<p><strong>ನವದೆಹಲಿ</strong>: ಪ್ರಾದೇಶಿಕ ಹಾಗೂ ಸಂಸ್ಕೃತಿ ಆಧಾರದ ಮೇಲೆ ವಿದ್ಯಾರ್ಥಿನಿಲಯದಲ್ಲಿ ಮೀಸಲಾತಿ ನೀಡುವುದಿಲ್ಲ ಎಂದು ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು) ತಿಳಿಸಿದೆ.</p>.<p>ಹೊಸದಾಗಿ ಉದ್ಘಾಟನೆಗೊಂಡ ಬರಾಕ್ ವಿದ್ಯಾರ್ಥಿನಿಲಯದಲ್ಲಿ ಸೀಟುಗಳನ್ನು ಕಾಯ್ದಿರಿಸಬೇಕು ಎಂಬ ಬೇಡಿಕೆಗಳ ಮಧ್ಯೆ ಜೆಎನ್ಯು ಈ ಸ್ಪಷ್ಟನೆ ನೀಡಿದ್ದು, ಅಧಿಕೃತ ನಿರ್ದೇಶನಗಳಿಗೆ ಅನುಗುಣವಾಗಿ ಈಶಾನ್ಯ ಭಾರತದ ವಿದ್ಯಾರ್ಥಿಗಳಿಗೆ ಈ ಹಾಸ್ಟೆಲ್ನಲ್ಲಿ ಆದ್ಯತೆ ನೀಡಲಾಗಿದೆ ಎಂದಿದೆ.</p>.<p>ವಿದ್ಯಾರ್ಥಿನಿಲಯದಲ್ಲಿನ ಸೀಟುಗಳ ಹಂಚಿಕೆಯ ಪ್ರಕ್ರಿಯೆಯು ಏ. 8ರಿಂದ ಹಂತ ಹಂತವಾಗಿ ಆರಂಭಗೊಂಡಿದ್ದು, ಬರಾಕ್ ಹಾಸ್ಟೆಲ್ನಲ್ಲಿ ಈಶಾನ್ಯದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ವಿ.ವಿ. ತಿಳಿಸಿದೆ.</p>.<p>ಹೊಸ ಹಾಸ್ಟೆಲ್ ಸೇರಿದಂತೆ ವಿ.ವಿ.ಯ ಎಲ್ಲ ಹಾಸ್ಟೆಲ್ಗಳಲ್ಲೂ ಈಗಿರುವ ನೀತಿಯನ್ನೇ ಮುಂದುವರಿಸಲಾಗುವುದು ಎಂದಿದೆ.</p>.<p>ಬರಾಕ್ ವಿದ್ಯಾರ್ಥಿನಿಲಯದ ಶೇ 75ರಷ್ಟು ಸೀಟುಗಳನ್ನು ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿ ಈಶಾನ್ಯ ವಿದ್ಯಾರ್ಥಿಗಳ ವೇದಿಕೆ (ಎನ್ಇಎಸ್ಎಫ್) ಹಾಸ್ಟೆಲ್ ಉದ್ಘಾಟನೆ ಸಂದರ್ಭದಲ್ಲಿ ಮೌನ ಪ್ರತಿಭಟನೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಾದೇಶಿಕ ಹಾಗೂ ಸಂಸ್ಕೃತಿ ಆಧಾರದ ಮೇಲೆ ವಿದ್ಯಾರ್ಥಿನಿಲಯದಲ್ಲಿ ಮೀಸಲಾತಿ ನೀಡುವುದಿಲ್ಲ ಎಂದು ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು) ತಿಳಿಸಿದೆ.</p>.<p>ಹೊಸದಾಗಿ ಉದ್ಘಾಟನೆಗೊಂಡ ಬರಾಕ್ ವಿದ್ಯಾರ್ಥಿನಿಲಯದಲ್ಲಿ ಸೀಟುಗಳನ್ನು ಕಾಯ್ದಿರಿಸಬೇಕು ಎಂಬ ಬೇಡಿಕೆಗಳ ಮಧ್ಯೆ ಜೆಎನ್ಯು ಈ ಸ್ಪಷ್ಟನೆ ನೀಡಿದ್ದು, ಅಧಿಕೃತ ನಿರ್ದೇಶನಗಳಿಗೆ ಅನುಗುಣವಾಗಿ ಈಶಾನ್ಯ ಭಾರತದ ವಿದ್ಯಾರ್ಥಿಗಳಿಗೆ ಈ ಹಾಸ್ಟೆಲ್ನಲ್ಲಿ ಆದ್ಯತೆ ನೀಡಲಾಗಿದೆ ಎಂದಿದೆ.</p>.<p>ವಿದ್ಯಾರ್ಥಿನಿಲಯದಲ್ಲಿನ ಸೀಟುಗಳ ಹಂಚಿಕೆಯ ಪ್ರಕ್ರಿಯೆಯು ಏ. 8ರಿಂದ ಹಂತ ಹಂತವಾಗಿ ಆರಂಭಗೊಂಡಿದ್ದು, ಬರಾಕ್ ಹಾಸ್ಟೆಲ್ನಲ್ಲಿ ಈಶಾನ್ಯದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ವಿ.ವಿ. ತಿಳಿಸಿದೆ.</p>.<p>ಹೊಸ ಹಾಸ್ಟೆಲ್ ಸೇರಿದಂತೆ ವಿ.ವಿ.ಯ ಎಲ್ಲ ಹಾಸ್ಟೆಲ್ಗಳಲ್ಲೂ ಈಗಿರುವ ನೀತಿಯನ್ನೇ ಮುಂದುವರಿಸಲಾಗುವುದು ಎಂದಿದೆ.</p>.<p>ಬರಾಕ್ ವಿದ್ಯಾರ್ಥಿನಿಲಯದ ಶೇ 75ರಷ್ಟು ಸೀಟುಗಳನ್ನು ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿ ಈಶಾನ್ಯ ವಿದ್ಯಾರ್ಥಿಗಳ ವೇದಿಕೆ (ಎನ್ಇಎಸ್ಎಫ್) ಹಾಸ್ಟೆಲ್ ಉದ್ಘಾಟನೆ ಸಂದರ್ಭದಲ್ಲಿ ಮೌನ ಪ್ರತಿಭಟನೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>