕಿದ್ದವು’ಎಂದು ಅನಂತನಾಗ್ ಜಿಲ್ಲಾ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p><p>ಸ್ಥಳಾಂತರಗೊಂಡ ಕುಟುಂಬಗಳಿಗೆ ತುರ್ತು ನೆರವು ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.</p><p>ನೆರೆಯ ಕುಲ್ಗಾಮ್ ಜಿಲ್ಲೆಯ ಬ್ರಜ್ಲೂ ಹಳ್ಳಿಯಲ್ಲೂ 5 ಅಲೆಮಾರಿ ಕುಟುಂಬಗಳನ್ನು ರಕ್ಷಿಸಲಾಗಿದೆ. ವೈಷ್ಣೊವ್ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ದಕ್ಷಿಣ ಕಾಶ್ಮೀರದ ವಿವಿಧ ಪೊಲೀಸ್ ಠಾಣೆಗಳಲ್ಲಿ ತುರ್ತು ಸಹಾಯವಾಣಿ ಆರಂಭಿಸಲಾಗಿದೆ. ನೀರಿನ ಪ್ರದೇಶಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಎಲ್ಲೆಡೆ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಅನಂತ್ನಾಗ್ ಜಿಲ್ಲೆಯಲ್ಲಿ ಸೇತುವೆ ಕೆಳಗೆ ಸಿಲುಕಿದ್ದ ಅಲೆಮಾರಿ ಸಮುದಾಯದ 25 ಕುಟುಂಬಗಳನ್ನು ರಕ್ಷಿಸಲಾಗಿದೆ. </p><p>ದಕ್ಷಿಣ ಕಾಶ್ಮಿರದಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಪುಲ್ವಾಮಾ, ಶೋಪಿಯನ್ ಮತ್ತು ಕುಲ್ಗಾಮ್ ಜಿಲ್ಲೆ ಸೇರಿದಂತೆ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p><p>.</p><p>‘ಆಂಗ್ ಅಂಜ್ವಾಲಾದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅನಂತ್ನಾಗ್ ಪೊಲೀಸರು ಅಲೆಮಾರಿ ಸಮುದಾಯದ 25 ಕುಟುಂಬಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ. ಲಿಡ್ಡರ್ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಸೇತುವೆ ಕೆಳಗೆ ವಾಸಿಸುತ್ತಿದ್ದ ಈ ಕುಟುಂಬಗಳು ಅಪಾಯಕ್ಕೆ ಸಿಲುಕಿದ್ದವು’ಎಂದು ಅನಂತನಾಗ್ ಜಿಲ್ಲಾ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p><p>ಸ್ಥಳಾಂತರಗೊಂಡ ಕುಟುಂಬಗಳಿಗೆ ತುರ್ತು ನೆರವು ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.</p><p>ನೆರೆಯ ಕುಲ್ಗಾಮ್ ಜಿಲ್ಲೆಯ ಬ್ರಜ್ಲೂ ಹಳ್ಳಿಯಲ್ಲೂ 5 ಅಲೆಮಾರಿ ಕುಟುಂಬಗಳನ್ನು ರಕ್ಷಿಸಲಾಗಿದೆ. ವೈಷ್ಣೊವ್ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ದಕ್ಷಿಣ ಕಾಶ್ಮೀರದ ವಿವಿಧ ಪೊಲೀಸ್ ಠಾಣೆಗಳಲ್ಲಿ ತುರ್ತು ಸಹಾಯವಾಣಿ ಆರಂಭಿಸಲಾಗಿದೆ. ನೀರಿನ ಪ್ರದೇಶಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>