<p><strong>ನವದೆಹಲಿ</strong>: ಈ ವರ್ಷದ ‘ಟಾಯ್ಕಥಾನ್’ ಸ್ಪರ್ಧೆಯಲ್ಲಿ ಇಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾದ (ಜೆಎಂಐ) ಮೂವರು ವಿದ್ಯಾರ್ಥಿಗಳ ತಂಡವು ಜಯ ಗಳಿಸಿದೆ.</p>.<p>ಸಂಸ್ಥೆಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದಸಾರ್ಥಕ್ ಕುಮಾರ್, ನಿಖಿಲ್ ಯಾದವ್ ಮತ್ತು ಅಲ್ಜಿಯಾನ್ ಅನ್ಸಾರಿ ಅವರಿರುವ ತಂಡವು ಗಣಿತ ಕಲಿಕೆಗೆ ಸಂಬಂಧಿಸಿ ವಿನ್ಯಾಸಗೊಳಿಸಿರುವ ‘ಮ್ಯಾಥಮ್ಯಾಟಿಕಲ್ ಬೋರ್ಡ್ಗೇಮ್’ ಎಂಬ ಮಾದರಿಗೆ ಬಹುಮಾನ ಬಂದಿದೆ.</p>.<p>‘ಕೇಂದ್ರ ಸರ್ಕಾರ ಆಯೋಜಿಸಿದ್ದ ಟಾಯ್ಕಥಾನ್ ಸ್ಪರ್ಧೆಯಲ್ಲಿ ಜೆಎಂಐನ ‘ಎವಿಡೆಂಟ್’ ತಂಡವು ಗೆಲುವು ಸಾಧಿಸಿದೆ. ಈ ವಿದ್ಯಾರ್ಥಿಗಳಿಗೆ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶಂಶಾದ್ ಅಹಮದ್ ಅವರು ಮಾರ್ಗದರ್ಶನ ನೀಡಿದ್ದರು’ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<p>‘ರಾಷ್ಟ್ರ ನಿರ್ಮಾಣದಲ್ಲಿ ಜೆಎಂಐ ಸದಾ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ನಮ್ಮ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಬೆಳಕಿಗೆ ತಂದು, ಆ ಮೂಲಕ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಪ್ರಯತ್ನಿಸುತ್ತದೆ’ ಎಂದು ಜೆಎಂಐ ಕುಲಪತಿ ನಜ್ಮಾ ಅಖ್ತರ್ ಹೇಳಿದ್ದಾರೆ.</p>.<p>ಈ ವರ್ಷದ ಟಾಯ್ಕಥಾನ್ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ 1.2 ಲಕ್ಷ ಜನರು ಭಾಗವಹಿಸಿದ್ದರು. 17,000ಕ್ಕೂ ಹೆಚ್ಚು ನವೀನ ಯೋಜನೆಗಳು ಸಲ್ಲಿಕೆಯಾಗಿದ್ದವು. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಸ್ಪಾರ್ಟ್ಅಪ್ಗಳಿಗೆ ಒಟ್ಟು ₹ 50 ಲಕ್ಷ ಮೊತ್ತದ ಬಹುಮಾನ ನೀಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಈ ವರ್ಷದ ‘ಟಾಯ್ಕಥಾನ್’ ಸ್ಪರ್ಧೆಯಲ್ಲಿ ಇಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾದ (ಜೆಎಂಐ) ಮೂವರು ವಿದ್ಯಾರ್ಥಿಗಳ ತಂಡವು ಜಯ ಗಳಿಸಿದೆ.</p>.<p>ಸಂಸ್ಥೆಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದಸಾರ್ಥಕ್ ಕುಮಾರ್, ನಿಖಿಲ್ ಯಾದವ್ ಮತ್ತು ಅಲ್ಜಿಯಾನ್ ಅನ್ಸಾರಿ ಅವರಿರುವ ತಂಡವು ಗಣಿತ ಕಲಿಕೆಗೆ ಸಂಬಂಧಿಸಿ ವಿನ್ಯಾಸಗೊಳಿಸಿರುವ ‘ಮ್ಯಾಥಮ್ಯಾಟಿಕಲ್ ಬೋರ್ಡ್ಗೇಮ್’ ಎಂಬ ಮಾದರಿಗೆ ಬಹುಮಾನ ಬಂದಿದೆ.</p>.<p>‘ಕೇಂದ್ರ ಸರ್ಕಾರ ಆಯೋಜಿಸಿದ್ದ ಟಾಯ್ಕಥಾನ್ ಸ್ಪರ್ಧೆಯಲ್ಲಿ ಜೆಎಂಐನ ‘ಎವಿಡೆಂಟ್’ ತಂಡವು ಗೆಲುವು ಸಾಧಿಸಿದೆ. ಈ ವಿದ್ಯಾರ್ಥಿಗಳಿಗೆ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶಂಶಾದ್ ಅಹಮದ್ ಅವರು ಮಾರ್ಗದರ್ಶನ ನೀಡಿದ್ದರು’ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.</p>.<p>‘ರಾಷ್ಟ್ರ ನಿರ್ಮಾಣದಲ್ಲಿ ಜೆಎಂಐ ಸದಾ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ನಮ್ಮ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಬೆಳಕಿಗೆ ತಂದು, ಆ ಮೂಲಕ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಪ್ರಯತ್ನಿಸುತ್ತದೆ’ ಎಂದು ಜೆಎಂಐ ಕುಲಪತಿ ನಜ್ಮಾ ಅಖ್ತರ್ ಹೇಳಿದ್ದಾರೆ.</p>.<p>ಈ ವರ್ಷದ ಟಾಯ್ಕಥಾನ್ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ 1.2 ಲಕ್ಷ ಜನರು ಭಾಗವಹಿಸಿದ್ದರು. 17,000ಕ್ಕೂ ಹೆಚ್ಚು ನವೀನ ಯೋಜನೆಗಳು ಸಲ್ಲಿಕೆಯಾಗಿದ್ದವು. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಸ್ಪಾರ್ಟ್ಅಪ್ಗಳಿಗೆ ಒಟ್ಟು ₹ 50 ಲಕ್ಷ ಮೊತ್ತದ ಬಹುಮಾನ ನೀಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>