<p><strong>ನವದೆಹಲಿ</strong>: ದೇಶದ ಗ್ರಾಮೀಣ ಪ್ರದೇಶಗಳಲ್ಲಿ ನಲ್ಲಿ ನೀರು ಪೂರೈಕೆ ಖಾತ್ರಿಪಡಿಸುವ ಜಲಜೀವನ ಮಿಷನ್ನ(ಜೆಜೆಎಂ) ಮುಂದಿನ ಹಂತದಲ್ಲಿ ಈ ಯೋಜನೆಯ ಮಾಲೀಕತ್ವವನ್ನು ಸಮುದಾಯಕ್ಕೆ ವಹಿಸಲಾಗುವುದು ಹಾಗೂ ಈ ಕಾರ್ಯಕ್ಕೆ ಸಾಂಸ್ಥಿಕ ರೂಪ ನೀಡುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಜಲ ಶಕ್ತಿ ಸಚಿವಾಲಯ ಮಂಗಳವಾರ ಹೇಳಿದೆ.</p>.<p>‘ಉತ್ತರದಾಯಿತ್ವ ನಿಗದಿ ಹಾಗೂ ಸ್ಥಳೀಯ ಆಡಳಿತವನ್ನು ಉತ್ತೇಜಿಸುವ ಮೂಲಕ ಈ ಯೋಜನೆ ಬಹುಕಾಲ ಉಳಿದುಕೊಳ್ಳುವಂತೆ ಮಾಡುವಲ್ಲಿ ಜಿಲ್ಲಾಡಳಿತಗಳ ಪಾತ್ರ ಮಹತ್ವದ್ದು’ ಎಂದು ಜಲ ಶಕ್ತಿ ಸಚಿವಾಲಯ ಕಾರ್ಯದರ್ಶಿ ಅಶೋಕ ಕೆ.ಕೆ.ಮೀನಾ ಹೇಳಿದರು.</p>.<p>ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು(ಡಿಡಿಡಬ್ಲುಎಸ್) ವರ್ಚುವಲ್ ವಿಧಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳೊಂದಿಗಿನ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಂದು ಜಿಲ್ಲೆಯೂ ತನ್ನ ವ್ಯಾಪ್ತಿಯಲ್ಲಿ ಎದುರಿಸುವ ಸಮಸ್ಯೆಗಳಿಗೆ ತನ್ನದೇ ಪರಿಹಾರ ಹೊಂದಿರುತ್ತದೆ. ಇಂತಹ ಸಮಸ್ಯೆಗಳನ್ನು ಹಾಗೂ ಪರಿಹಾರಗಳನ್ನು ಗುರುತಿಸುವುದು ಹಾಗೂ ಆ ಮಾದರಿಗಳನ್ನು ವಿವಿಧ ರಾಜ್ಯಗಳಿಗೆ ಸಂಬಂಧಿಸಿ ನೀತಿ ನಿರೂಪಣೆಯಲ್ಲಿ ಬಳಸಿಕೊಳ್ಳಲು ಈ ಸಂವಾದ ಸಹಕಾರಿ’ ಎಂದರು.</p>.<p>ಯೋಜನೆ ಅನುಷ್ಠಾನದಲ್ಲಿ ತಂತ್ರಜ್ಞಾನ ಅಳವಡಿಕೆ ಕುರಿತು ಜೆಜೆಎಂ ಜಂಟಿ ಕಾರ್ಯದರ್ಶಿ ಸ್ವಾತಿ ಮೀನಾ ನಾಯ್ಕ ಪ್ರಾತ್ಯಕ್ಷಿಕೆ ನೀಡಿದರು. ಯೋಜನೆಯ ನಿರ್ದೇಶಕ ಹಾಗೂ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕಮಲ್ಕಿಶೋರ್ ಸೋನ್ ಕೂಡ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ಗ್ರಾಮೀಣ ಪ್ರದೇಶಗಳಲ್ಲಿ ನಲ್ಲಿ ನೀರು ಪೂರೈಕೆ ಖಾತ್ರಿಪಡಿಸುವ ಜಲಜೀವನ ಮಿಷನ್ನ(ಜೆಜೆಎಂ) ಮುಂದಿನ ಹಂತದಲ್ಲಿ ಈ ಯೋಜನೆಯ ಮಾಲೀಕತ್ವವನ್ನು ಸಮುದಾಯಕ್ಕೆ ವಹಿಸಲಾಗುವುದು ಹಾಗೂ ಈ ಕಾರ್ಯಕ್ಕೆ ಸಾಂಸ್ಥಿಕ ರೂಪ ನೀಡುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಜಲ ಶಕ್ತಿ ಸಚಿವಾಲಯ ಮಂಗಳವಾರ ಹೇಳಿದೆ.</p>.<p>‘ಉತ್ತರದಾಯಿತ್ವ ನಿಗದಿ ಹಾಗೂ ಸ್ಥಳೀಯ ಆಡಳಿತವನ್ನು ಉತ್ತೇಜಿಸುವ ಮೂಲಕ ಈ ಯೋಜನೆ ಬಹುಕಾಲ ಉಳಿದುಕೊಳ್ಳುವಂತೆ ಮಾಡುವಲ್ಲಿ ಜಿಲ್ಲಾಡಳಿತಗಳ ಪಾತ್ರ ಮಹತ್ವದ್ದು’ ಎಂದು ಜಲ ಶಕ್ತಿ ಸಚಿವಾಲಯ ಕಾರ್ಯದರ್ಶಿ ಅಶೋಕ ಕೆ.ಕೆ.ಮೀನಾ ಹೇಳಿದರು.</p>.<p>ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು(ಡಿಡಿಡಬ್ಲುಎಸ್) ವರ್ಚುವಲ್ ವಿಧಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳೊಂದಿಗಿನ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಂದು ಜಿಲ್ಲೆಯೂ ತನ್ನ ವ್ಯಾಪ್ತಿಯಲ್ಲಿ ಎದುರಿಸುವ ಸಮಸ್ಯೆಗಳಿಗೆ ತನ್ನದೇ ಪರಿಹಾರ ಹೊಂದಿರುತ್ತದೆ. ಇಂತಹ ಸಮಸ್ಯೆಗಳನ್ನು ಹಾಗೂ ಪರಿಹಾರಗಳನ್ನು ಗುರುತಿಸುವುದು ಹಾಗೂ ಆ ಮಾದರಿಗಳನ್ನು ವಿವಿಧ ರಾಜ್ಯಗಳಿಗೆ ಸಂಬಂಧಿಸಿ ನೀತಿ ನಿರೂಪಣೆಯಲ್ಲಿ ಬಳಸಿಕೊಳ್ಳಲು ಈ ಸಂವಾದ ಸಹಕಾರಿ’ ಎಂದರು.</p>.<p>ಯೋಜನೆ ಅನುಷ್ಠಾನದಲ್ಲಿ ತಂತ್ರಜ್ಞಾನ ಅಳವಡಿಕೆ ಕುರಿತು ಜೆಜೆಎಂ ಜಂಟಿ ಕಾರ್ಯದರ್ಶಿ ಸ್ವಾತಿ ಮೀನಾ ನಾಯ್ಕ ಪ್ರಾತ್ಯಕ್ಷಿಕೆ ನೀಡಿದರು. ಯೋಜನೆಯ ನಿರ್ದೇಶಕ ಹಾಗೂ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕಮಲ್ಕಿಶೋರ್ ಸೋನ್ ಕೂಡ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>