<p><strong>ನವದೆಹಲಿ</strong> : ‘ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಶುಲ್ಕ ಏರಿಕೆಗೆ ಸಂಬಂಧಿಸಿದ ಸಮಸ್ಯೆಯು ಈಗ ಇತ್ಯರ್ಥಗೊಂಡಿದೆ. ಪ್ರತಿಭಟನೆ ಮುಂದುವರಿಸುವ ವಿದ್ಯಾರ್ಥಿಗಳ ನಿಲುವು ಸಮರ್ಥನೀಯವಲ್ಲ’ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರತಿಪಾದಿಸಿದ್ದಾರೆ.</p>.<p>‘ವಿದ್ಯಾರ್ಥಿಗಳು ಮತ್ತು ಬೋಧಕರು ಸೇರಿದಂತೆ ಹಲವು ಸುತ್ತಿನ ಚರ್ಚೆಯ ಬಳಿಕ ಶುಲ್ಕ ಏರಿಕೆ ವಿಷಯ ಇತ್ಯರ್ಥಗೊಂಡಿದೆ. ಸೇವೆ ಮತ್ತು ಮೂಲಸೌಕರ್ಯ ಬಳಕೆ ಶುಲ್ಕ ಸಂಬಂಧಿತ ಮುಖ್ಯ ಬೇಡಿಕೆಯೂ ಬಗೆಹರಿದಿದೆ’ ಎಂದು ಸಚಿವರು ಹೇಳಿದರು.</p>.<p>‘ಸಹಾನುಭೂತಿಯಿಂದ ವರ್ತಿಸಿ’: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿರುವ ಬಗ್ಗೆ ಸಂಸದೀಯ ಸಮಿತಿಯು ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದು, ವಿದ್ಯಾರ್ಥಿಗಳೊಂದಿಗೆ ಸಹಾನುಭೂತಿಯಿಂದ, ಪ್ರಬುದ್ಧವಾಗಿ ವರ್ತಿಸಬೇಕು ಎಂದು ಸೂಚಿಸಿತು ಎಂದು ಮೂಲಗಳು ತಿಳಿಸಿವೆ.</p>.<p>ರಾಷ್ಟ್ರ ರಾಜಧಾನಿಯಲ್ಲಿ ಮೇಲಿಂದ ಮೇಲೆ ನಿರ್ಬಂಧಗಳನ್ನು ಹೇರುವುದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದೂ ಸಮಿತಿ ಹೇಳಿದೆ.</p>.<p><strong>ಆಯಿಷಿ ವಿಚಾರಣೆ:</strong> ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಜನವರಿ 5 ರಂದು ನಡೆದ ಹಿಂಸಾಚಾರ ಕುರಿತು ದೆಹಲಿ ಅಪರಾಧ ದಳದ ಪೊಲೀಸರ ತಂಡವೊಂದು ಸೋಮವಾರ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷಿ ಘೋಷ್ ಅವರನ್ನು ವಿಚಾರಣೆಗೊಳಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ‘ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಶುಲ್ಕ ಏರಿಕೆಗೆ ಸಂಬಂಧಿಸಿದ ಸಮಸ್ಯೆಯು ಈಗ ಇತ್ಯರ್ಥಗೊಂಡಿದೆ. ಪ್ರತಿಭಟನೆ ಮುಂದುವರಿಸುವ ವಿದ್ಯಾರ್ಥಿಗಳ ನಿಲುವು ಸಮರ್ಥನೀಯವಲ್ಲ’ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರತಿಪಾದಿಸಿದ್ದಾರೆ.</p>.<p>‘ವಿದ್ಯಾರ್ಥಿಗಳು ಮತ್ತು ಬೋಧಕರು ಸೇರಿದಂತೆ ಹಲವು ಸುತ್ತಿನ ಚರ್ಚೆಯ ಬಳಿಕ ಶುಲ್ಕ ಏರಿಕೆ ವಿಷಯ ಇತ್ಯರ್ಥಗೊಂಡಿದೆ. ಸೇವೆ ಮತ್ತು ಮೂಲಸೌಕರ್ಯ ಬಳಕೆ ಶುಲ್ಕ ಸಂಬಂಧಿತ ಮುಖ್ಯ ಬೇಡಿಕೆಯೂ ಬಗೆಹರಿದಿದೆ’ ಎಂದು ಸಚಿವರು ಹೇಳಿದರು.</p>.<p>‘ಸಹಾನುಭೂತಿಯಿಂದ ವರ್ತಿಸಿ’: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿರುವ ಬಗ್ಗೆ ಸಂಸದೀಯ ಸಮಿತಿಯು ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದು, ವಿದ್ಯಾರ್ಥಿಗಳೊಂದಿಗೆ ಸಹಾನುಭೂತಿಯಿಂದ, ಪ್ರಬುದ್ಧವಾಗಿ ವರ್ತಿಸಬೇಕು ಎಂದು ಸೂಚಿಸಿತು ಎಂದು ಮೂಲಗಳು ತಿಳಿಸಿವೆ.</p>.<p>ರಾಷ್ಟ್ರ ರಾಜಧಾನಿಯಲ್ಲಿ ಮೇಲಿಂದ ಮೇಲೆ ನಿರ್ಬಂಧಗಳನ್ನು ಹೇರುವುದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದೂ ಸಮಿತಿ ಹೇಳಿದೆ.</p>.<p><strong>ಆಯಿಷಿ ವಿಚಾರಣೆ:</strong> ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಜನವರಿ 5 ರಂದು ನಡೆದ ಹಿಂಸಾಚಾರ ಕುರಿತು ದೆಹಲಿ ಅಪರಾಧ ದಳದ ಪೊಲೀಸರ ತಂಡವೊಂದು ಸೋಮವಾರ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷಿ ಘೋಷ್ ಅವರನ್ನು ವಿಚಾರಣೆಗೊಳಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>