ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಖರ್ಗೆ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದರು.
ಇತ್ತೀಚಿನ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಚಂಪೈ, ಇದು ಕಾಂಗ್ರೆಸ್ನ ಆಂತರಿಕ ವಿಷಯವಾಗಿದೆ. ಹಾಗಾಗಿ ಪಕ್ಷದಲ್ಲಿಯೇ ಬಗೆಹರಿಸಿಕೊಳ್ಳುತ್ತಾರೆ. ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿಯ ನಡುವೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಬದಲಾವಣೆ ಮಾಡುವಂತೆ ಪಟ್ಟು ಹಿಡಿದಿರುವ ಕಾಂಗ್ರೆಸ್ನ 12 ಶಾಸಕರು, ಫೆಬ್ರುವರಿ 23ರಿಂದ ಆರಂಭವಾಗುವ ರಾಜ್ಯ ವಿಧಾನಸಭೆ ಅಧಿವೇಶನವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.
ಜಾರ್ಖಂಡ್ ರಾಜ್ಯವು ಒಟ್ಟು 81 ವಿಧಾನಸಭಾ ಕ್ಷೇತ್ರ ಹೊಂದಿದೆ. ಇದೀಗ 47 ಶಾಸಕರೊಂದಿಗೆ ಜೆಎಂಎಂ ಮೈತ್ರಿಕೂಟ (ಜೆಎಂಎಂ-29, ಕಾಂಗ್ರೆಸ್-17 ಮತ್ತು 1 ಆರ್ಜೆಡಿ) ಸರ್ಕಾರ ರಚಿಸಿದೆ.