<p><strong>ರಾಯಪುರ</strong>: ಹಿಂದಿ ಭಾಷೆಯಲ್ಲಿನ ಸಾಹಿತ್ಯ ಸೃಜನೆಗೆ ‘ಜ್ಞಾನಪೀಠ ಪ್ರಶಸ್ತಿ’ ಪಡೆದಿದ್ದ ಛತ್ತೀಸಗಢದ ಹಿರಿಯ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.</p><p>ವಯೋಸಹಜ ಕಾಯಿಲೆಗಳು ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ರಾಯಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p><p>ನಾಳೆ ಸಂಜೆ ರಾಯಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಶುಕ್ಲಾ ಅವರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.</p><p>ಕಳೆದ ನವೆಂಬರ್ 2 ರಂದು ವಿನೋದ್ ಕುಮಾರ್ ಶುಕ್ಲಾ 59 ನೇ ಜ್ಞಾನಪೀಠ ಪ್ರಶಸ್ತಿ ಸ್ವೀಕರಿಸಿದ್ದರು. ಹಿಂದಿಯ ಪ್ರಮುಖ ಸಾಹಿತಿಯಾಗಿದ್ದ ಶುಕ್ಲಾ ಅವರು ಜ್ಞಾನಪೀಠ ಪ್ರಶಸ್ತಿ ಪಡೆದ ಛತ್ತೀಸಗಢ ರಾಜ್ಯದ ಮೊದಲ ಸಾಹಿತಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು.</p><p>‘ನೌಕರ್ ಕಿ ಕಮೀಜ್’, ‘ಕಿಲೇಗಾ ತೊ ದೇಖೆಗಾ’ ಸೇರಿದಂತೆ ಅನೇಕ ಮಹತ್ವದ ಕೃತಿಗಳನ್ನು ರಚಿಸಿದ್ದರು. ‘ನೌಕರ್ ಕಿ ಕಮೀಜ್’ ಕೃತಿ ಆಧರಿಸಿ ಅದೇ ಹೆಸರಿಲ್ಲಿ ಹಿಂದಿ ಭಾಷೆಯಲ್ಲಿ ಸಿನಿಮಾ ಸಹ (1999) ಬಂದಿತ್ತು.</p>.ಸೆಷನ್ ಮುಗಿಸಿ ಬಂದಿದ್ದ ‘ಇಂದು ಸಂಜೆ’ ವರದಿಗಾರ ದೊಡ್ಡಬೊಮಯ್ಯ ಹೃದಯಾಘಾತದಿಂದ ನಿಧನ.ಮಲಯಾಳ ಹಿರಿಯ ನಟ, ನಿರ್ಮಾಪಕ ಶ್ರೀನಿವಾಸನ್ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಹಿಂದಿ ಭಾಷೆಯಲ್ಲಿನ ಸಾಹಿತ್ಯ ಸೃಜನೆಗೆ ‘ಜ್ಞಾನಪೀಠ ಪ್ರಶಸ್ತಿ’ ಪಡೆದಿದ್ದ ಛತ್ತೀಸಗಢದ ಹಿರಿಯ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.</p><p>ವಯೋಸಹಜ ಕಾಯಿಲೆಗಳು ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ರಾಯಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p><p>ನಾಳೆ ಸಂಜೆ ರಾಯಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಶುಕ್ಲಾ ಅವರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.</p><p>ಕಳೆದ ನವೆಂಬರ್ 2 ರಂದು ವಿನೋದ್ ಕುಮಾರ್ ಶುಕ್ಲಾ 59 ನೇ ಜ್ಞಾನಪೀಠ ಪ್ರಶಸ್ತಿ ಸ್ವೀಕರಿಸಿದ್ದರು. ಹಿಂದಿಯ ಪ್ರಮುಖ ಸಾಹಿತಿಯಾಗಿದ್ದ ಶುಕ್ಲಾ ಅವರು ಜ್ಞಾನಪೀಠ ಪ್ರಶಸ್ತಿ ಪಡೆದ ಛತ್ತೀಸಗಢ ರಾಜ್ಯದ ಮೊದಲ ಸಾಹಿತಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು.</p><p>‘ನೌಕರ್ ಕಿ ಕಮೀಜ್’, ‘ಕಿಲೇಗಾ ತೊ ದೇಖೆಗಾ’ ಸೇರಿದಂತೆ ಅನೇಕ ಮಹತ್ವದ ಕೃತಿಗಳನ್ನು ರಚಿಸಿದ್ದರು. ‘ನೌಕರ್ ಕಿ ಕಮೀಜ್’ ಕೃತಿ ಆಧರಿಸಿ ಅದೇ ಹೆಸರಿಲ್ಲಿ ಹಿಂದಿ ಭಾಷೆಯಲ್ಲಿ ಸಿನಿಮಾ ಸಹ (1999) ಬಂದಿತ್ತು.</p>.ಸೆಷನ್ ಮುಗಿಸಿ ಬಂದಿದ್ದ ‘ಇಂದು ಸಂಜೆ’ ವರದಿಗಾರ ದೊಡ್ಡಬೊಮಯ್ಯ ಹೃದಯಾಘಾತದಿಂದ ನಿಧನ.ಮಲಯಾಳ ಹಿರಿಯ ನಟ, ನಿರ್ಮಾಪಕ ಶ್ರೀನಿವಾಸನ್ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>